ಕಠಿನ ಲಾಕ್‌ಡೌನ್‌ : ಪಡಿತರ ತರಲು ಗ್ರಾಮಾಂತರ ಭಾಗದ ಜನರ ಪ್ರಯಾಸ


Team Udayavani, May 11, 2021, 6:45 AM IST

ಕಠಿನ ಲಾಕ್‌ಡೌನ್‌ : ಪಡಿತರ ತರಲು ಗ್ರಾಮಾಂತರ ಭಾಗದ ಜನರ ಪ್ರಯಾಸ

ಕುಂದಾಪುರ: ಕಠಿನ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಾಹನಗಳ ಓಡಾಟಕ್ಕೆ ನಿರ್ಬಂಧ ಹಾಕಿದ್ದರಿಂದ ಗ್ರಾಮಾಂತರ ಭಾಗದಲ್ಲಿ ಪಡಿತರ ತರಲು, ಹಾಲಿನ ಡೈರಿಗೆ ಹೋಗಲು ಜನ ಪ್ರಯಾಸ ಪಡುವಂತಾಗಿದೆ. ವಾಹನಗಳಲ್ಲಿ ಹೋಗಲು ತಡೆಯೊಡ್ಡಿದ್ದರಿಂದ ಹತ್ತಾರು ಕಿ.ಮೀ. ನಡೆದುಕೊಂಡೇ ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಕುಂದಾಪುರದ ಅಮಾಸೆಬೈಲಿನ ಕೆಲಾ ಪರಿಸರದ ಜನ ಹಾಲಿನ ಡೈರಿಗೆ ಹೋಗಿ ಬರಲು ಒಟ್ಟಾರೆ 8 ಕಿ.ಮೀ. ನಡೆಯಬೇಕಾಗಿದೆ. ಇನ್ನು ಪಡಿತರ ತರಬೇಕಾದರೆ 16-18 ಕಿ.ಮೀ. ದೂರ ಕ್ರಮಿಸಬೇಕು. ಇಷ್ಟು ದೂರ ಬೆಳಗ್ಗೆ 6ರಿಂದ 10ರೊಳಗೆ ನಡೆದುಕೊಂಡು ಹೋಗಿ, 20-25 ಕೆ.ಜಿ. ಅಕ್ಕಿ, ಸಕ್ಕರೆ ತರಲು ಸಾಧ್ಯವೇ ಎನ್ನುವುದು ಜನರ ಪ್ರಶ್ನೆಯಾಗಿದೆ.

ಇದು ಕೇವಲ ಈ ಒಂದು ಊರಿನ ಸಮಸ್ಯೆಯಲ್ಲ. ರಾಜ್ಯದೆಲ್ಲೆಡೆ ಈ ಸಮಸ್ಯೆ ಎಲ್ಲ ಕಡೆ ಇರಬಹುದು. ಹಾಲಿನ ಡೈರಿ, ಪಡಿತರವಲ್ಲದೇ ಗ್ರಾಮೀಣ ಪ್ರದೇಶದ ಜನರು ಅಗತ್ಯ ವಸ್ತುಗಳ ಖರೀದಿಗೆ ಕಿ.ಮೀ.ಗಟ್ಟಲೆ ದೂರ ಕಾಲ್ನಡಿಗೆಯಲ್ಲಿ ಸಾಗುವುದು ಅನಿವಾರ್ಯವಾಗಿದೆ.

ಗಾಯದ ಮೇಲೆ ಬರೆ
ಸರಕಾರ, ಜಿಲ್ಲಾಡಳಿತಗಳು ಲಾಕ್‌ಡೌನ್‌ ಮಾರ್ಗಸೂಚಿ ಮಾಡುವಾಗ ಗ್ರಾಮೀಣ ಭಾಗದ ಜನರನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಿ. ನಮ್ಮಲ್ಲಿ ದಿನಸಿ ತರಬೇಕೆಂದ್ರೆ 10 ಕಿ.ಮೀ. ನಡೆದೇ ಹೋಗಬೇಕು. ಇನ್ನು ಮೆಡಿಕಲ್‌ಗೆ ಹೋಗಬೇಕು ಅಂದ್ರೆ 20 ಕಿ.ಮೀ ಕ್ರಮಿಸಬೇಕು. ಹೀಗಿರುವಾಗ ನಡೆದುಕೊಂಡೇ ಹೋಗಬೇಕು ಅಂತ ನಿಯಮ ರೂಪಿಸಿದ್ರೆ ಈ ಕಾಡಿನ ಮಧ್ಯೆ ಜನರು ಹೇಗೆ ಹೋಗಬೇಕು..? ಮೊದಲೇ ಮೂಲ ಸೌಕರ್ಯಗಳಿಲ್ಲದೆ ಒದ್ದಾಡುತ್ತಿರುವ ಜನರಿಗೆ ಗಾಯದ ಮೇಲೆ ಬರೆ ಎಳೆಯಬೇಡಿ.ಸರಕಾರ ಮತ್ತು ಜಿಲ್ಲಾಡಳಿತ ದಯವಿಟ್ಟು ಹಳ್ಳಿ ಪ್ರದೇಶಗಳನ್ನು ಪ್ರತ್ಯೇಕವಾಗಿ ಗುರುತಿಸಿ ಅವರಿಗೆ ದಿನಸಿ, ಪಡಿತರ, ಔಷಧಿಯಂತಹ ಅಗತ್ಯ ವಸ್ತುಗಳನ್ನು ತರುವುದಕ್ಕೆ ವಾಹನದ ಬಳಕೆಗೆ ಅವಕಾಶ ನೀಡಲಿ ಎನ್ನುವುದು ಗ್ರಾಮೀಣ ಪ್ರದೇಶದ ಜನರ ಒತ್ತಾಯವಾಗಿದೆ.

ಪಡಿತರಕ್ಕೆ ಅವಕಾಶ
ಗ್ರಾಮೀಣ ಭಾಗದಲ್ಲಿ ಪಡಿತರ ತರಲು ಸಾಕಷ್ಟು ದೂರವಿರುವುದರಿಂದ, ಪಡಿತರಕ್ಕೆ ಬಾಡಿಗೆ ವಾಹನ ಮಾಡಿಕೊಂಡು ಕೊಂಡು ಹೋಗಲು ಅವಕಾಶ ಕಲ್ಪಿಸಲಾಗಿದೆ. ಇನ್ನು ಹೈನುಗಾರಿಕೆ, ಕೃಷಿ ಸಂಬಂಧಿ ಚಟುವಟಿಕೆಗಳಿಗೂ ಅವಕಾಶ ನೀಡಲಾಗಿದೆ.
– ಜಿ. ಜಗದೀಶ್‌, ಉಡುಪಿ

ಟಾಪ್ ನ್ಯೂಸ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-mit

Manipal MIT: ಅಂತಾರಾಷ್ಟ್ರೀಯ ಕಾರ್ಯಾಗಾರ

Manipal: ಮಾಹೆ ಹಳೆ ವಿದ್ಯಾರ್ಥಿಗಳ ಪುನರ್ಮಿಲನ ರಜತ ಮಹೋತ್ಸವ

Manipal: ಮಾಹೆ ಹಳೆ ವಿದ್ಯಾರ್ಥಿಗಳ ಪುನರ್ಮಿಲನ ರಜತ ಮಹೋತ್ಸವ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.