ನಾವೀನ್ಯ ಶ್ರೇಯಾಂಕದಲ್ಲಿ ಮಿಂಚಿದ ರಾಜ್ಯದ ಸಂಸ್ಥೆಗಳು

6ನೇ ಸ್ಥಾನದಲ್ಲಿ ಬೆಂಗಳೂರಿನ ಐಐಎಸ್‌ಸಿ | ಖಾಸಗಿ ಕಾಲೇಜುಗಳಲ್ಲಿ ಎನ್‌ಎಮ್‌ಐಟಿ ಮತ್ತು ಎಸ್‌ಕೆಐಟಿಗೆ ಸ್ಥಾನ

Team Udayavani, Dec 30, 2021, 6:50 AM IST

ನಾವೀನ್ಯ ಶ್ರೇಯಾಂಕದಲ್ಲಿ ಮಿಂಚಿದ ರಾಜ್ಯದ ಸಂಸ್ಥೆಗಳು

ಹೊಸದಿಲ್ಲಿ: ದೇಶದ ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ನಾವೀನ್ಯತೆ (ಇನೋ ವೇಷನ್‌) ಮತ್ತು ಉದ್ಯಮಶೀಲತೆ ಅಭಿವೃದ್ಧಿಗೆ ಸಹಕಾರದ ಆಧಾರದ ಮೇಲೆ ಅಟಲ್‌ ಇನೋವೇಷನ್‌ ರ್‍ಯಾಂಕಿಂಗ್‌ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗುವ ಈ ರ್‍ಯಾಂಕಿಂಗ್‌ ಪಟ್ಟಿಯ ಕೇಂದ್ರೀಯ ಶಿಕ್ಷಣ ಸಂಸ್ಥೆಗಳ ಪೈಕಿ ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಸೈನ್ಸ್‌ ಆರನೇ ರ್‍ಯಾಂಕ್‌ ಪಡೆದುಕೊಂಡಿದೆ. ಕೇಂದ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ನಾವೀನ್ಯತೆ ಗೆ ಐಐಟಿ ಮದ್ರಾಸ್‌ ಮೊದಲ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ಟಾಪ್‌ 10ರಲ್ಲಿ ಐಐಟಿ ಬಾಂಬೆ, ದೆಹಲಿ, ಕಾನ್ಪುರವೂ ಸ್ಥಾನ ಪಡೆದಿವೆ. ಬ್ಯಾಂಡ್‌ ಎಕ್ಸಲೆಂಟ್‌ ವಿಭಾಗದಲ್ಲಿ ಸುರತ್ಕಲ್‌ನಲ್ಲಿರುವ ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ಸ್ಥಾನ ಪಡೆದಿದೆ. ಸರಕಾರಿ ಅಥವಾ ಸರಕಾರಿ ಸ್ವಾಮ್ಯದ ತಾಂತ್ರಿಕ ವಿಶ್ವವಿದ್ಯಾನಿಲಯಗಳ ಪೈಕಿ ಪಂಜಾಬ್‌ ಮೊದಲ ರ್‍ಯಾಂಕ್‌ ಪಡೆದು ಕೊಂಡಿದೆ. ಈ ವಿಭಾಗದ ಬ್ಯಾಂಡ್‌ ಪ್ರಾಮಿಸಿಂಗ್‌ ವಿಶ್ವವಿದ್ಯಾನಿಲಯಗಳಲ್ಲಿ ಬೆಳಗಾವಿಯ ವಿಶ್ವೇಶ್ವ ರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ(ವಿಟಿಯು) ಸ್ಥಾನ ಪಡೆದಿದೆ.

ಖಾಸಗಿ ವಿಶ್ವವಿದ್ಯಾನಿಲಯಗಳಿಗೆ ಪ್ರಶಸ್ತಿ: ಖಾಸಗಿ ವಿಶ್ವವಿದ್ಯಾನಿಲಯಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ ತಾಂತ್ರಿಕ ವಿಶ್ವವಿದ್ಯಾನಿಲಯವಾಗಿ ಒಡಿ ಶಾದ ಖೋರ್ದಾದ ಕಳಿಂಗ್‌ ಇನ್‌ಸ್ಟಿಟ್ಯೂಟ್‌ ಹೊರ ಹೊಮ್ಮಿದೆ. ವಿಭಾಗದ ಬ್ಯಾಂಡ್‌ ಪರ್ಫಾ ಮರ್‌ ಪಟ್ಟಿಯಲ್ಲಿ ಬಿಜಾಪುರದ ಬಿಎಲ್‌ಡಿಇ, ಬೆಂಗಳೂರಿನ ಎಂ.ಎಸ್‌.ರಾಮಯ್ಯ ವಿವಿ ಇದೆ. ಬ್ಯಾಂಡ್‌ ಪ್ರಾಮಿಸಿಂಗ್‌ ವಿವಿಗಳಲ್ಲಿ ಬೆಂಗಳೂರಿನ ದಯಾನಂದ ಸಾಗರ ಇನ್‌ಸ್ಟಿಟ್ಯೂಟ್‌, ಇಂಟರ್‌ ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್ ಇನ್‌ಫ‌ರ್ಮೇಶನ್‌ ಟೆಕ್ನಾಲಜಿ ಮತ್ತು ರೆಸಿಡೆನ್ಸಿ ವಿಶ್ವವಿದ್ಯಾನಿಲಯ ವಿದೆ. ಬ್ಯಾಂಡ್‌ ಬಿಗಿನರ್‌ ಆಗಿ ಮಂಗಳೂರಿನ ನಿಟ್ಟೆ ಇನ್‌ಸ್ಟಿಟ್ಯೂಟ್‌ ಆಫ್ ಆರ್ಕಿಟೆಕ್ಚರ್‌ ಹಾಗೂ ಕೋಲಾರದ ದೇವರಾಜ ಅರಸು ವಿವಿ ಹೊರಹೊಮ್ಮಿವೆ. .

