![Governor sends back microfinance ordinance without signing it](https://www.udayavani.com/wp-content/uploads/2025/02/govt-415x233.jpg)
![Governor sends back microfinance ordinance without signing it](https://www.udayavani.com/wp-content/uploads/2025/02/govt-415x233.jpg)
Team Udayavani, Nov 12, 2024, 5:41 PM IST
ಉದಯವಾಣಿ ಸಮಾಚಾರ
ರಬಕವಿ-ಬನಹಟ್ಟಿ: 12ರೂಪಾಯಿಗೆ ಟಿ-ಕಾಫಿ ಸಿಗದ ಈ ಕಾಲದಲ್ಲಿ ಇಲ್ಲಿನ ಅಮ್ಮ ಫೌಂಡೇಶನ್ ಬನಹಟ್ಟಿಯ ಮಂಗಳವಾರ ಪೇಟೆಯ ಈಶ್ವರಲಿಂಗ ಮೈದಾನ ಹತ್ತಿರವಿರುವ ಊಟದ ಮನೆಯಲ್ಲಿ ಕೇವಲ 12 ರೂ.ಗಳಲ್ಲಿ ಬಡವರ, ನಿರ್ಗತಿಕರ ಹಸಿವು ನೀಗಿಸುವ ಕೆಲಸ ಮಾಡುತ್ತಿದೆ.
ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಬಿಸಿ ಬಿಸಿ ಜುನಕಾ, ಬಿಸಿ ರೊಟ್ಟಿ ನೀಡುವ ಕಾಯಕದಲ್ಲಿ ನಿರತವಾಗಿದೆ. ಚಿಕ್ಕಪಡಸಲಗಿಯ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ವಿಜ್ಞಾನ ವಿಷಯದ ಶಿಕ್ಷಕರಾಗಿರುವ ಬಸವರಾಜ ಜಾಲೋಜಿ ಯಾವುದೇ ಅಪೇಕ್ಷೆಯಿಲ್ಲದೆ, ಮತ್ತೊಬ್ಬರ ಸಹಾಯ- ಸಹಕಾರವಿಲ್ಲದೆ ಇಂತಹ ಮಹತ್ವದ ಕಾರ್ಯದಲ್ಲಿ ತೊಡಗಿದ್ದಾರೆ.
ಪ್ರಸ್ತುತ ದಿನಂಪ್ರತಿ 120 ರಿಂದ 150 ಜನರು ಆಹಾರ ಸೇವಿಸಲು ಬರುತ್ತಾರೆ. 2 ರೊಟ್ಟಿ, ಜುನುಕದೊಂದಿಗೆ ಉಳ್ಳಾಗಡ್ಡಿ, ಸೌತೆಕಾಯಿ ನೀಡುವ ಇವರು ಈ ಭಾಗದ ಬಡವರಿಗೆ ಭಾಗ್ಯದಾತರಾಗಿದ್ದಾರೆ.
ಬಡವರಿಗೆ ಆಧಾರ: ದಿನಂಪ್ರತಿ ಕೂಲಿ ಕಾರ್ಮಿಕರಿಗೆ, ಚಿಕ್ಕ ವೇತನ ದೊರಕುವ ಸಿಬ್ಬಂದಿಗೆ, ನಿರಾಶ್ರಿತರಿಗೆ ಈ ಊಟದ
ಮನೆ ಸಂಜೀವಿನಿಯಾಗಿದೆ. ಇಂದಿನ ದಿನಮಾನದಲ್ಲಿಕೇವಲ 12 ರೂ.ಗೆ ದಿನಂಪ್ರತಿ 2 ರೊಟ್ಟಿ ಜತೆಗೆ ಸಾಕಾಗುವಷ್ಟು ಜುನುಕಾ ಒದಗಿಸುತ್ತಿರುವುದು ವಿಶೇಷ.
ಬಡವರಿಗೆ ಅನುಕೂಲವಾಗಲೆಂಬ ಉದ್ದೇಶದಿಂದ 12ರೂ.ಗೆ ರೊಟ್ಟಿ ಊಟ ನೀಡಲಾಗುತ್ತಿದೆ. ಎಲ್ಲಿಯವರೆಗೂ ಆ ದೇವರು ಶಕ್ತಿ ನೀಡುತ್ತಾನೋ, ಅಲ್ಲಿಯವರೆಗೂ ಈ ಕಾರ್ಯ ಮುಂದುವರಿಸಿಕೊಂಡು ಹೋಗುತ್ತೇನೆ.’
ಬಸವರಾಜ ಜಾಲೋಜಿ,ಶಿಕ್ಷಕ,
ಅಮ್ಮಾ ಫೌಂಡೇಶನ್ ಸಂಸ್ಥಾಪಕ, ಬನಹಟ್ಟಿ
ಕಳೆದೆರಡು ವರ್ಷಗಳಿಂದ ಇಲ್ಲಿಯೇ ನಿತ್ಯ ಊಟ ಮಾಡುತ್ತೇನೆ. ನಿತ್ಯ 80 ರಿಂದ 100 ರೂ. ಸಂಪಾದಿಸುತ್ತೇನೆ. ಕಡಿಮೆ ದರದಲ್ಲಿ ನಿತ್ಯ ಊಟ ದೊರಕುತ್ತಿರುವುದು ನನ್ನ ಪುಣ್ಯ.
ಗುರಪಾದ ತಳವಾರ, ಕೂಲಿ ಕಾರ್ಮಿಕ.
ವೇತನ ಅಷ್ಟಕಷ್ಟೇಯಿದ್ದರೂ ಬಡವರಿಗೆ ಊಟ ಒದಗಿಸುವದರಲ್ಲಿ ತೃಪ್ತಿ ಇದೆ. ನಿರಂತರ ಸೇವೆಯಲ್ಲಿ ನೆಮ್ಮದಿಯಿದೆ.
ವಾಸಂತಿ ಮಠಪತಿ, ಅಡುಗೆ ತಯಾರಕರು.
■ ಕಿರಣ ಶ್ರೀಶೈಲ ಆಳಗಿ
Bajpe: ಸುಂಕದಕಟ್ಟೆ ಅಂಗನವಾಡಿ ಸಂಕಟದಲ್ಲಿ!
Bantwal: ರೈಲು ನಿಲ್ದಾಣ ಅಭಿವೃದ್ಧಿ; ಮಾರ್ಚ್ ತಿಂಗಳೊಳಗೆ ಬಹುತೇಕ ಪೂರ್ಣ
Uppinangady: ಜಾಗ ಮಂಜೂರಾದರೂ ಆರಂಭವಾಗದ ಅಂಬೇಡ್ಕರ್ ವಸತಿ ಶಾಲೆ
Govt: ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಹಿ ಹಾಕದೆ ವಾಪಾಸ್ ಕಳುಹಿಸಿದ ರಾಜ್ಯಪಾಲರು
America: ಹತ್ತು ಜನರಿದ್ದ ವಿಮಾನ ಅಲಾಸ್ಕಾ ಬಳಿ ಕಣ್ಮರೆ-ತೀವ್ರ ಶೋಧ ಕಾರ್ಯಾಚರಣೆ!
You seem to have an Ad Blocker on.
To continue reading, please turn it off or whitelist Udayavani.