Sirsi: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದು ಕಾಂಗ್ರೆಸ್ ಸರಕಾರದಿಂದ ಅಪರಾಧ: ಕಾಗೇರಿ
ಕಾಂಗ್ರೆಸ್ ರಾಜಕಾರಣ ದೇಶಕ್ಕೆ ಮಿತಿ ಮೀರಿ ಅಪಾಯವಾಗುವ ಸಾಧ್ಯವಿದೆ: ಸಂಸದ ವಿಶ್ವೇಶ್ವರ ಹೆಗಡೆ
Team Udayavani, Oct 13, 2024, 6:25 PM IST
ಶಿರಸಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ ವಿವಿಧ ಘಟನೆಗಳಲ್ಲಿನ ಆರೋಪಿಗಳ ಮೇಲಿನ ಪೊಲೀಸ್ ಪ್ರಕರಣ ವಾಪಸ್ ಪಡೆದು ರಾಜ್ಯ ಕಾಂಗ್ರೆಸ್ ಸರಕಾರ ಅಪರಾಧ ಮಾಡಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮತ ಬ್ಯಾಂಕ್ ಉಳಿಸಿಕೊಳ್ಳಲು ಮುಖ್ಯವಾಹಿನಿಗೆ ಅಲ್ಪ ಸಂಖ್ಯಾತರು ಬಾರದಂತೆ ಮಾಡುವ ಜೊತೆಗೆ ಪ್ರತ್ಯೇಕತೆ ಭಾವನೆ ಬೆಳೆಸುತ್ತಿದೆ. ಕಾಂಗ್ರೆಸ್ ನ ಈ ಷಡ್ಯಂತ್ರಕ್ಕೆ ಅಲ್ಪ ಸಂಖ್ಯಾತರು ಬಲಿಯಾಗಬಾರದು. ಕಾಂಗ್ರೆಸ್ ರಾಜಕಾರಣ ದೇಶಕ್ಕೆ ಮಿತಿ ಮೀರಿ ಅಪಾಯವಾಗುವ ಸಾಧ್ಯವಿದೆ. ಹಿಂದುಗಳ ಬಗ್ಗೆ ಬೇರೆಯಾಗಿ, ಅಲ್ಪ ಸಂಖ್ಯಾತರ ಬಗ್ಗೆ ಮಾತನಾಡುವಾಗ ಇಡಿಯಾಗಿ ಮಾತನಾಡುತ್ತದೆ ಎಂದು ಆಕ್ಷೇಪಿಸಿದರು.
ರಾಜ್ಯದ ಕಾಂಗ್ರೆಸ್ ಸರಕಾರ 157 ಮಂದಿ ಮೇಲಿನ ದೊಂಬಿ, ಅಪರಾಧಿಗಳಿಗೆ ನಾವಿದ್ದೇವೆ ಎಂಬ ಸ್ಪಷ್ಟ ಸಂದೇಶ ನೀಡಿ ಪ್ರಕರಣ ವಾಪಸ್ ಪಡೆದಿದೆ. ರಾಷ್ಟ್ರ ದ್ರೋಹಿಗಳಿಗೆ ಪಾಕಿಸ್ತಾನ ಜಿಂದಾಬಾದ್ ಎಂದವರಿಗೆ, ಪೊಲೀಸರ ಜೀವಕ್ಕೇ ಕಂಟಕ ತಂದವರಿಗೂ ನೇರ ಬಲ ಕೊಟ್ಟಂತಾಗಿದೆ. ಕಾಂಗ್ರೆಸ್ ಗೆ ನ್ಯಾಯಾಂಗ, ಕಾನೂನು ಯಾವ ಅಂಶಕ್ಕೂ ಗಂಭೀರತೆ ಇಲ್ಲ. ಸಂವಿಧಾನದ ಬಗ್ಗೆ ಗೌರವ ಇಲ್ಲ. ಕಾಂಗ್ರೆಸ್ ದೇಶ ದ್ರೋಹಿಗಳಿಗೆ ಬಲ ನೀಡುವ ಹೀನ ಸ್ಥಿತಿಗೆ ಇಳಿದಿದೆ.
ಸರಕಾರವಿದೆ, ಆಡಳಿತ ಇಲ್ಲ. ಭ್ರಷ್ಟಾಚಾರ ಮಿತಿ ಮೀರಿದೆ, ಸರಕಾರೀಕರಣಗೊಳಿಸಿದೆ ಎಂದು ಜರಿದರು.
ಮುಡಾ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆಗಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಸ್ವಾರ್ಥಕ್ಕಾಗಿ ಅಧಿಕಾರ ಬಳಸಿಕೊಳ್ಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳು ಸರಿಯಾಗಿಲ್ಲ, ರಾಜ್ಯದ ಬೊಕ್ಕಸ ಬರಿದಾಗಿ ರಸ್ತೆಯ ಹೊಂಡ ತುಂಬಲೂ ಹಣವಿಲ್ಲದಂತೆ ಆಗಿದೆ. ಅತಿ ಮಳೆಗೆ ಎಲ್ಲೆಡೆ ಹಾನಿಯಾಗಿದ್ದರೂ ಒಂದು ರೂಪಾಯಿ ಪರಿಹಾರ ಇಲ್ಲ, ಅಭಿವೃದ್ಧಿ, ಮನೆ ಬಿದ್ದವರಿಗೂ ನೆರವಿಲ್ಲ ಎಂದು ಹೇಳಿದರು.
ಈ ವೇಳೆ ವಕ್ತಾರ ಸದಾನಂದ ಭಟ್ಟ, ನಗರಸಭೆ ಅಧ್ಯಕ್ಷೆ ಶರ್ಮಿಲಾ ಮಾದನಗೇರಿ, ನಾಗರಾಜ ನಾಯ್ಕ, ಶ್ರೀಕಾಂತ ನಾಯ್ಕ, ಆನಂದ ಸಾಲೇರ, ರಮಾಕಾಂತ ಭಟ್ಟ, ನಂದನ ಸಾಗರ, ರವಿ ಶೆಟ್ಟಿ, ಮಂಜುನಾಥ ಭಂಡಾರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhatkala: ತೆರೆಗಳ ಹೊಡೆತಕ್ಕೆ ಸಿಲುಕಿ ಮುಳುಗುತ್ತಿದ್ದ ಪ್ರವಾಸಿಗನ ರಕ್ಷಣೆ
Bhatkal: ತಿರುಪತಿಗೆ ನೇರ ರೈಲು ಸಂಪರ್ಕದಿಂದ ಜನರಿಗೆ ಅನುಕೂಲ: ಎಸ್.ಎಸ್. ಕಾಮತ್
ನವರಾತ್ರಿ ಉತ್ಸವದಲ್ಲಿ ಗಮನಸೆಳೆದ ಕಾಂತಾರ ಖ್ಯಾತಿಯ ಮಾನಸಿ ನೇತೃತ್ವದ ಸಾಂಸ್ಕೃತಿಕ ಕಾರ್ಯಕ್ರಮ
Forest: ಅರಣ್ಯ ಅತಿಕ್ರಮಣಕಾರರಿಗೆ ಹಕ್ಕುಪತ್ರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವ: ಸಚಿವ ಖಂಡ್ರೆ
Sirsi ವಿಜ್ಞಾನ ಪ್ರಶ್ನೆ ಪತ್ರಿಕೆಯ ರಚನೆಯಲ್ಲಿ ಸೂಕ್ತ ಬದಲಾವಣೆಗೆ ಮನವಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.