Surathkal: ಯಕ್ಷಗಾನಕ್ಕೆ ಅಗರಿ ಶ್ರೀನಿವಾಸ, ರಘುರಾಮ ಭಾಗವತರ ಸೇವೆ ಸ್ಮರಣೀಯ

ಪ್ರತಿಷ್ಠಿತ ಅಗರಿ ಪ್ರಶಸ್ತಿ ಭಾಗವತ ಪುತ್ತಿಗೆ ರಘುರಾಮ ಹೊಳ್ಳರಿಗೆ ಪ್ರದಾನ

Team Udayavani, Jul 29, 2024, 12:50 AM IST

Agari-prashashti

ಸುರತ್ಕಲ್‌: ಅಗರಿ ಪ್ರಶಸ್ತಿ, ಅಗರಿ ರಘುರಾಮ ಸಮ್ಮಾನ, ಅಗರಿ ಸಂಸ್ಮರಣೆ ಕಾರ್ಯಕ್ರಮ ರವಿವಾರ ಹೊಸಬೆಟ್ಟು ನವಗಿರಿ ಸಭಾಭವನದಲ್ಲಿ ಜರಗಿತು.

ಪ್ರತಿಷ್ಠಿತ ಅಗರಿ ಪ್ರಶಸ್ತಿಯನ್ನು ಯಕ್ಷಗಾನ ಭಾಗವತ ಪುತ್ತಿಗೆ ರಘುರಾಮ ಹೊಳ್ಳ ಅವರಿಗೆ ಪ್ರದಾನಿಸಲಾಯಿತು. ಅಗರಿ ರಘುರಾಮ ಸಮ್ಮಾನ ಪುರಸ್ಕಾರವನ್ನು ಉಡುಪಿಯ ಕಲೆ ಮತ್ತು ಸಮಾಜ ಸೇವಾ ಸಂಸ್ಥೆ ಯಕ್ಷಗಾನ ಕಲಾರಂಗಕ್ಕೆ ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಆಶೀರ್ವಚನ ನೀಡಿದ ಹರಿನಾರಾಯಣ ದಾಸ ಆಸ್ರಣ್ಣ ಅವರು, ಯಕ್ಷಗಾನ ರಂಗಕ್ಕೆ ಅಗರಿ ಶ್ರೀನಿವಾಸ ಭಾಗವತರು ಹಾಗೂ ರಘುರಾಮ ಭಾಗವತರು ನೀಡಿದ ಸೇವೆ ಸ್ಮರಣೀಯ. ಶ್ರೀ ದೇವೀ ಮಹಾತ್ಮೆ ಸಾವಿರಾರು ಸೇವೆಯನ್ನು ಕಂಡಿದೆ. ಕವಿ, ನಿರ್ದೇಶಕರಾಗಿ ಯಕ್ಷಗಾನವನ್ನು ಬೆಳೆಸಿದ ಅಗರಿ ಶೈಲಿ ಇಂದಿಗೂ ಉಳಿದುಕೊಂಡಿರುವುದು ಅವರ ಪ್ರಸಿದ್ಧಿಗೆ ಸಾಕ್ಷಿಯಾಗಿದೆ ಎಂದರು. ಪ್ರಶಸ್ತಿ ಸ್ವೀಕರಿಸಿದ ಪುತ್ತಿಗೆ ರಘುರಾಮ ಹೊಳ್ಳರು, ಅಗರಿ ಪ್ರಶಸ್ತಿ ನನಗೆ ಆಶೀರ್ವಾದವಾಗಿ ಲಭಿಸಿದೆ ಎಂದು ಭಾವಿಸಿದ್ದೇನೆ ಎಂದರು.

ವಿದುಷಿ ಸುಮಂಗಲಾ ರತ್ನಾಕರ್‌ ಅಗರಿ ಸಂಸ್ಮರಣೆ ಹಾಗೂ ವಾದಿರಾಜ ಕಲ್ಲೂರಾಯ ಅಭಿನಂದನಾ ನುಡಿಗಳ ನ್ನಾಡಿದರು. ಅಗರಿ ರಾಘವೇಂದ್ರ ರಾವ್‌ ಪ್ರಾಸ್ತಾವಿಕ ಮಾತುಗಳನ್ನಾಡಿ, ಶ್ರೀದೇವಿ ಮಹಾತ್ಮೆಯನ್ನು ಗಿನ್ನೆಸ್‌ ದಾಖಲೆಗೆ ಸೇರಿಸುವ ಪ್ರಯತ್ನ ಮಾಡಲಾಗುತ್ತಿದೆ. ಯಕ್ಷಗಾನದ ಬೆಳವಣಿಗೆಗೆ ನಮ್ಮಿಂದಾದ ಸೇವೆಯನ್ನು ವೇದಿಕೆಯ ಮೂಲಕ ಮಾಡಿಕೊಂಡು ಬರಲಾಗುತ್ತಿದೆ ಎಂದರು.

ಉದ್ಯಮಿ ಶ್ರೀಪತಿ ಭಟ್‌ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಶ್ರೀಕಾಂತ್‌ ಭಟ್‌ ಕುಮಟಾ, ಗುರುರಾಜ ಆಚಾರ್‌
ಹೊಸಬೆಟ್ಟು, ಪೆರ್ಮುದೆ ಸ.ಹಿ. ಶಾಲಾ ಸಂಚಾಲಕ ರಮೇಶ್‌ ರಾವ್‌, ಕಲಾ ರಂಗದ ಗಂಗಾಧರ ರಾವ್‌, ಯುವ ಚೇತನ ಸಂಸ್ಥೆ ಅಧ್ಯಕ್ಷ ಪ್ರಶಾಂತ್‌ ರಾವ್‌ ಎಚ್‌. ಮತ್ತಿತರರು ಉಪಸ್ಥಿತರಿದ್ದರು. ಪವನ್‌ ಮೈರ್ಪಾಡಿ ನಿರೂಪಿಸಿದರು. ಶ್ರೀನಿವಾಸ್‌ ಕುಳಾಯಿ ವಂದಿಸಿದರು.

ಯುವ ಚೇತನ ಹೊಸಬೆಟ್ಟು ಇದರ 31ನೇ ವಾರ್ಷಿಕೋತ್ಸವದ ಅಂಗವಾಗಿ ಸಂಘದ ಸಾಧಕ ಸದಸ್ಯರಾದ ನಿಧಿಶ ಹೊಸಬೆಟ್ಟು. ರಾಘವೇಂದ್ರ ಎಚ್‌.ವಿ., ರಾಕೇಶ್‌ ಹೊಸಬೆಟ್ಟು ಅವರನ್ನು ಅಭಿನಂದಿಸಲಾಯಿತು. ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ, ಅಭಿನಂದನಾ ಸಮಾರಂಭ ಹಾಗೂ ಯಕ್ಷಗಾನ ಬಯಲಾಟ ಕಾರ್ಯಕ್ರಮವು ನೆರವೇರಿತು.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.