ಇನ್ಮುಂದೆ ವೀರ್ಯ ದಾನ ಮಾಡಬೇಡಿ…500ಕ್ಕೂ ಹೆಚ್ಚು ಮಕ್ಕಳಿಗೆ ತಂದೆ: ಕೋರ್ಟ್‌ ಹೇಳಿದ್ದೇನು?


Team Udayavani, Apr 29, 2023, 2:52 PM IST

ಇನ್ಮುಂದೆ ವೀರ್ಯ ದಾನ ಮಾಡಬೇಡಿ…500ಕ್ಕೂ ಹೆಚ್ಚು ಮಕ್ಕಳಿಗೆ ತಂದೆ: ಕೋರ್ಟ್‌ ಹೇಳಿದ್ದೇನು?

ನೆದರ್ಲ್ಯಾಂಡ್ಸ್:‌ ವೀರ್ಯ ದಾನದ ಮೂಲಕ 550ಕ್ಕೂ ಹೆಚ್ಚು ಮಕ್ಕಳಿಗೆ ತಂದೆ ಎಂದು ಶಂಕಿಸಲಾಗಿರುವ ವ್ಯಕ್ತಿಗೆ ಇನ್ಮುಂದೆ ವೀರ್ಯ ದಾನ ಮಾಡದಂತೆ ನೆದರ್ಲ್ಯಾಂಡ್ಸ್‌ ಕೋರ್ಟ್‌ ನಿರ್ಬಂಧ ಹೇರಿರುವ ಪ್ರಕರಣ ವರದಿಯಾಗಿದೆ.

ಇದನ್ನೂ ಓದಿ:UP;ದರೋಡೆಕೋರ-ರಾಜಕಾರಣಿ ಮುಖ್ತಾರ್ ಅನ್ಸಾರಿಗೆ 10 ವರ್ಷ ಜೈಲು

41ವರ್ಷದ ಜೋನಾಥನ್‌ ಜಾಕೋಬ್‌ ಮೈಜರ್‌ ಒಂದು ವೇಳೆ ಕೋರ್ಟ್‌ ಆದೇಶ ಉಲ್ಲಂಘಿಸಿ ವೀರ್ಯದಾನ ಮಾಡಿದಲ್ಲಿ 1,00,000 ಯುರೋಗಳಷ್ಟು(ಅಂದಾಜು 90,41,657) ದಂಡ ವಿಧಿಸುವ ಸಾಧ್ಯತೆ ಇದ್ದಿರುವುದಾಗಿ ಬಿಬಿಸಿ ವರದಿ ತಿಳಿಸಿದೆ.

ಮಗುವಿನ ತಾಯಿಯೊಬ್ಬರು ಫೌಂಡೇಶನ್‌ ಮೂಲಕ ಹೇಗ್‌ ನ ಕೋರ್ಟ್‌ ನಲ್ಲಿ ದಾವೆ ಹೂಡಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಈ ಹಿಂದೆ ತನ್ನ ವೀರ್ಯದಾನದಿಂದ ಜನಿಸಿರುವ ಮಕ್ಕಳ ಸಂಖ್ಯೆಯ ಕುರಿತು ಮಕ್ಕಳಾಗುವ ನಿರೀಕ್ಷೆಯಲ್ಲಿರುವ ಪೋಷಕರಿಗೆ ಈ ವ್ಯಕ್ತಿ ತಪ್ಪು ಮಾಹಿತಿ ನೀಡಿರುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.

ಇನ್ಮುಂದೆ ಜೋನಾಥನ್‌ ಯಾವುದೇ ಕಾರಣಕ್ಕೂ ವೀರ್ಯ ದಾನ ಮಾಡುವುದಾಗಿ ಮಕ್ಕಳನ್ನು ಪಡೆಯುವ ನಿರೀಕ್ಷೆಯಲ್ಲಿರುವ ಪೋಷಕರ ಬಳಿ ಇಚ್ಛೆ ವ್ಯಕ್ತಪಡಿಸುವುದಾಗಲಿ ಅಥವಾ ಸಂಪರ್ಕಿಸುವುದಾಗಲಿ ಮಾಡುವಂತಿಲ್ಲ ಎಂದು ಕೋರ್ಟ್‌ ನಿರ್ದೇಶನ ನೀಡಿದೆ.

ಜೋನಾಥನ್‌ ನೆದರ್ಲ್ಯಾಂಡ್ಸ್‌ ನ 13 ಕ್ಲಿನಿಕ್ಸ್‌ ಗಳಲ್ಲಿ ವೀರ್ಯ ದಾನ ಮಾಡಿರುವುದಾಗಿ ವರದಿ ತಿಳಿಸಿದೆ. ಡಚ್‌ ವೈದ್ಯಕೀಯ ನಿಯಮಾನುಸಾರ, ವೀರ್ಯ ದಾನಿಗಳು 12ಕ್ಕಿಂತ ಹೆಚ್ಚು ಮಹಿಳೆಯರಿಗೆ ವೀರ್ಯ ದಾನ ಮಾಡುವಂತಿಲ್ಲ ಅಥವಾ 25 ಮಕ್ಕಳಿಗಿಂತ ಹೆಚ್ಚು ಮಕ್ಕಳಿಗೆ ತಂದೆಯಾಗುವಂತಿಲ್ಲ. ವೀರ್ಯದಾನದ ಮೂಲಕ ನೂರಾರು ಮಕ್ಕಳಿಗೆ ತಂದೆಯಾದರೆ, ನಮಗೆ ನೂರಾರು ಮಂದಿ ಒಡಹುಟ್ಟಿದವರು ಇದ್ದಾರೆ ಎಂಬ ವಿಷಯ ಮಕ್ಕಳಲ್ಲಿ ಮಾನಸಿಕ ಆಘಾತಕ್ಕೊಳಗಾಗುವ ಸಾಧ್ಯತೆ ಇದೆ. ಆ ನಿಟ್ಟಿನಲ್ಲಿ ನೂರಾರು ಮಹಿಳೆಯರಿಗೆ ವೀರ್ಯ ದಾನ ಮಾಡುವುದನ್ನು ತಡೆಯಬೇಕಾಗಿದೆ ಎಂದು ಕೋರ್ಟ್‌ ತಿಳಿಸಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.