Electoral Bonds: ಏನಿದು ಚುನಾವಣಾ ಬಾಂಡ್‌, ರಾಜಕೀಯ ಪಕ್ಷಗಳಿಗೆ ಬಂದ ದೇಣಿಗೆ ಎಷ್ಟು?

2024ರ ಮಾರ್ಚ್‌ 31ರೊಳಗೆ ವೆಬ್‌ ಸೈಟ್‌ ನಲ್ಲಿ ಸಾರ್ವಜನಿಕವಾಗಿ ಪ್ರಕಟಿಸಬೇಕು

Team Udayavani, Feb 15, 2024, 11:51 AM IST

Electoral Bonds: ಏನಿದು ಚುನಾವಣಾ ಬಾಂಡ್‌, ರಾಜಕೀಯ ಪಕ್ಷಗಳಿಗೆ ಬಂದ ದೇಣಿಗೆ ಎಷ್ಟು?

ಚುನಾವಣಾ ಬಾಂಡ್‌ ಗಳ ಕಾನೂನು ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌ ನ ಪಂಚಸದಸ್ಯ ಸಾಂವಿಧಾನಿಕ ಪೀಠ, ಗುರುವಾರ (ಫೆ.15) ಮಹತ್ವದ ತೀರ್ಪನ್ನು ಪ್ರಕಟಿಸಿದೆ. ಚುನಾವಣಾ ಬಾಂಡ್‌ ಗಳು ಸಂವಿಧಾನ ಬಾಹಿರ ಎಂದಿರುವ ಸುಪ್ರೀಂಕೋರ್ಟ್‌, ಚುನಾವಣಾ ಬಾಂಡ್‌ ಗಳನ್ನು ನಿಷೇಧಿಸಿ ತೀರ್ಪನ್ನು ನೀಡಿದೆ.

ಚುನಾವಣಾ ಬಾಂಡ್‌ ಗಳ ವ್ಯಾಲಿಡಿಟಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌ ನ ಸಿಜೆಐ ಡಿ.ವೈ.ಚಂದ್ರಚೂಡ್‌ ನೇತೃತ್ವದ ಪಂಚ ಸದಸ್ಯರ ಸಾಂವಿಧಾನಿಕ ಪೀಠವು ಕಳೆದ ವರ್ಷ ನವೆಂಬರ್‌ 2ರಂದು ತೀರ್ಪನ್ನು ಕಾಯ್ದಿರಿಸಿತ್ತು.

ಅರ್ಜಿದಾರರ ವಾದವೇನು?

ಚುನಾವಣಾ ಬಾಂಡ್‌ ಗಳ ಯೋಜನೆಯು ಸಂವಿಧಾನದ 19(1)(ಎ) ವಿಧಿಯ ಅಡಿಯಲ್ಲಿ ಮೂಲಭೂತ ಹಕ್ಕಾಗಿರುವ ರಾಜಕೀಯ ಪಕ್ಷಗಳ ದೇಣಿಗೆಯ ಮೂಲವನ್ನು ತಿಳಿಸುವ ನಾಗರಿಕರ ಹಕ್ಕನ್ನು ಕಸಿದುಕೊಂಡಂತಾಗಲಿದೆ ಎಂಬುದು ಅರ್ಜಿದಾರರ ವಾದವಾಗಿದೆ.

ಸುಪ್ರೀಂಕೋರ್ಟ್‌ ಹೇಳಿದ್ದೇನು:

ರಾಜಕೀಯ ಪಕ್ಷಗಳಿಗೆ ಚುನಾವಣಾ ಬಾಂಡ್‌ ಗಳ ಮೂಲಕ ಎಷ್ಟು ದೇಣಿಗೆ ಬಂದಿದೆ ಎಂಬುದನ್ನು ಎಸ್‌ ಬಿಐ ಮಾಹಿತಿ ನೀಡಬೇಕೆಂದು ಸುಪ್ರೀಂಕೋರ್ಟ್‌ ಸಾಂವಿಧಾನಿಕ ಪೀಠ ಸೂಚನೆ ನೀಡಿದೆ. ಮಾರ್ಚ್‌ 6ರೊಳಗೆ ಎಸ್‌ ಬಿಐ ಎಲ್ಲಾ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಬೇಕು. ಚುನಾವಣಾ ಆಯೋಗ ಮಾಹಿತಿಯನ್ನು 2024ರ ಮಾರ್ಚ್‌ 31ರೊಳಗೆ ವೆಬ್‌ ಸೈಟ್‌ ನಲ್ಲಿ ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ನಿರ್ದೇಶನ ನೀಡಿದೆ.

