![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 21, 2022, 3:58 PM IST
ವಿಧಾನಸೌಧ: ಉಕ್ರೇನ್ ನಿಂದ ವಾಪಸ್ ಬಂದ ವಿದ್ಯಾರ್ಥಿಗಳ ಜೊತೆಗೆ ಆರೋಗ್ಯ ಸಚಿವ ಡಾ.ಸುಧಾಕರ್ ಅವರೌ ಸೋಮವಾರ ಮಹತ್ವದ ಸಭೆ ನಡೆಸಿದರು.
ಸಭೆಯ ಬಳಿಕ ಮಾತನಾಡಿದ ಸಚಿವ ಸುಧಾಕರ್, ಉಕ್ರೇನ್ ನಿಂದ ವಾಪಸ್ ಬಂದ ಸಾಕಷ್ಟು ಸಾಕಷ್ಟು ವಿದ್ಯಾರ್ಥಿಗಳು ಇಂದಿನ ಸಭೆಯಲ್ಲಿ ಭಾಗವಹಿಸಿದ್ದರು. ಸಿಎಂ ಸೂಚನೆ ಮೇರೆಗೆ ಸಭೆ ನಡೆಸಲಾಗಿದ್ದು, ವಿದ್ಯಾರ್ಥಿಗಳ ಕಲಿಕೆ ಮುಂದುವರೆಯಬೇಕು, ಅದಕ್ಕೆ ನಮ್ಮ ಮೊದಲ ಆದ್ಯತೆ ಎಂದರು.
ವಿದ್ಯಾರ್ಥಿಗಳು ಶೈಕ್ಷಣಿಕ ವಿಚಾರವಾಗಿ ಚರ್ಚೆ ನಡೆದಿದ್ದು, ಕರ್ನಾಟಕದಲ್ಲಿ ಸದ್ಯಕ್ಕೆ ಇರುವ ಮೆಡಿಕಲ್ ಕಾಲೇಜು ಶಿಕ್ಷಣ ಮುಂದುವರೆಯಲಿದೆ. ಕೇಂದ್ರ ಸರಕಾರದ ಜತೆಗೆ ಚರ್ಚೆ ಮಾಡುತ್ತೇವೆ. ಈಗಾಗಲೇ ಪ್ರಧಾನಿ ಕೂಡ ಇದೇ ವಿಚಾರಕ್ಕೆ ಸಭೆ ನಡೆಸಿದ್ದಾರೆ. ಇದಕ್ಕೆ ಅಂತಹ ಒಂದು ಸಮಿತಿ ರಚನೆ ಆಗಲಿದೆ. ಉಕ್ರೇನ್ ನಿಂದ ವಾಪಸ್ ಕರೆದುಕೊಂಡು ಬರುವ ವಿಚಾರದಲ್ಲಿ ಕೇಂದ್ರ ಸರ್ಕಾರದ ನೆರವು ನೀಡಿದೆ ಎಂದರು.
ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಸಹ ಮುಖ್ಯ, ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ರಾಜ್ಯದಲ್ಲಿ ಭವಿಷ್ಯದ ರೂಪಿಸುವ ಕೆಲಸ ಆಗಲಿದೆ. ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚನೆ ಆಗಲಿದೆ. ನಾಲ್ಕು ಜನ ಡಿನ್ ಗಳು ಸಹ ಸಮಿತಿಯಲ್ಲಿ ಇರಲಿದ್ದಾರೆ. ವಿದ್ಯಾರ್ಥಿಗಳು ಈಗ ಇಟ್ಟಿರುವ ಮುಖ್ಯ ಬೇಡಿಕೆ ಅಂದರೆ ತಕ್ಷಣ ಕಲಿಕೆ ಮುಂದುವರೆಸುವ ಬಗ್ಗೆ ಹೆಚ್ಚು ಆಸಕ್ತಿ ತೋರಿಸಿದ್ದಾರೆ. ಯಾವುದೇ ಕಾರಣಕ್ಕೂ ಈಗ ವಿದ್ಯಾಭ್ಯಾಸ ನಿಲ್ಲಬಾರದು ಅಂತ ಮನವಿ ಮಾಡಿಕೊಂಡಿದ್ದಾರೆ ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.