SSLC Exam: ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆಯೂ ಸೋರಿಕೆ
ಬೆಳಗ್ಗೆ ಸಿಗಬೇಕಿದ್ದ ಪ್ರಶ್ನೆ ಪತ್ರಿಕೆ ರಾತ್ರಿಯೇ ಸಾಮಾಜಿಕ ಜಾಲತಾಣದಲ್ಲಿ ಪತ್ತೆ
Team Udayavani, Oct 1, 2024, 1:08 AM IST
ಬೆಂಗಳೂರು: ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಯುತ್ತಿರುವ ಮಧ್ಯ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಸರಪಣಿ ಮುಂದುವರಿದಿದೆ. ಸೋಮವಾರ ನಡೆದ ಸಮಾಜ ವಿಜ್ಞಾನ ಪರೀಕ್ಷೆಯ ಪ್ರಶ್ನೆ ಪತ್ರಿಕೆಯು ರವಿವಾರವೇ ಸೋರಿಕೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಸೆಪ್ಟೆಂಬರ್ 24ಕ್ಕೆ ಮಧ್ಯ ವಾರ್ಷಿಕ ಪರೀಕ್ಷೆ ಆರಂಭಗೊಂಡಾಗ ಮಂಡಳಿ ಕಳುಹಿಸುವ ಪ್ರಶ್ನೆ ಪತ್ರಿಕೆಯನ್ನು ಪರೀಕ್ಷೆಯ ಹಿಂದಿನ ದಿನವೇ ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ಔಟ್ ತೆಗೆಯುವ ಅವಕಾಶವನ್ನು ಮುಖ್ಯೋಪಾಧ್ಯಾಯರಿಗೆ ನೀಡಲಾಗಿತ್ತು.
ಆದರೆ ಪ್ರಶ್ನೆ ಪತ್ರಿಕೆಗಳು ಪರೀಕ್ಷೆಯ ಹಿಂದಿನ ದಿನವೇ ಜಾಲತಾಣಗಳಲ್ಲಿ ಹರಿದಾಡಿದ್ದರಿಂದ ಎಚ್ಚೆತ್ತುಕೊಂಡಿದ್ದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್ಇಎಬಿ)ಯು ಸೆಪ್ಟೆಂಬರ್ 27ಕ್ಕೆ ಸುತ್ತೋಲೆಯೊಂದನ್ನು ಹೊರಡಿಸಿ ಪರೀಕ್ಷೆ ನಡೆಯುವ ದಿನ ಬೆಳಗ್ಗೆ 6 ಗಂಟೆಗೆ ಶಾಲಾ ಮುಖ್ಯೋಪಾಧ್ಯಾಯರ ಲಾಗಿನ್ಗೆ ಪ್ರಶ್ನೆ ಪತ್ರಿಕೆ ಕಳುಹಿಸಲಾಗುವುದು, ಅವರು ಡೌನ್ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಪ್ರಶ್ನೆ ಪತ್ರಿಕೆ ಹಂಚಬೇಕು ಎಂದು ಸೂಚಿಸಲಾಗಿತ್ತು.
ಅದರಂತೆ ಶಾಲಾ ಮುಖ್ಯೋಪಾಧ್ಯಾಯರಿಗೆ ಸೋಮವಾರ ಬೆಳಗ್ಗೆ 6 ಗಂಟೆಗೆ ಸಿಗಬೇಕಿದ್ದ ಸಮಾಜ ವಿಜ್ಞಾನದ ಪ್ರಶ್ನೆ ಪತ್ರಿಕೆ ರವಿವಾರ ತಡರಾತ್ರಿಯೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇನ್ಸ್ಟಾಗ್ರಾಂ, ಯೂಟ್ಯೂಬ್ಗಳ ವಿವಿಧ ಖಾತೆಗಳಲ್ಲಿ ಪ್ರಶ್ನೆ ಪತ್ರಿಕೆ ಪ್ರಸಾರವಾಗಿದೆ ಹಾಗೆಯೇ ಹಲವು ವಿದ್ಯಾರ್ಥಿಗಳಿಗೆ ತಲುಪಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPS Officer: ಎಡಿಜಿಪಿ ಪರ ನಿಂತ ಗೃಹ ಸಚಿವ ಪರಮೇಶ್ವರ್
MUDA Case: ತಪ್ಪನ್ನು ಮುಚ್ಚಿ ಹಾಕಲು ಲೋಕಾಯುಕ್ತಕ್ಕೆ ಮನೀಶ್ ಖರ್ಬೀಕರ್ ನೇಮಕ
BJP Leader: ಯತ್ನಾಳ್ 1,200 ಕೋಟಿ ಹೇಳಿಕೆ ವರಿಷ್ಠರ ಗಮನಕ್ಕೆ: ಶಾಸಕ ಸುನಿಲ್
Work Pressure: ಗ್ರಾಮ ಆಡಳಿತಾಧಿಕಾರಿಗಳ ಕೆಲಸದ ಒತ್ತಡ ಕಡಿಮೆಗೆ ಕ್ರಮ: ಕೃಷ್ಣ ಬೈರೇಗೌಡ
Gandhi Jayanthi: ನಾಳೆ ಕಾಂಗ್ರೆಸ್ನಿಂದ ರಾಜ್ಯಾದ್ಯಂತ ಗಾಂಧಿ ನಡಿಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿಎಂಗೆ ರಾಜೀನಾಮೆಯ ಅನಿವಾರ್ಯತೆ ಸೃಷ್ಟಿಯಾಗಿದೆ: ಬಿ.ವೈ.ವಿಜಯೇಂದ್ರ
IPS Officer: ಎಡಿಜಿಪಿ ಪರ ನಿಂತ ಗೃಹ ಸಚಿವ ಪರಮೇಶ್ವರ್
MUDA Case: ತಪ್ಪನ್ನು ಮುಚ್ಚಿ ಹಾಕಲು ಲೋಕಾಯುಕ್ತಕ್ಕೆ ಮನೀಶ್ ಖರ್ಬೀಕರ್ ನೇಮಕ
Yeah, Yes; ಕೋರ್ಟ್ನಲ್ಲಿ ಯಾ.. ಅನ್ನಬೇಡಿ, ಎಸ್ ಅನ್ನಿ: ವಕೀಲರಿಗೆ ಸಿಜೆಐ ಕ್ಲಾಸ್!
BJP Leader: ಯತ್ನಾಳ್ 1,200 ಕೋಟಿ ಹೇಳಿಕೆ ವರಿಷ್ಠರ ಗಮನಕ್ಕೆ: ಶಾಸಕ ಸುನಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.