![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Oct 31, 2019, 10:16 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಈ ಬಾರಿ ಕರ್ನಾಟಕ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಕನ್ನಡದ ಧ್ವಜದ ಬದಲಿಗೆ ರಾಷ್ಟ್ರ ಧ್ವಜವನ್ನು ಹಾರಿಸುವಂತೆ ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಸಂಪ್ರದಾಯವನ್ನು ಬದಿಗೊತ್ತಿ ನಾಳೆ ಎಲ್ಲಾ ಸರಕಾರಿ ಕಾರ್ಯಕ್ರಮಗಳಲ್ಲಿ ರಾಜ್ಯದ ಅಧಿಕೃತ ಧ್ವಜದ ಬದಲಿಗೆ ತಿರಂಗಾ ಹಾರಾಡಲಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಈ ಸುತ್ತೋಲೆಯನ್ನು ಹೊರಡಿಸಿದ್ದು. ಧ್ವಜ ಸಂಹಿತೆಯ ಅಡಿಯಲ್ಲಿ ರಾಷ್ಟ್ರ ಧ್ವಜನ್ನು ಮಾತ್ರವೇ ಹಾರಿಸುವಂತೆ ರಾಜ್ಯ ಸರಕಾರದಿಂದ ಈ ಸೂಚನೆ ಹೊರಬಿದ್ದಿದೆ. ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ಶಿಕ್ಷಣ ಇಲಾಖೆಯೂ ಸಹ ಸುತ್ತೋಲೆ ಹೊರಡಿಸಿದೆ.
ಕರ್ನಾಟಕ ರಾಜ್ಯ ಏಕೀಕರಣಗೊಂಡ ನೆನಪಿಗಾಗಿ ಪ್ರತೀ ವರ್ಷ ನವಂಬರ್ 01ರಂದು ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ಸಂದರ್ಭದಲ್ಲಿ ರಾಜ್ಯಾದ್ಯಂತ ಈ ದಿವಸ ಕನ್ನಡದ ಬಾವುಟ ಹಾರುತ್ತದೆ. ಆದರೆ ಈ ಸಂಪ್ರದಾಯಕ್ಕೆ ಯಡಿಯೂರಪ್ಪ ನೇತೃತ್ವದ ಭಾರತೀಯ ಜನತಾ ಪಕ್ಷ ಸರಕಾರ ಅಂತ್ಯ ಹಾಡುವ ಲಕ್ಷಣ ಈ ಬಾರಿ ಗೋಚರಿಸಿದೆ.
ರಾಜ್ಯ ಸರಕಾರದ ಈ ನಿರ್ಧಾರಕ್ಕೆ ಕನ್ನಡ ಪರ ಸಂಘಟನೆಗಳು ಮತ್ತು ಕನ್ನಡಿಗರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ. ರಾಷ್ಟ್ರ ಧ್ವಜಕ್ಕೆ ಚ್ಯುತಿ ಬರುವ ಹಿನ್ನಲೆಯಲ್ಲಿ ರಾಜ್ಯ ಸರಕಾರ ಈ ನಿರ್ಧಾರವನ್ನು ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.