![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ
ಕೋಚ್ ದ್ರಾವಿಡ್, ರೋಹಿತ್ ಶರ್ಮಾ, ಕೊಹ್ಲಿ ಜೊತೆ ಮಾತನಾಡಿದ ಪ್ರಧಾನಿ
Team Udayavani, Jun 30, 2024, 1:36 PM IST
![Modi,-Dravid](https://www.udayavani.com/wp-content/uploads/2024/06/Modi-Dravid-620x372.jpg)
ನವದೆಹಲಿ: ಟಿ-20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಗೆಲುವು ಸಾಧಿಸಿ ೧೭ ವರ್ಷ ಬಳಿಕ ಎರಡನೇ ಬಾರಿ ಚುಟುಕು ಕ್ರಿಕೆಟ್ ಚಾಂಪಿಯನ್ ಆದ ಭಾರತ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ದೂರವಾಣಿ ಕರೆ ಮಾಡಿ ಶುಭ ಹಾರೈಸಿದ್ದಾರೆ.
ರಾಹುಲ್ ದ್ರಾವಿಡ್ ಕಳೆದ ಎರಡುವರೆ ವರ್ಷಗಳಿಂದ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರಾಗಿ ಶನಿವಾರ ನಡೆದ ವಿಶ್ವಕಪ್ ಫೈನಲ್ ಪಂದ್ಯದವರೆಗೆ ಟೀಮ್ ಇಂಡಿಯಾಕ್ಕೆ ನೀಡಿದ ಕೊಡುಗೆ, ಸಲಹೆ, ಸೂಚನೆಗಳಿಂದ ೧೧ ವರ್ಷಗಳಿಂದ ಸಿಗದಿದ್ದ ಐಸಿಸಿ ಟ್ರೋಫಿಯ ಬರವನ್ನು ನೀಗಿಸಿದೆ.
“ಭಾರತೀಯ ಕ್ರಿಕೆಟ್ ತಂಡದೊಂದಿಗಿನ ದ್ರಾವಿಡ್ ಅವರ ಅಚಲ ಬದ್ಧತೆ, ಕಾರ್ಯತಂತ್ರ, ಪ್ರತಿಭೆಯಿಂದ ಭಾರತ ತಂಡದಲ್ಲಿ ಬದಲಾವಣೆ ತಂದಿದ್ದಾರೆ. ಇವರ ಕೊಡುಗೆಯು ಮುಂದಿನ ಪೀಳಿಗೆಗೆ ಸ್ಪೂರ್ತಿದಾಯಕ” ಎಂದು ಕನ್ನಡಿಗ ದ್ರಾವಿಡ್ ಬಗ್ಗೆ ಪ್ರಧಾನಿ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಕೊಂಡಾಡಿ ಬರೆದಿದ್ದಾರೆ.
Rahul Dravid’s incredible coaching journey has shaped the success of Indian cricket.
His unwavering dedication, strategic insights and nurturing the right talent have transformed the team.
India is grateful to him for his contributions and for inspiring generations. We are… pic.twitter.com/8MKSPqztDV
— Narendra Modi (@narendramodi) June 30, 2024
ವಿರಾಟ್ ಕೊಹ್ಲಿ ಜೊತೆ ಮಾತನಾಡಿದ ಪ್ರಧಾನಿ ಮೋದಿ “ ನಿಮ್ಮೊಂದಿಗೆ ಮಾತನಾಡಿ ಸಂತೋಷವಾಯಿತು. ಫೈನಲ್ ಪಂದ್ಯದ ಇನ್ನಿಂಗ್ಸ್ ಭಾರತ ತಂಡಕ್ಕೆ ಆಧಾರವಾಗಿತ್ತು. ಎಲ್ಲ ವಿಧದ ಕ್ರಿಕೆಟ್ ಮಾದರಿಯಲ್ಲೂ ಭವ್ಯವಾಗಿ ಬ್ಯಾಟಿಂಗ್ ನಡೆಸಿದ್ದೀರಿ. ಟಿ-೨೦ ಕ್ರಿಕೆಟ್ ನಿಮ್ಮನ್ನು ಮಿಸ್ ಮಾಡಿಕೊಳ್ಳಲಿದೆ. ಆದರೆ ನೀವು ಯುವ ಪೀಳಿಗೆಯ ಆಟಗಾರರನ್ನು ಪ್ರೇರೇಪಿಸುತ್ತೀರಿ ಎಂಬ ವಿಶ್ವಾಸ ಹೊಂದಿದ್ಧೇನೆ” ಎಂದರು.
ತಂಡದ ನಾಯಕ ರೋಹಿತ್ ಶರ್ಮಾ ಜೊತೆ ಮಾತನಾಡಿ “ನಿಮ್ಮದು ಶ್ರೇಷ್ಠ ವ್ಯಕ್ತಿತ್ವ, ನಿಮ್ಮ ಆಕ್ರಮಣಕಾರಿ ಮನಸ್ಥಿತಿ, ಬ್ಯಾಟಿಂಗ್, ನಾಯಕತ್ವ ಭಾರತ ತಂಡಕ್ಕೆ ಹೊಸ ಆಯಾಮ ನೀಡಿದೆ. ಇಂದು ನಿಮ್ಮೊಂದಿಗೆ ಮಾತನಾಡಿ ಬಹಳ ಸಂತೋಷವಾಯಿತು” ಎಂದರು.
ಫೈನಲ್ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಪಾಂಡ್ಯ ಹಾಗೂ ಸೂರ್ಯ ಕುಮಾರ್ ಯಾದವ್ಗೂ ಪ್ರಧಾನಿ ಮೋದಿ ಪ್ರಶಂಸಿದ್ದಾರೆ. ಐತಿಹಾಸಿಕ ಗೆಲುವು ಸಾಧಿಸಿದ್ದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಶುಭ ಹಾರೈಸಿದ್ದಾರೆ.
ಟಾಪ್ ನ್ಯೂಸ್
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-150x90.jpg)
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
![12](https://www.udayavani.com/wp-content/uploads/2024/07/12-1-150x90.jpg)
Chowkidar Movie: ಚೌಕಿದಾರ್ಗೆ ಮುಹೂರ್ತ ಇಟ್ರಾ!
![Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?](https://www.udayavani.com/wp-content/uploads/2024/07/Crude-150x83.jpg)
Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-150x84.jpg)
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.