ಅಸ್ಪ್ರಶ್ಯತೆ ತೊಲಗಿಸಲು ಹೋರಾಡಿದ ಸಾವರ್ಕರ್ ಬಗ್ಗೆ ಅಭಿಮಾನವಿದೆ: ಮಾಜಿ ಸಿಎಂ ಶಿಂಧೆ
ಕಾಂಗ್ರೆಸ್ ಮುಖಂಡರು ಹಾಗೂ ಕಾಂಗ್ರೆಸ್ ಬೆಂಬಲಿಗರು ಸದಾ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ.
Team Udayavani, Sep 11, 2024, 4:59 PM IST
ಮಹಾರಾಷ್ಟ್ರ: ನಾನು ಯಾವತ್ತೂ ಅಸ್ಪ್ರಶ್ಯತೆ ನಿವಾರಣೆಗಾಗಿ ದುಡಿದ ಸಾವರ್ಕರ್ ಅವರನ್ನು ಗೌರವಿಸುತ್ತೇನೆ. ಹಿಂದುಳಿದ ಸಮುದಾಯದವನಾದ ನನಗೆ ಪತಿತ್ ಪಾವನ್ ಮಂದಿರಕ್ಕೆ ಶಂಕುಸ್ಥಾಪನೆ ನೆರವೇರಿಸುವ ಅವಕಾಶ ಸಿಕ್ಕಿದೆ ಎಂದು ಮಹಾರಾಷ್ಟ್ರ ಮಾಜಿ ಸಿಎಂ, ಕಾಂಗ್ರೆಸ್ ಮುಖಂಡ ಸುಶೀಲ್ ಕುಮಾರ್ ಶಿಂಧೆ ಅಭಿಪ್ರಾಯವ್ಯಕ್ತಪಡಿಸಿರುವ ವಿಡಿಯೋವನ್ನು ಪಿಟಿಐ ತನ್ನ ಎಕ್ಸ್ ಖಾತೆಯಲ್ಲಿ ಪ್ರಕಟಿಸಿದೆ.
ದಲಿತ ಸಮುದಾಯದಲ್ಲಿ ಹುಟ್ಟಿದ ನನಗೆ ಅಸ್ಪ್ರಶ್ಯತೆಗಾಗಿ ಹೋರಾಡಿದ ಸಾವರ್ಕರ್ ಬಗ್ಗೆ ಅಭಿಮಾನವಿದೆ. ಆದರೆ ಅವರ ಕಾರ್ಯದ ಬಗ್ಗೆ ವ್ಯಾಪಕವಾಗಿ ಚರ್ಚೆಯಾಗಿಲ್ಲ ಎಂದರು. ಶಿಂಧೆ ಯಾರನ್ನೂ ಸ್ಪಷ್ಟವಾಗಿ ಉಲ್ಲೇಖಿಸಿಲ್ಲ. ಆದರೆ ಸಾವರ್ಕರ್ ಕುರಿತು ಹೆಚ್ಚು ಮಾತನಾಡಲು ಬಯಸುವುದಿಲ್ಲ ಎಂದರು.
ಮಹಾತ್ಮ ಗಾಂಧಿ ಹತ್ಯೆ ಘಟನೆಯಲ್ಲಿ ಸಾವರ್ಕರ್ ಶಾಮೀಲಾಗಿದ್ದಾರೆಂಬ ಆರೋಪದ ಮೇಲೆ ಕಾಂಗ್ರೆಸ್ ಮುಖಂಡರು ಹಾಗೂ ಕಾಂಗ್ರೆಸ್ ಬೆಂಬಲಿಗರು ಸದಾ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಮಣಿಶಂಕರ್ ಅಯ್ಯರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಸಾವರ್ಕರ್ ವಿಚಾರದಲ್ಲಿ ಅಪಸ್ವರ ಎತ್ತುತ್ತಲೇ ಬಂದಿರುವುದಾಗಿ ವರದಿ ತಿಳಿಸಿದೆ.
ಲಾಲ್ ಚೌಕ್ ಗೆ ಹೋಗಲು ಭಯಪಟ್ಟಿದ್ದೆ:
ನಾನು ಕೇಂದ್ರ ಸಚಿವನಾಗಿದ್ದ ಸಂದರ್ಭದಲ್ಲಿ ಶ್ರೀನಗರದ ಲಾಲ್ ಚೌಕ್ ಗೆ ಹೋಗಲು ಭಯಪಟ್ಟಿದ್ದೆ. ಆ ವೇಳೆ ಉಗ್ರರ ಅಟ್ಟಹಾಸ ವಿಪರೀತವಾಗಿತ್ತು ಎಂದು ಸುಶೀಲ್ ಕುಮಾರ್ ಶಿಂಧೆ ಹಳೆಯ ನೆನಪನ್ನು ಮೆಲುಕು ಹಾಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.