Uttara Kannada ಕ್ಷೇತ್ರದ ರೈಲ್ವೆ ಯೋಜನೆಗಳ ಶೀಘ್ರ ಅನುಷ್ಠಾನಗೊಳಿಸಿ: ಸಂಸದ ಕಾಗೇರಿ
ಕುಮಟಾ, ಗೋಕರ್ಣ ರೈಲ್ವೆ ನಿಲ್ದಾಣದಲ್ಲಿ ಎರಡನೇ ಪ್ಲಾಟ್ಫಾರ್ಮ್ ನಿರ್ಮಿಸಿ: ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣಗೆ ಮನವಿ
Team Udayavani, Aug 2, 2024, 7:00 PM IST
ಶಿರಸಿ (ಉತ್ತರಕನ್ನಡ ಜಿಲ್ಲೆ): ಬಹು ವರ್ಷಗಳಿಂದ ಬೇಡಿಕೆಯಾಗಿರುವ ಅನೇಕ ರೈಲ್ವೆ ಮಾರ್ಗಗಳ ಅನುಷ್ಠಾನ, ಹೊಸ ರೈಲುಗಳ ಆರಂಭ, ವಿಶೇಷ ನಿಲ್ದಾಣಗಳಿಗೆ ಸಂಬಂಧಿಸಿ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣರಲ್ಲಿ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿ ಮನವಿ ಸಲ್ಲಿಸಿದರು.
ಹೊಸದಿಲ್ಲಿಯಲ್ಲಿ ಶುಕ್ರವಾರ ಕೇಂದ್ರ ಸಚಿವರ ಭೇಟಿಯಾದ ಸಂಸದ ಕಾಗೇರಿ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಹು ಬೇಡಿಕೆಯಾದ ಹುಬ್ಬಳ್ಳಿ-ಅಂಕೋಲಾ, ತಾಳಗುಪ್ಪ- ಶಿರಸಿ – ಹುಬ್ಬಳ್ಳಿ, ತಾಳಗುಪ್ಪ- ಹೊನ್ನಾವರ, ಬೆಳಗಾವಿ -ಕಿತ್ತೂರು- ಹುಬ್ಬಳ್ಳಿ ರೈಲ್ವೆ ಯೋಜನೆಗಳ ಶೀಘ್ರವಾಗಿ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.
ಹೊಸ ರೈಲುಗಳಾದ ವಾಸ್ಕೋ- ಬೆಳಗಾವಿ- ಮೀರಜ್ ಪ್ಯಾಸೆಂಜರ್ ರೈಲ್ವೆ, ಕ್ಯಾಸಲ್ ರಾಕ್- ಮೀರಜ್- ಕ್ಯಾಸಲ್ ರಾಕ್ ಮಾರ್ಗದಲ್ಲಿ ಪ್ರಾರಂಭಿಸಲು ವಿನಂತಿಸಿದ ಕಾಗೇರಿ, ಇತರ ಬೇಡಿಕೆಗಳಾದ ಕುಮಟಾ ಮತ್ತು ಗೋಕರ್ಣ ರೈಲ್ವೆ ನಿಲ್ದಾಣದಲ್ಲಿ ಎರಡನೇ ಪ್ಲಾಟ್ಫಾ ರ್ಮ್ ನಿರ್ಮಾಣ, ಕೊಂಕಣ ರೈಲ್ವೆಯಲ್ಲಿ ಸಂಚರಿಸುವ ರೈಲುಗಳಲ್ಲಿ ಉತ್ತರ ಕನ್ನಡದ ಪ್ರಯಾಣಿಕರಿಗೆ ಹೆಚ್ಚಿನ ಮುಂಗಡ ಟಿಕೆಟ್ ಕಾಯ್ದಿರಿಸುವಿಕೆಗೆ ಅವಕಾಶ ಕಲ್ಪಿಸುವಿಕೆ, ಕೆಲವು ಸ್ಥಳಗಳಲ್ಲಿ ಮೇಲ್ಸೇತುವೆ ಮತ್ತು ಅಂಡರ್ ಪಾಸ್ಗಳ ನಿರ್ಮಿಸುವಂತೆ ಸಂಸದರು ಸಚಿವರಲ್ಲಿ ಮನವಿ ಮಾಡಿದರು.
ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ರೈಲ್ವೆ ರಾಜ್ಯ ಸಚಿವ ಸೋಮಣ್ಣ, ಶೀಘ್ರದಲ್ಲಿ ಈ ಎಲ್ಲಾ ಕಾಮಗಾರಿಗಳ ಅನುಷ್ಠಾನಗೊಳಿಸಲು ವಿಶೇಷ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.