
ಸಮ್ಮಿಶ್ರ ಸರ್ಕಾರದ ಭವಿಷ್ಯ ರಾಹುಲ್, ದೇವೇಗೌಡರ ಕೈಯಲ್ಲಿದೆ: ಬಿಕೆ ಹರಿಪ್ರಸಾದ್
Team Udayavani, May 14, 2019, 4:30 PM IST

ಹುಬ್ಬಳ್ಳಿ: ಕರ್ನಾಟಕ ಸಮ್ಮಿಶ್ರ ಸರ್ಕಾರದ ಭವಿಷ್ಯ ರಾಹುಲ್ ಗಾಂಧಿ ಮತ್ತು ದೇವೇಗೌಡರ ನಿರ್ಣಯದ ಮೇಲಿದೆ. ಅವರನ್ನು ಬಿಟ್ಟು ಉಳಿದವರೆಲ್ಲರ ಮಾತುಗಳು ಕೇವಲ ರಾಜಕೀಯ ಪ್ರೇರಿತ ಮಾತ್ರ ಎಂದು ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದರು.
ಅವರು ಸೋಮವಾರ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ರಮೇಶ ಜಾರಕಿಹೊಳಿ ಈಗಲೂ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ಅವರು ನಮ್ಮ ಪಕ್ಷದಲ್ಲೇ ಇರ್ತಾರೆ ಬೇರೆ ಎಲ್ಲಿಯೂ ಹೋಗಲ್ಲ. ಅವರು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ ಎಂದರು.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಬಿಕೆ, ಮೋದಿ ಕೈಗೊಂಡ ಯೋಜನೆಗಳೆಲ್ಲ ಫೇಕ್ ಆಗಿವೆ. ಈಗ ವಿಜ್ಞಾನಿ ಆಗಿದ್ದಾರೆ. ಬಾಲಾಕೋಟ್ ದಾಳಿ ವೇಳೆ ಮೋಡದ ವಿಜ್ಞಾನಿ ಆಗಿದ್ದರು. ಮೇ 23ರ ನಂತರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೇರೆಯದ್ದೇ ಹೆಸರು ಬರಲಿದೆ ಎಂದು ಹೇಳಿದರು.
ಐಟಿ, ಸಿಬಿಐನಂತಹ ಪಕ್ಷಗಳ ಸಮ್ಮಿಶ್ರ ಸರ್ಕಾರವೇ ಎನ್ ಡಿಎ ಆಗಿದೆ. ಐಟಿ ಮತ್ತು ಇಡಿಯನ್ನು ಕೇಂದ್ರವು ರಾಜಕೀಯ ದಾಳಕ್ಕಾಗಿ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಹೀಗಾಗಿ ಕಾಂಗ್ರೆಸ್ ಮುಖಂಡರು ಇರುವ ಹೋಟೆಲ್ಗಳ ಮೇಲೆ ದಾಳಿ ಮಾಡಿಸುತ್ತಿದೆ. ಈ ದುರುಪಯೋಗಗಳ ಕುರಿತು ಮೇ 23ರ ನಂತರ ಪಕ್ಷದಿಂದ ತನಿಖೆ ನಡೆಸಲಾಗುವುದು ಎಂದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.