TB Dam: ಗ್ಯಾರಂಟಿಗಳಿಗೆ ಕೊಡುವ ಹಣದಲ್ಲಿ ನವಲಿ ಜಲಾಶಯ ನಿರ್ಮಾಣವಾಗ್ತಿತ್ತು: ಶೆಟ್ಟರ್‌

ರಾಜ್ಯ ಸರಕಾರದ ನೀತಿಯಿಂದ ರೈತರು ತೊಂದರೆ ಅನುಭವಿಸುವಂತಾಗಿದೆ: ಸಂಸದ

Team Udayavani, Aug 11, 2024, 11:30 PM IST

Jagdish-Shetter

ಕೊಪ್ಪಳ: ಕಾಂಗ್ರೆಸ್‌ ಸರಕಾರದ  ಗ್ಯಾರಂಟಿಗಳ ನಿಭಾಯಿಸಲು ಖರ್ಚು ಮಾಡೋ  ಹಣದಲ್ಲಿ, ನವಲಿ ಜಲಾಶಯ ಮಾಡಿ ಅದರಿಂದ ಈ ಟಿಬಿ ಡ್ಯಾಂ ನೀರು  ಉಳಿಸಿಕೊಳ್ಳಬಹುದಿತ್ತು ಎಂದು ಸರ್ಕಾರದ ವಿರುದ್ಧ ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಕಿಡಿಕಾರಿದ್ದಾರೆ.

ತುಂಗಭದ್ರಾ ಜಲಾಶಯದಲ್ಲಿ ಸಂಸದ ಜಗದೀಶ್ ಶೆಟ್ಟರ್ ಮಾತನಾಡಿ  ಡ್ಯಾಂ ಖಾಲಿಯಿದ್ದಾಗ ಜಲಾಶಯ ನಿರ್ವಹಣೆ ಮಾಡೋಕೆ ಟೆಂಡರ್ ಕರೆಯಬೇಕಿತ್ತು ಆ ಕೆಲಸ ಸರಕಾರ ಮಾಡಿಲ್ಲ. ಸರಕಾರದ ನೀತಿಯಿಂದ ರೈತರು ತೊಂದರೆ ಅನುಭವಿಸುವಂತಾಗಿದೆ. ಗ್ಯಾರಂಟಿ ಹಣದಲ್ಲಿ ನವಲಿ ಜಲಾಶಯ ನಿರ್ಮಿಸಿ  ನೀರು ಉಳಿಸಿಕೊಳ್ಳಬಹುದಿತ್ತು ಎಂದರು.

ಸರ್ಕಾರ ನಡೆಸಬೇಕಾದ್ರೆ ಒಂದು ಯೋಜನೆ ಇರಬೇಕು, ಆದ್ರೆ ಇಲ್ಲಿ ಯಾವುದೇ ಯೋಜನೆಯೂ ಇಲ್ಲ.  ಡಿಸಿಎಂ ಡಿ.ಕೆ. ಶಿವಕುಮಾರ್‌ ಇಲ್ಲಿ ಏನು ಆಗಿದೆ ಅಂತ ನೋಡ್ಕೊಂಡು ಹೋಗೋಕೆ ಬಂದಿದ್ದಾರೆ ಅಷ್ಟೆ ಸರ್ಕಾರದಲ್ಲಿ ಕುರ್ಚಿ ಉಳಿಸಿಕೊಳ್ಳಲು ಪರದಾಡ್ತಿದ್ದಾರೆ. ಸರ್ಕಾರದ ಖಜಾನೆ ಖಾಲಿಯಾಗಿದೆ, ಹೀಗಾಗಿ ಇಂತಹ ಕಾಮಗಾರಿಗಳ ನಿರ್ವಹಣೆ ಮಾಡೋಕೆ ಆಗ್ತಿಲ್ಲ. ರಾಜ್ಯದಲ್ಲಿ ಇಂತಹ ಹಲವು ಉದಾಹರಣೆಗಳು ನಡೆದಿವೆ ಎಂದರು.

