![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 14, 2021, 5:21 PM IST
ಚಿಕ್ಕಬಳ್ಳಾಪುರ : ರಾಜ್ಯದಲ್ಲಿ 5 ಸಾವಿರ ಶಿಕ್ಷಕರನ್ನು ಟಿಇಟಿ ಮತ್ತು ಸಿಇಟಿ ಮೂಲಕ ನೇಮಕ ಮಾಡಲು ಕ್ರಮ ಕೈಗೊಳ್ಳಲಾಗಿದ್ದು ಇದರಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವ್ಯವಸ್ಥೆಯಲ್ಲಿ ಮತ್ತಷ್ಟು ಸುಧಾರಣೆಯಾಗಲಿದೆಯೆಂದು ರಾಜ್ಯ ಪ್ರಾಥಮಿಕ ಪ್ರೌಢಶಿಕ್ಷಣ ಮತ್ತು ಸಕಾಲ ಸಚಿವ ಬಿಸಿ ನಾಗೇಶ್ ತಿಳಿಸಿದರು.
ತಾಲೂಕಿನ ಅಗಲಗುರ್ಕಿಯ ಬಿ.ಜಿ.ಎಸ್ ವಿಜ್ಞಾನ ಅಕಾಡೆಮಿಯಲ್ಲಿ ಪ್ರತಿಭಾವಂತರಿಗೆ ಪುರಸ್ಕಾರ ವಿತರಣಾ ಸಮಾರಂಭದಲ್ಲಿ ಭಾಗವಹಿಸಿದ ಸುಧ್ಧಿಗಾರರೊಂದಿಗೆ ಮಾತನಾಡಿದ ಸಚಿವರು ರಾಜ್ಯದಲ್ಲಿ 13 ಸಾವಿರ ಶಿಕ್ಷಕರ ಕೊರತೆಯಿದೆ ಅದನ್ನು ನೀಗಿಸುವ ಸಲುವಾಗಿ ಹಿಂದಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು 10 ಸಾವಿರ ಶಿಕ್ಷಕರನ್ನು ನೇಮಕ ಮಾಡಲು ಪ್ರಕ್ರಿಯೆ ನಡೆಸಿದರು ಅದರಲ್ಲಿ 3000 ಶಿಕ್ಷಕರು ಅರ್ಹತೆ ಪಡೆದುಕೊಂಡಿದ್ದರು ಆದರೆ ಕೊರೊನಾ ಸೋಂಕಿನ ಪ್ರಭಾವದಿಂದ ಪ್ರಕ್ರಿಯೆ ಸ್ಥಗಿತಗೊಂಡಿತ್ತು ಪ್ರಸಕ್ತ ಸಾಲಿನಲ್ಲಿ 5 ಸಾವಿರ ಶಿಕ್ಷಕರನ್ನು ನೇಮಕ ಮಾಡಲು ಸಿದ್ದತೆಗಳನ್ನು ಮಾಡಿಕೊಂಡಿದ್ದೇವೆ ಟಿಇಟಿ-ಸಿಇಟಿ ಪರೀಕ್ಷೆಗಳ ಮೂಲಕ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದರು.
