ಮನೆಬಾಗಿಲಿಗೆ ರೈಲ್ವೆ ಪಾರ್ಸೆಲ್‌ ತರಲಿದ್ದಾನೆ ಅಂಚೆಯಣ್ಣ

ಬೆಂಗಳೂರಿನಿಂದ ವಿಶಾಖಪಟ್ಟಣಂಗೆ 1.5 ಟನ್‌ ಅಗರಬತ್ತಿಯನ್ನು ಕಳುಹಿಸಿಕೊಡಲಾಯಿತು

Team Udayavani, Aug 18, 2022, 10:02 AM IST

ಮನೆಬಾಗಿಲಿಗೆ ರೈಲ್ವೆ ಪಾರ್ಸೆಲ್‌ ತರಲಿದ್ದಾನೆ ಅಂಚೆಯಣ್ಣ

ಬೆಂಗಳೂರು: ಮಾವಿನ ಹಣ್ಣು, ದೇವರ ಪ್ರಸಾದ, ಪವಿತ್ರ ಗಂಗಾ ಜಲ ಇನ್ನಿತರ ವಸ್ತುಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸಿ ಯಶಸ್ವಿ ಆಗಿರುವ ಅಂಚೆ ಇಲಾಖೆ, ಇದೀಗ ಕೈಗಾರಿಕೆ ಉತ್ಪನ್ನಗಳು, ಗೃಹೋಪಯೋಗಿ ವಸ್ತುಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸಲು ಮುಂದಾಗಿದೆ.

ಭಾರತೀಯ ರೈಲ್ವೆ ಇಲಾಖೆಯೊಂದಿಗೆ ಅಂಚೆ ಇಲಾಖೆ ಒಪ್ಪಂದ ಮಾಡಿಕೊಂಡಿದ್ದು, ಸೆಂಟ್ರೆಲ್‌ ರೈಲ್ವೆ ವಿಭಾಗದಲ್ಲಿ ಈಗಾಗಲೇ ಈ ಪಾರ್ಸೆಲ್‌ ಸೇವೆ ಯಶಸ್ವಿ ಕಾರ್ಯಾರಂಭ ಮಾಡಿದೆ. ಈ ಸೇವೆಯ ಪ್ರಾಯೋಗಿಕ ಕಾರ್ಯ ದಕ್ಷಿಣ ಭಾರತದಲ್ಲಿ ಬೆಂಗಳೂರಿನಲ್ಲಿ ನಡೆದಿದೆ.ಆರಂಭಿಕ ಹಂತದಲ್ಲಿ ಅಗರಬತ್ತಿ ಸೇರಿದಂತೆ ಇನ್ನಿತರ ಜವಳಿ ಉತ್ಪನ್ನಗಳನ್ನು ರೈಲ್ವೆ ಮೂಲಕ ಗ್ರಾಹಕರ ಮನೆಬಾಗಿಲಿಗೆ ತಲುಪಿಸುವ ಕೆಲಸ ನಡೆಯಲಿದೆ.

ಇದು ಯಶಸ್ವಿಯಾದ ಬಳಿಕ ಕೈಗಾರಿಕಾ ಉತ್ಪನ್ನಗಳು, ಗೃಹಪ ಯೋಗಿ ವಸ್ತುಗಳನ್ನು ಪಾರ್ಸೆಲ್‌ ಮೂಲಕ ನೀಡುವ ಪ್ರಕ್ರಿಯೆ ನಡೆಯಲಿದೆ ಎಂದು ಅಂಚೆ ಇಲಾಖೆಯ ಕರ್ನಾಟಕ ವೃತ್ತದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜನರ ಮನೆಗಳಿಗೆ ಪಾರ್ಸೆಲ್‌ ಸೇವೆಗಳನ್ನು ತಲುಪಿಸಲು ರೈಲ್ವೆ ವಿಭಾಗ, ಇಂಡಿಯಾ ಪೋಸ್ಟ್‌ ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಈ ಒಡಂಬಡಿಕೆಯ ಪ್ರಕಾರ ರೈಲ್ವೆಯ ಪಾರ್ಸೆಲ್‌ ವಿಭಾಗದಿಂದ ಪಾರ್ಸೆಲ್‌ ಅನ್ನು ಜನರ ಮನೆಗೆ
ತಲುಪಿಸುವ ಕೆಲಸವನ್ನು ಅಂಚೆ ಇಲಾಖೆ ಮಾಡಲಿದೆ ಮಾಡಲಿದೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ಪ್ರಾಯೋಗಿಕ ಕಾರ್ಯದಲ್ಲಿ ಬೆಂಗಳೂರಿನಿಂದ ವಿಶಾಖಪಟ್ಟಣಂಗೆ 1.5 ಟನ್‌ ಅಗರಬತ್ತಿಯನ್ನು ಕಳುಹಿಸಿಕೊಡಲಾಯಿತು. ಮುಂದಿನ ದಿನಗಳಲ್ಲಿ ಗ್ರಾಹಕರ ಅಭಿರುಚಿಗೆ ತಕ್ಕಂತೆ ಯೋಜನೆ ವಿಸ್ತರಿಸುವ ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.