ರಾಜ್ಯ ಕಾಂಗ್ರೆಸ್‌ (ಅಂದಾದುನ್ನಿ) ಸರಕಾರ ಗ್ಯಾರಂಟಿಗಳ ನಿಭಾಯಿಸಲು ಹಣ ಸಂಗ್ರಹಣೆಯಲ್ಲಿ ತೊಡಗಿರುವುದರಿಂದ ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ಗಳ ನಿರ್ವಹಣೆ ಮಾಡಲಾಗದೆ ಕ್ರಸ್ಟ್‌ಗೇಟ್‌ ಚೆ„ನ್‌ ಕಟ್ಟಾಗಲು ಕಾರಣವಾಗಿದೆ. ಸರಕಾರ, ಇಲಾಖಾ ಹಿರಿಯ ಅಧಿಕಾರಿಗಳು ಆರು ತಿಂಗಳ ಹಿಂದೆ ಅವುಗಳೆನ್ನಲ್ಲಾ ಸಮರ್ಪಕವಾಗಿ ನಿರ್ವಹಣೆ ಮಾಡಿದ್ದರೆ ಇಂದು ಈ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲಾ. ರೈತರು ಸಂಕಷ್ಟಸ್ಥಿತಿ ಎದುರಿಸಬೇಕಾಗಿದೆ. ಹಣವಿಲ್ಲದೆ ಕ್ರಸ್ಟ್‌ಗೇಟ್‌ ನಿರ್ವಹಣೆ ಮಾಡಲಾಗಲಿಲ್ಲ ಎಂದು ಅಧಿಕಾರಿಗಳಿಂದ ಉತ್ತರ ಬರುತ್ತೆ ಎಂದರು.

ನವಲಿ ಬಳಿ ಸಮಾನಾಂತರ ಡ್ಯಾಂ ನಿರ್ಮಾಣ ಸುಲಭವಲ್ಲ: ಎಂಬಿಪಾ
ವಿಜಯಪುರ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್‌ ಕಿತ್ತುಹೋದ ಪ್ರಕರಣದ ವಾಸ್ತವಿಕತೆ ಮಾಹಿತಿ ತಿಳಿಯದೇ ಮಾತನಾಡುವುದು ಸರಿಯಲ್ಲ. ಅಂತಾರಾಜ್ಯ ನೀರು ಹಂಚಿಕೆಯ ತುಂಗಭದ್ರಾ ನದಿಗೆ ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಾಣ ಮಾಡುವುದು ಅಷ್ಟು ಸುಲಭವಲ್ಲ ಎಂದು ಕೈಗಾರಿಕೆ ಸಚಿವ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಪತ್ರಕರ್ತರ ಜತೆ ಮಾತನಾಡಿ, ಕ್ರಸ್ಟ್‌ಗೇಟ್‌ ಪ್ರಕರಣಕ್ಕೆ ತಾಂತ್ರಿಕವಾಗಿ ಕಾರಣವಾಗಿರುವ ಸಮಸ್ಯೆ ಬಗ್ಗೆ ತಿಳಿಯಬೇಕಿದೆ. ಯಾವ ಕಾರಣಕ್ಕೆ ಈ ಘಟನೆ ಆಗಿದೆ ಎನ್ನುವ ಬಗ್ಗೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಪರಿಶೀಲಿಸುತ್ತಾರೆ. ಇಂತಹ ಅವಘಡ ಸಂದರ್ಭದಲ್ಲಿ ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಿಸಿದ್ದರೆ ನೀರು ಪೋಲು ಆಗುತ್ತಿರಲಿಲ್ಲ ಎನ್ನುವ ಮಾತು ಕೇಳಿ ಬರುತ್ತಿದೆ. ಆದರೆ, ಸಮಾನಾಂತರ ಜಲಾಶಯ ನಿರ್ಮಾಣ ಅಂತಾರಾಜ್ಯ ಯೋಜನೆಯಾಗಿದೆ. ಕರ್ನಾಟಕ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದರು.

ಟಾಪ್ ನ್ಯೂಸ್

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gangavathi-1

ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.