ರಾಜ್ಯದ ಸಂಸ್ಥೆಗಳು: ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ತಾಂತ್ರಿಕ ಕಾಲೇಜುಗಳಲ್ಲಿ ನಾವೀನ್ಯತೆ ಗೆ ಪುಣೆಯ ಎಂಜಿನಿಯರಿಂಗ್‌ ಕಾಲೇಜು ಮೊದಲ ಸ್ಥಾನದಲ್ಲಿದೆ. ಅದರಲ್ಲಿ ಬ್ಯಾಂಡ್‌ ಪರ್ಫಾಮರ್‌ ಪಟ್ಟಿಗೆ ಬಾಗಲಕೋಟೆಯ ಬಸವೇಶ್ವರ ಇಂಜಿನಿಯರಿಂಗ್‌ ಕಾಲೇಜು, ಬೆಂಗಳೂರಿನ ಡಾ|ಅಂಬೇಡ್ಕರ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ, ಹಾಸನದ ಮಲಾ°ಡ್‌ ಕಾಲೇಜ್‌ ಆಫ್ ಇಂಜಿನಿಯರಿಂಗ್‌, ಮಂಡ್ಯದ ಪಿಇಎಸ್‌ ಕಾಲೇಜ್‌ ಆಫ್ ಎಂಜಿನಿಯರಿಂಗ್‌ ಸೇರಿವೆ. ಅದೇ ವಿಭಾಗದ ಬ್ಯಾಂಡ್‌ ಪ್ರಾಮಿಸಿಂಗ್‌ ಪಟ್ಟಿಯಲ್ಲಿ ಬೆಂಗಳೂರಿನ ಡಾ|ಅಂಬೇಡ್ಕರ್‌ ಇನ್‌ಸ್ಟಿಟ್ಯೂಟ್‌, ಜ್ಯೋತಿ ನಿವಾಸ ಕಾಲೇಜು, ರಾಜೀವ್‌ ಗಾಂಧಿ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ಮತ್ತು ಸರಕಾರಿ ಫಾರ್ಮಸಿ ಕಾಲೇಜು ಜತೆಯಲ್ಲಿ ಗುಲ್ಬರ್ಗದ ಪಿ.ಡಿ.ಎ ಎಂಜಿನಿಯರಿಂಗ್‌ ಕಾಲೇಜು ಸೇರಿವೆ. ವಿಭಾಗದ ಬ್ಯಾಂಡ್‌ ಬಿಗಿನರ್‌ ಕಾಲೇಜಲ್ಲಿ ನಾಗಮಂಗಲದ ಸರಕಾರಿ ಫ‌ಸ್ಟ್‌ ಗ್ರೇಡ್‌ ಕಾಲೇಜು, ಚಿತ್ರದುರ್ಗದ ಸರಕಾರಿ ವಿಜ್ಞಾನ ಕಾಲೇಜು ಕಾಣಿಸಿಕೊಂಡಿವೆ.

ನಾವೀನ್ಯತೆ  ಅಳವಡಿಸಿಕೊಂಡ ಖಾಸಗಿ ಕಾಲೇಜುಗಳಲ್ಲಿ ಬೆಂಗಳೂರಿನ ಶ್ರೀ ಕೃಷ್ಣ ಇಂಜಿನಿಯರಿಂಗ್‌ ಅಂಡ್‌ ಟೆಕ್ನಾಲಜಿ ಕಾಲೇಜಿಗೆ ನಾಲ್ಕನೇ ರ್‍ಯಾಂಕ್‌ ಹಾಗೂ ಬೆಂಗಳೂರಿನ ನಿಟ್ಟೆ ಮೀನಾಕ್ಷಿ ಕಾಲೇಜಿಗೆ 5ನೇ ರ್‍ಯಾಂಕ್‌ ಸಿಕ್ಕಿದೆ. ಉಳಿದಂತೆ ಈ ವಿಭಾಗದ ಬ್ಯಾಂಡ್‌ ಎಕ್ಸಲೆಂಟ್‌, ಬ್ಯಾಂಡ್‌ ಪ್ರಾಮಿಸಿಂಗ್‌, ಬ್ಯಾಂಡ್‌ ಬಿಗಿನರ್‌, ಬ್ಯಾಂಡ್‌ ಪರ್ಫಾಮರ್‌ ಪಟ್ಟಿಯಲ್ಲಿ ಕರ್ನಾಟಕದ ಹಲವು ಕಾಲೇಜುಗಳಿವೆ.

 

ಟಾಪ್ ನ್ಯೂಸ್

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.