![Bollywood: ರಿಷಬ್ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್ ಅಪ್ಡೇಟ್](https://www.udayavani.com/wp-content/uploads/2025/02/9-22-415x249.jpg)
![Bollywood: ರಿಷಬ್ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್ ಅಪ್ಡೇಟ್](https://www.udayavani.com/wp-content/uploads/2025/02/9-22-415x249.jpg)
Team Udayavani, Jan 24, 2025, 12:34 PM IST
ನವದೆಹಲಿ: ಕೇಂದ್ರ ಸರ್ಕಾರ 2025ನೇ ಸಾಲಿನ ಬಜೆಟ್ ಸಿದ್ಧತೆ ಅಂತಿಮ ಹಂತದಲ್ಲಿದ್ದು, ಫೆ.1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಹು ನಿರೀಕ್ಷಿತ ಬಜೆಟ್ ಮಂಡಿಸಲಿದ್ದಾರೆ. ಏತನ್ಮಧ್ಯೆ ಬಜೆಟ್ ಸಿದ್ಧತೆಯ ಅಂತಿಮ ಹಂತದ ನಡುವೆ ಈ ಬಜೆಟ್ ನಲ್ಲಿ ವಾರ್ಷಿಕವಾಗಿ 10ರಿಂದ 15 ಲಕ್ಷ ಆದಾಯ ಹೊಂದಿರುವವರು ತೆರಿಗೆ ಲಾಭ ಪಡೆಯುವ ನಿರೀಕ್ಷೆ ಇರುವುದಾಗಿ ನ್ಯೂಸ್ 18 ವರದಿ ಮಾಡಿದೆ.
ಈ ಬಾರಿಯ ಬಜೆಟ್ ನಲ್ಲಿ ಉದ್ಯೋಗ ಹೆಚ್ಚಳಕ್ಕೆ ಆದ್ಯತೆ ನೀಡುವ ನಿರೀಕ್ಷೆ ಇದೆ ಎನ್ನಲಾಗಿದೆ. ಭಾರತದಲ್ಲಿಯೂ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ (ಕೃತಕ ಬುದ್ದಿಮತ್ತೆ) ಬಳಕೆಯಿಂದಾಗಿ ಉದ್ಯೋಗದ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆ ಇದೆ ಎಂದು ವರದಿ ವಿವರಿಸಿದೆ.
ಮಧ್ಯಮ ವರ್ಗಕ್ಕೆ ತೆರಿಗೆ ವಿನಾಯ್ತಿ: ಸರ್ಕಾರದ ಮೂಲಗಳ ಪ್ರಕಾರ, ಯಾರು ವಾರ್ಷಿಕವಾಗಿ 10ರಿಂದ 15 ಲಕ್ಷ ರೂಪಾಯಿ ವೇತನ ಪಡೆಯುತ್ತಾರೋ ಅವರಿಗೆ ತೆರಿಗೆ ವಿನಾಯ್ತಿ ಲಭಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ.
2025ರ ಸಾಲಿನ ಬಜೆಟ್ ನಲ್ಲಿ ಆಸ್ಪತ್ರೆ, ಉತ್ಪಾದನೆ ಹಾಗೂ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿರೀಕ್ಷೆ ಇದ್ದಿರುವುದಾಗಿ ಮೂಲಗಳು ತಿಳಿಸಿವೆ. ಅಲ್ಲದೇ ರಸ್ತೆ, ರೈಲ್ವೆ, ನಗರಾಭಿವೃದ್ಧಿ, ಇಂಧನ, ಕೃಷಿ ಕ್ಷೇತ್ರಕ್ಕೆ ಒತ್ತು ನೀಡಲಿದೆ ಎಂದು ವರದಿ ವಿವರಿಸಿದೆ.
Stock Market: ಕಾರ್ಪೋರೇಟ್ ಆದಾಯ ಕುಸಿತ ಪರಿಣಾಮ; ಷೇರುಪೇಟೆ ಸೂಚ್ಯಂಕ 600 ಅಂಕ ಇಳಿಕೆ
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
ಪ್ರೀತಿಯ ಕರೆ ಆತ್ಮದ ಮೊರೆ: ಪ್ರೀತಿ ಹಳತಾಗುವುದಿಲ್ಲ, ಹಳತಾದಷ್ಟು ಮಾಗುತ್ತದೆ…
Udupi: ಗೀತಾರ್ಥ ಚಿಂತನೆ-189; ಕ್ರಿಟಿಕಲ್ ಇನ್ಸೈಡರ್ ಆಗಬೇಕಾದ ಅಗತ್ಯ
Hosanagara: ಶ್ರೀಗಂಧ ಮರದ ತುಂಡುಗಳ ಸಾಗಾಟ; ಇಬ್ಬರ ಬಂಧನ
Bollywood: ರಿಷಬ್ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್ ಅಪ್ಡೇಟ್
Editorial: ನೀರಿನ ಸಂರಕ್ಷಣೆಗಾಗಿ ಈಗಿನಿಂದಲೇ ಎಚ್ಚರ ಅಗತ್ಯ
You seem to have an Ad Blocker on.
To continue reading, please turn it off or whitelist Udayavani.