ಪಾರ್ಸೆಲ್‌ ಬುಕ್ಕಿಂಗ್‌ ಹೇಗೆ?: ವ್ಯಕ್ತಿ ಅಥವಾ ಯಾವುದೇ ಕಂಪನಿ ಅಥವಾ ಉದ್ಯಮಿ ಈ ಸೌಕರ್ಯದ ಲಾಭ ಪಡೆಯಬಹುದಾಗಿದೆ. ಅಷ್ಟೇ ಅಲ್ಲ ಈ ಸೌಕರ್ಯ ಪಡೆಯಲು ಅತ್ಯಲ್ಪ ಶುಲ್ಕ ಪಾವತಿಸಬೇಕಾಗಲಿದೆ. ಈ ಸೇವೆಗಾಗಿಯೇ ಭಾರತೀಯ ರೈಲ್ವೆ ಮತ್ತು ಭಾರತೀಯ ಅಂಚೆ ಇಲಾಖೆ ಇದಕ್ಕಾಗಿ ಜಂಟಿಯಾಗಿ ಜಾಯಿಂಟ್‌ ಪಾರ್ಸೆಲ್‌ ಪ್ರಾಡಕ್ಟ್ (ಜೆಪಿಪಿ)ಎಂಬ ವ್ಯವಸ್ಥೆ ರೂಪಿಸಿವೆ. ಅಂಚೆ ಇಲಾಖೆ ಅಧಿಕಾರಿಗಳು ರೈಲ್ವೆ ಪೋರ್ಟಲ್‌ನಲ್ಲೆ ಬುಕಿಂಗ್‌ ಮಾಡಲಿದ್ದಾರೆ.

ಈ ಮೊದಲು ಗ್ರಾಹಕರು ತಮ್ಮ ವಸ್ತುಗಳನ್ನು ರೈಲ್ವೆ ಪಾರ್ಸೆಲ್‌ ಅನ್ನು ಒಂದು ಕಡೆಯಿಂದ ಮತ್ತೂಂದು ಕಡೆ ಕಳಿಸಬೇಕಾದರೆ ಖುದ್ದಾಗಿ ಅವರೇ ರೈಲ್ವೆ ಸ್ಟೇಷನ್‌ ಗೆ ಹೋಗಿ ಬುಕಿಂಗ್‌ ಮಾಡಬೇಕಾಗಿತ್ತು. ಜತೆಗೆ ತಮ್ಮ ವಸ್ತುಗಳನ್ನು ಪಡೆಯಬೇಕಾಗಿತ್ತು. ಆದರೆ ಇದೀಗ ಹೊಸ ವ್ಯವಸ್ಥೆ ಜಾರಿಯಿಂದ ಅಂಚೆ ಸಿಬ್ಬಂದಿಯೇ ರೈಲ್ವೆ ಸ್ಟೇಷನ್‌ಗೆ ಹೋಗಿ ಪಾರ್ಸಲ್‌ ನೀಡಲಿದ್ದಾರೆ. ಜತೆಗೆ ರೈಲ್ವೆ ಸ್ಟೇಷನ್‌ನಿಂದ ಪಾರ್ಸೆಲ್‌ ಪಡೆದು ಗ್ರಾಹಕರ ಮನೆಬಾಗಿಲಿಗೆ ತಲುಪಿಸಲಿದ್ದಾರೆ.

ಸೆಂಟ್ರಲ್‌ ರೈಲ್ವೆ ವಿಭಾಗ ಮುಂಬೈ, ಪುಣೆ ಮತ್ತು ನಾಗ್ಪುರದಲ್ಲಿ ಈ ಸೇವೆಯನ್ನು ಆರಂಭಿಸಿದೆ. ಅದೇ ರೀತಿಯಲ್ಲಿ ದಕ್ಷಿಣ ಭಾರತದಲ್ಲಿ ಈ ಸೇವೆಯ ಪ್ರಾಯೋಗಿಕ ಕಾರ್ಯ ಬೆಂಗಳೂರು-ವಿಖಾಪಟ್ಟಣಂ ಮೂಲಕ ಆರಂಭವಾಗಿದೆ. ಉದ್ಯಮಿಗಳು ಕೂಡ ಈ ಯೋಜನೆಯ ಲಾಭ ಪಡೆಯಬಹುದಾಗಿದೆ. ಮುಂದಿನ ದಿನಗಳಲ್ಲಿ ಗ್ರಾಹಕರ ಅಭಿರುಚಿಗೆ ತಕ್ಕಂತೆ ಯೋಜನೆ ವಿಸ್ತಾರಿಸುವ ಚಿಂತನೆ ಕೂಡ ನಡೆದಿದೆ.
●ಎಸ್‌.ರಾಜೇಂದ್ರಕುಮಾರ್‌,
ಚೀಫ್ ಪೋಸ್ಟ್‌ಮಾಸ್ಟರ್‌
ಜನರಲ್‌, ಕರ್ನಾಟಕ ವೃತ

●ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.