![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 23, 2021, 11:49 PM IST
ಕೊಲಂಬೊ : ಬಹುತೇಕ ಹೊಸಬರಿಂದಲೇ ಕೂಡಿದ ಭಾರತ, ಆತಿಥೇಯ ಶ್ರೀಲಂಕಾ ಎದುರಿನ ಅಂತಿಮ ಏಕದಿನ ಪಂದ್ಯದಲ್ಲಿ 3 ವಿಕೆಟ್ಗಳ ಸೋಲನುಭವಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಭಾರತ 43.1 ಓವರ್ಗಳಲ್ಲಿ 225 ರನ್ನುಗಳ ಸಾಮಾನ್ಯ ಮೊತ್ತಕ್ಕೆ ಕುಸಿಯಿತು. ಗುರಿ ಬೆನ್ನತ್ತಿದ ಶ್ರೀಲಂಕಾ ಭನುಕ ರಾಜಪಕ್ಷೆ 65, ಆರಂಭಕಾರ ಆವಿಷ್ಕ ಫೆರ್ನಾಂಡೊ 76 ರನ್ಗಳ ಜವಾಬ್ದಾರಿಯುತ ಬ್ಯಾಟಿಂಗ್ನಿಂದ 39 ಓವರ್ಗಳಲ್ಲಿ 7 ವಿಕೆಟ್ನಷ್ಟಕ್ಕೆ 227ರನ್ ಪೇರಿಸಿ ಗೆಲುವಿನ ನಗೆ ಬೀರಿತು. ಲಂಕಾ ಈ ಗೆಲುವಿನೊಂದಿಗೆ ತವರಿನಲ್ಲಿ ವೈಟ್ವಾಶ್ ಮುಖಭಂಗದಿಂದ ಪಾರಾಯಿತು.
ಮಳೆಯಿಂದಾಗಿ ಓವರ್ ಸಂಖ್ಯೆಯನ್ನು 47ಕ್ಕೆ ಇಳಿಸಲಾಗಿತ್ತು.
ಈಗಾಗಲೇ ಸರಣಿ ವಶಪಡಿಸಿಕೊಂಡ ಕಾರಣ ಕೋಚ್ ರಾಹುಲ್ ದ್ರಾವಿಡ್ ಭರ್ಜರಿ ಪ್ರಯೋಗಕ್ಕಿಳಿದರು. ಮೊದಲೆರಡು ಪಂದ್ಯಗಳಲ್ಲಿ ಅವಕಾಶ ಪಡೆಯದ ಹೊಸಬರನ್ನು ಭಾರೀ ನಂಬಿಕೆಯೊಂದಿಗೆ ಕಣಕ್ಕಿಳಿಸಿದರು. ಮುಖ್ಯವಾಗಿ ಬೌಲಿಂಗ್ ವಿಭಾಗದಲ್ಲಿ ಹೊಸಬರ ದಂಡೇ ಕಂಡುಬಂತು.
ಭಾರತದ ಓಪನಿಂಗ್ನಲ್ಲಿ ಯಾವುದೇ ಬದಲಾವಣೆ ಕಂಡುಬರಲಿಲ್ಲ. ನಾಯಕ ಶಿಖರ್ ಧವನ್ ಜತೆಗೆ ಪೃಥ್ವಿ ಶಾ ಅವರೇ ಇನ್ನಿಂಗ್ಸ್ ಆರಂಭಿಸಿದರು. ಎಸೆತಕ್ಕೊಂದರಂತೆ 49 ರನ್ ಮಾಡಿದ ಶಾ ಅವರದೇ ಭಾರತದ ಸರದಿಯ ಗರಿಷ್ಠ ಗಳಿಕೆ (8 ಬೌಂಡರಿ). ವನ್ಡೌನ್ನಲ್ಲಿ ಬಂದ ಸಂಜು ಸ್ಯಾಮ್ಸನ್ ಕೂಡ ಎಸೆತಕ್ಕೆ ಒಂದರಂತೆ 46 ರನ್ ಹೊಡೆದರು (5 ಬೌಂಡರಿ, 1 ಸಿಕ್ಸರ್). ಇವರಿಬ್ಬರಿಂದ ದ್ವಿತೀಯ ವಿಕೆಟಿಗೆ 74 ರನ್ ಒಟ್ಟುಗೂಡಿತು. 13 ರನ್ ಮಾಡಿದ ಧವನ್ ವಿಕೆಟ್ 3ನೇ ಓವರಿನಲ್ಲಿ ಉರುಳಿತು. ಆಗ ಸ್ಕೋರ್ ಕೇವಲ 28 ರನ್ ಆಗಿತ್ತು.
ಮನೀಷ್ ಪಾಂಡೆ ಮತ್ತೂಮ್ಮೆ ವೈಫಲ್ಯ ಅನುಭವಿಸಿದರು. ಇವರ ಗಳಿಕೆ ಕೇವಲ 11 ರನ್. ಮಧ್ಯಮ ಕ್ರಮಾಂಕದಲ್ಲಿ ಆಧಾರವಾದವರು ಸೂರ್ಯಕುಮಾರ್ ಯಾದವ್. 37 ಎಸೆತ ಎದುರಿಸಿದ ಸೂರ್ಯ 7 ಬೌಂಡರಿ ನೆರವಿನಿಂದ 40 ರನ್ ಮಾಡಿದರು. ಹಾರ್ದಿಕ್ ಪಾಂಡ್ಯ ಗಳಿಕೆ 19 ರನ್.
ಶ್ರೀಲಂಕಾ ಪರ ಎಡಗೈ ಸ್ಪಿನ್ನರ್ ಪ್ರವೀಣ್ ಜಯವಿಕ್ರಮ ಮತ್ತು ಆಫ್ಸ್ಪಿನ್ನರ್ ಅಖೀಲ ಧನಂಜಯ ತಲಾ 3 ವಿಕೆಟ್ ಉರುಳಿಸಿದರು.
ಸಂಕ್ಷಿಪ್ತ ಸ್ಕೋರ್: ಭಾರತ-43.1 ಓವರ್ಗಳಲ್ಲಿ 225. ಶ್ರೀಲಂಕಾ-39 ಓವರ್ಗಳಲ್ಲಿ 7 ವಿಕೆಟಿಗೆ 227.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.