ಇನ್ಮುಂದೆ ಎಸ್‌ ಬಿಐ ಚುನಾವಣಾ ಬಾಂಡ್‌ ಗಳನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಸುಪ್ರೀಂ ಪೀಠ ಹೇಳಿದೆ. ಎಲೆಕ್ಟ್ರಾಲ್‌ ಬಾಂದ್‌ ಸ್ಕೀಮ್‌ ಅಸಂವಿಧಾನಿಕವಾಗಿದೆ. ಅನಾಮಧೇಯ ಚುನಾವಣಾ ಬಾಂಡ್‌ ಗಳು ಮಾಹಿತಿ ಹಕ್ಕು ಮತ್ತು ಆರ್ಟಿಕಲ್‌ 19(1) ಅನ್ನು ಉಲ್ಲಂಘಿಸುತ್ತದೆ. ಬಾಂಡ್‌ ಗಳ ಮೂಲಕ ದೇಣಿಗೆ ನೀಡುವ ಮೂಲಕ ರಾಜಕೀಯ ಪ್ರವೇಶಕ್ಕೆ ಅವಕಾಶವಾಗಲಿದ್ದು, ಇದು ಹಣ ಮತ್ತು ಮತದಾನದ ನಡುವಿನ ನಂಟಾಗಲಿದೆ ಎಂದು ಸುಪ್ರೀಂಕೋರ್ಟ್‌ ತೀರ್ಪಿನಲ್ಲಿ ವಿಶ್ಲೇಷಿಸಿದೆ.

ದೇಣಿಗೆಯನ್ನು ಅನಾಮಧೇಯಗೊಳಿಸುವ ಕೇಂದ್ರ ಸರ್ಕಾರದ ಆದಾಯ ತೆರಿಗೆ ಕಾಯಿದೆ ಮತ್ತು ಜನಪ್ರತಿನಿಧಿ ಕಾಯಿದೆಗೆ ಮಾಡಿದ ತಿದ್ದುಪಡಿಯನ್ನು ಸುಪ್ರೀಂಕೋರ್ಟ್‌ ರದ್ದುಗೊಳಿಸಿದೆ.

ಏನಿದು ಚುನಾವಣಾ ಬಾಂಡ್?‌

2018ರ ಜನವರಿ 29ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ ಡಿಎ ಸರ್ಕಾರ ಚುನಾವಣಾ ಬಾಂಡ್‌ ಸ್ಕೀಮ್‌ ಅನ್ನು ಜಾರಿಗೆ ತಂದಿತ್ತು. ಚುನಾವಣಾ ಬಾಂಡ್‌ ಅಂದರೆ ಇದು ಪ್ರಾಮಿಸರಿ ನೋಟ್‌ ನಂತಿದ್ದು, ಇದನ್ನು ದೇಶದ ಯಾವುದೇ ಪ್ರಜೆ ಅಥವಾ ಕಂಪನಿಯು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಯಾವುದೇ ಶಾಖೆಗಳಿಂದ ಖರೀದಿಸಬಹುದು. ಅಲ್ಲದೇ ಈ ಬಾಂಡ್‌ ಗಳನ್ನು ತಮ್ಮ ಆಯ್ಕೆ ಯಾವುದೇ ರಾಜಕೀಯ ಪಕ್ಷಗಳಿಗೆ ದೇಣಿಗೆಯಾಗಿ ನೀಡಬಹುದಾಗಿದೆ.

