ಹದಿನಾರು ವರ್ಷದ ಹಿಂದಿನ ಕಳವು ಪ್ರಕರಣ: ನಾಗರಾಜ್‌ ಬಳೆಗಾರ್‌ಗೆ 5 ವರ್ಷ ಜೈಲು


Team Udayavani, Mar 5, 2022, 7:35 AM IST

ಹದಿನಾರು ವರ್ಷದ ಹಿಂದಿನ ಕಳವು ಪ್ರಕರಣ: ನಾಗರಾಜ್‌ ಬಳೆಗಾರ್‌ಗೆ 5 ವರ್ಷ ಜೈಲು

ಸಾಂದರ್ಭಿಕ ಚಿತ್ರ.

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕದಲ್ಲಿ ಮನೆಯೊಂದರಿಂದ ಅಪ್ರಾಪ್ತ ವಯಸ್ಕ ನೊಂದಿಗೆ ಚಿನ್ನಾಭರಣ ಕಳವು ಮಾಡಿದ 16 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ನಾಗರಾಜ್‌ ಬಳೆಗಾರನಿಗೆ ಪುತ್ತೂರು ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶ ರಮೇಶ್‌ ಎಂ. ಅವರನ್ನೊಳಗೊಂಡ ಪೀಠ 5 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆರೋಪಿ ವಿರುದ್ಧ ತೀರ್ಪು ನೀಡಿದೆ.

2006ರ ಮಾ. 14ರಂದು ಆರೋಪಿ ಸುರತ್ಕಲ್‌ ಸಮೀಪದ ವಿದ್ಯಾನಗರ ನಿವಾಸಿಯಾಗಿದ್ದ ನಾಗರಾಜ್‌ ಬಳೆಗಾರ, ಬಾಲಕನ ಜತೆ ಸೇರಿ ಮೊಟ್ಟೆತ್ತಡ್ಕದ ಮಹೇಂದ್ರ ಕುಮಾರ್‌ ಅವರ ಮನೆಯಿಂದ ಚಿನ್ನಾಭರಣ ಕಳವು ಮಾಡಿದ್ದ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಬ್ಬರನ್ನು ಡಿಸಿಐಬಿ ನಿರೀಕ್ಷಕರಾಗಿದ್ದ ತಿಲಕ್‌ಚಂದ್ರ ಬಂಧಿಸಿದ್ದರು. ಈ ಪೈಕಿ ಬಾಲಕನನ್ನು ಬಾಲಾಪರಾಧಿಯ ಕಾರಣಕ್ಕಾಗಿ ಬಾಲ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗಿತ್ತು. ನಾಗರಾಜ್‌ ಜಾಮೀನು ಪಡೆದು ಬಿಡುಗಡೆ ಹೊಂದಿದ್ದ. ಈ ಪ್ರಕರಣದಲ್ಲಿ ನಾಗರಾಜನಿಗೆ ಸೆಕ್ಷನ್‌ 457ರಲ್ಲಿ 5 ವರ್ಷ ಮತ್ತು ಸೆಕ್ಷನ್‌ 380ರಲ್ಲಿ 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಾಸಿಕ್ಯೂಷನ್‌ ಪರ ಸಹಾಯಕ ಸರಕಾರಿ ಅಭಿಯೋಜಕಿ ಕವಿತಾ ವಾದಿಸಿದ್ದರು.

ನಾಗರಾಜನ ಮೇಲಿತ್ತು 25ಕ್ಕೂ ಅಧಿಕ ಕೇಸು
ನಾಗರಾಜ್‌ ಬಳೆಗಾರ್‌ ಯಾನೆ ಸತೀಶ್‌ (37) ಮೂಲತಃ ಬ್ರಹ್ಮಾವರದ ಬೈಕಾಡಿಯವ. ಈತನನ್ನು ಉಡುಪಿಗೆ ಕರೆತರುತ್ತಿದ್ದಾಗ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ. ಪೊಲೀಸ್‌ ಮೂಲಗಳ ಪ್ರಕಾರ ಈತ ಸುಮಾರು 3 ಬಾರಿ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ ಕುಖ್ಯಾತ ಆರೋಪಿ. 2013ರ ಅಕ್ಟೋಬರ್‌ನಲ್ಲಿ ಗೋವಾ ದಲ್ಲಿ ನಡೆದ ಕಳವು ಪ್ರಕರಣದಲ್ಲಿ ಪತ್ನಿಯ ಜತೆ ಗೋವಾ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ. ಅದಕ್ಕೂ ಮೊದಲು ಆತ ಉಡುಪಿಯ ಹಿರಿಯಡಕ ಸಬ್‌ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾಗ 2011ರ ಜ. 14ರಂದು ಉಡುಪಿಯ ರೌಡಿ ವಿನೋದ್‌ ಶೆಟ್ಟಿಗಾರ್‌ನನ್ನು ತನ್ನ ಅಣ್ಣ ಮುತ್ತಪ್ಪ ಮತ್ತು ಇತರ ಇಬ್ಬರ ಜತೆಗೂಡಿ ಜೈಲಿನೊಳಗೆ ಚೂರಿಯಿಂದ ಇರಿದು ಕೊಲೆಗೈದ ಆರೋಪಿಯಾಗಿದ್ದ. ನಾಗರಾಜನ ಪತ್ನಿಯೇ ಕೇಕ್‌ನೊಳಗೆ ಚೂರಿ ಇಟ್ಟು ಜೈಲಿನೊಳಗೆ ಅದನ್ನು ಕೊಟ್ಟು ಕೊಲೆಗೆ ಸಾಥ್‌ ಕೊಟ್ಟಿದ್ದಳು. ಆತನ ಮೇಲೆ ಕರ್ನಾಟಕ, ಕೇರಳ, ಗೋವಾ ರಾಜ್ಯ ಸಹಿತ ಇತರೆಡೆಯ ಠಾಣೆಗಳಲ್ಲಿ 25ಕ್ಕೂ ಅಧಿಕ ಕ್ರಿಮಿನಲ್‌ ಪ್ರಕರಣಗಳಿವೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.