ಇದನ್ನೂ ಓದಿ :ಪುಟ್ಟ ಅಂಗಡಿಯಲ್ಲಿ ತಿಂಡಿ ಸೇವಿಸಿದ ಸೂಪರ್ ಸ್ಟಾರ್ : ವಿಡಿಯೋ
ರಾಜ್ಯದಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಅದರಲ್ಲದೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಯಾವುದೇ ರೀತಿಯ ತೊಡಕಾಗದಂತೆ ಕ್ರಮ ಕೈಗೊಂಡಿದ್ದೇವೆ ಎಂದ ಸಚಿವರು ಶಿಕ್ಷಣ ಇಲಾಖೆಯಲ್ಲಿ ವ್ಯವಸ್ಥೆಗಳನ್ನು ಸುಧಾರಿಸುವ ಸರ್ಕಾರ ಕ್ರಮ ಕೈಗೊಂಡಿದೆ ಟಿಇಟಿ ಮತ್ತು ಸಿಇಟಿ ಮೂಲಕ ಶಿಕ್ಷಕರ ನೇಮಕಾತಿ ಮಾಡಿ ಅನುಕೂಲ ಕಲ್ಪಿಸಲಾಗುವುದೆಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಪ್ರಾಥಮಿಕ ಶಾಲಾಗಳನ್ನು ಆರಂಭಿಸುವ ನಿಟ್ಟಿನಲ್ಲಿ ಆತುರದ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ ಕೋವಿಡ್-19 ನಿಯಂತ್ರಿಸಲು ರಚಿಸಿರುವ ತಜ್ಞರ ಸಮಿತಿಯ ಅಭಿಪ್ರಾಯವನ್ನು ಆಲಿಸಿ ತಜ್ಞರ ಸಮಿತಿಯ ವರದಿಯನ್ನು ಆಧರಿಸಿ ಪ್ರಾಥಮಿಕ ಶಾಲೆಗಳನ್ನು ತೆರೆಯಲು ನಿರ್ಣಯವನ್ನು ತೆಗೆದುಕೊಳ್ಳಲಾಗುವುದು ಎಂದ ಸಚಿವರು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ದೃಷ್ಠಿಯನ್ನು ಇಟ್ಟುಕೊಂಡು ಸೂಕ್ತ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದರು.
ಕಾಂಗ್ರೆಸಿಗರಿಗೆ ತಪ್ಪುಗ್ರಹಿಕೆ: ದೇಶದಲ್ಲಿ ಹೊಸ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ಜಾರಿಗೊಳಿಸುತ್ತಿಲ್ಲ 2014 ರಿಂದ 2020 ರವರೆಗೆ ಸಾರ್ವತ್ರಿಕವಾಗಿ ಚರ್ಚೆಗಳನ್ನು ನಡೆಸಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅದನ್ನು ಮಂಡಿಸಿ ಅನುಮೋದನೆ ಪಡೆದುಕೊಂಡ ನಂತರ ಅನುಷ್ಠಾನಗೊಳಿಸಲು ಕ್ರಮ ಕೈಗೊಂಡಿದ್ದೇವೆ ಎಂದ ಸಚಿವರು ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಮುನ್ನ ದೇಶಾದ್ಯಂತ ಅನೇಕ ಸಮಾವೇಶಗಳು, ಚರ್ಚೆಗಳು, ಸೆಮೀನಾರ್ಗಳು ಆಯೋಜಿಸಿ ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದೇವೆ ಈ ವಿಚಾರದಲ್ಲಿ ವಿರೋಧ ಪಕ್ಷ ಕಾಂಗ್ರೆಸ್ನವರಿಗೆ ತಪ್ಪು ಗ್ರಹಿಕೆಯಾಗಿದೆ ಅದನ್ನು ಮುಂದಿನ ದಿನಗಳಲ್ಲಿ ಸರಿಹೋಗುತ್ತದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.
ಹಿಂದಿ ಭಾಷೆ ಹೇರಿಕೆ ವಿಚಾರದಲ್ಲಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ದೇಶದಲ್ಲಿ ಮಾತೃಭಾಷೆಯಲ್ಲಿ ಶಿಕ್ಷಣ ನೀಡುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ ಈ ಮಧ್ಯೆ ಮಹಾತ್ಮ ಗಾಂದೀಜಿಯವರು ಮತ್ತು ಶಿಕ್ಷಣ ತಜ್ಞರು ಸ್ವದೇಶಿ ಸ್ವಾವಲಂಭಿ ಶಿಕ್ಷಣ ನೀಡಬೇಕೆಂದು ಹೇಳಿದರು ಕೈಗೆ ಶಿಕ್ಷಣ ಕೊಡಬೇಕು, ಬುದ್ದಿಗೆ ಶಿಕ್ಷಣ ಕೊಡಬೇಕು, ಹೃದಯಕ್ಕೆ ಶಿಕ್ಷಣ ಕೊಡಬೇಕು ಎಂಬ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ಸಚಿವರು ವಿವರಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯರಾಮರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಶೋಭ,ಜಿಲ್ಲಾ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಅಭಿಷೇಕ್ ಮತ್ತಿತರರು ಉಪಸ್ಥಿತರಿದ್ದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.