ಚುನಾವಣಾ ಬಾಂಡ್‌ ಗಳ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವವರ ಹೆಸರು ಮತ್ತು ಗುರುತನ್ನು ಗೌಪ್ಯವಾಗಿಡಲಾಗುತ್ತದೆ. ದೇಶದ ಯಾವುದೇ ಪ್ರಜೆ ಅಥವಾ ಕಂಪನಿಗಳು ಬಾಂಡ್‌ ಗಳನ್ನು ಖರೀದಿಸಬಹುದಾಗಿದೆ. ಈ ಬಾಂಡ್‌ ಗಳು 1,000 ರೂಪಾಯಿಯಿಂದ ಒಂದು ಕೋಟಿ ರೂ. ಮೊತ್ತದವರೆಗೂ ಇದೆ. ಈ ದೇಣಿಗೆಗಳು ಬಡ್ಡಿ ರಹಿತವಾಗಿರುತ್ತದೆ.

ಬಾಂಡ್‌ ಗಳ ಮೂಲಕ ರಾಜಕೀಯ ಪಕ್ಷಗಳು ಪಡೆದ ಹಣವೆಷ್ಟು?

ಪಿಟಿಐ ವರದಿ ಪ್ರಕಾರ, 2022-23ನೇ ಸಾಲಿನಲ್ಲಿ ಭಾರತೀಯ ಜನತಾ ಪಕ್ಷ ಚುನಾವಣಾ ಬಾಂಡ್‌ ಗಳ ಮೂಲಕ ಅಂದಾಜು 1,300 ಕೋಟಿ ರೂಪಾಯಿ ದೇಣಿಗೆ ಪಡೆದಿದೆ. 2021-22ನೇ ಸಾಲಿನಲ್ಲಿ ಬಿಜೆಪಿ ಚುನಾವಣಾ ಬಾಂಡ್‌ ಮುಖೇನ 1,775 ಕೋಟಿ ರೂ. ದೇಣಿಗೆ ಪಡೆದಿತ್ತು. ಒಟ್ಟಾರೆಯಾಗಿ 2022-23ನೇ ಸಾಲಿನಲ್ಲಿ ಭಾರತೀಯ ಜನತಾ ಪಕ್ಷ ಪಡೆದ ಒಟ್ಟು ದೇಣಿಗೆ 2,360.8 ಕೋಟಿ ರೂಪಾಯಿ ಎಂದು ವಿವರಿಸಿದೆ.

ಅದೇ ರೀತಿ ಕಾಂಗ್ರೆಸ್‌ ಪಕ್ಷ 2022-23ನೇ ಸಾಲಿನಲ್ಲಿ ಚುನಾವಣಾ ಬಾಂಡ್‌ ಗಳ ಮೂಲಕ ಪಡೆದ ಮೊತ್ತ 171 ಕೋಟಿ ರೂಪಾಯಿ. 2021-22ನೇ ಸಾಲಿನಲ್ಲಿ ಕಾಂಗ್ರೆಸ್‌ ಪಕ್ಷ 236 ಕೋಟಿ ರೂಪಾಯಿ ದೇಣಿಗೆ ಪಡೆದಿತ್ತು.

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ

Tulu theater: ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ

1-yekanath

Maharashtra Poll; ”ತ್ಯಾಗ” ಮಾಡಲು ಸಿದ್ಧರಾಗಬೇಕು.. ಶಿಂಧೆಗೆ ಬಿಜೆಪಿ ಸ್ಪಷ್ಟ ಸಂದೇಶ!

5-lips-4

Beauty Tips: ನೈಸರ್ಗಿಕವಾಗಿ ಗುಲಾಬಿ ಬಣ್ಣದ ತುಟಿ ನಿಮ್ಮದಾಗಲು ಈ ಟಿಪ್ಸ್‌ ಬಳಸಿ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

1

2025ಕ್ಕೆ ಬಾಲಿವುಡ್‌ಗೆ ಸೀಕ್ವೆಲ್‌ಗಳೇ ಜೀವಾಳ.. ಇಲ್ಲಿದೆ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.