ಜಗತ್ತು ಬೆಳಗಿಸಬಹುದು ನಮ್ಮ ದೇಹಶಾಖ

ಮುಂಬಯಿ ಐಐಟಿಯಿಂದ ಸಂಶೋಧನೆ ಥರ್ಮೋ ಎಲೆಕ್ಟ್ರಿಕ್‌ ಡಿವೈಸ್‌ ಬಳಸಿ ವಿದ್ಯುತ್‌

Team Udayavani, Jan 5, 2020, 7:30 AM IST

30

ಬೆಂಗಳೂರು: ಸೂರ್ಯ ರಶ್ಮಿ , ಗಾಳಿಯ ವೇಗದಿಂದ ವಿದ್ಯುತ್‌ ಉತ್ಪಾದಿಸುವಂತೆ ನಮ್ಮ ದೇಹದ ಶಾಖದಿಂದಲೂ ಯಾಕೆ ವಿದ್ಯುತ್‌ ಉತ್ಪಾದನೆ ಮಾಡಬಾರದು-ಈ ನಿಟ್ಟಿನಲ್ಲಿ ಸಂಶೋಧನೆಗೆ ಮುಂಬಯಿಯ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಮುಂದಾಗಿದೆ.

ಮಳೆ ನೀರು ಕೊಯ್ಲು ಅಥವಾ ಸೂರ್ಯನ ಕಿರಣಗಳಿಂದ ಉಂಟಾಗುವ ಶಾಖವನ್ನು ವಿದ್ಯುತ್‌ ಆಗಿ ಪರಿವರ್ತಿಸುವಂತೆಯೇ ಮನು ಷ್ಯ ದೇಹದಿಂದಲೂ ಶಾಖ ಹೊರ ಹೊಮ್ಮುತ್ತದೆ. ಅದನ್ನು ವಿದ್ಯುತ್‌ ಆಗಿ ಪರಿವರ್ತಿಸಲು ಸಾಧ್ಯವಿದ್ದು, ಈ ಸಂಬಂಧ ಸಂಶೋಧನೆಯಲ್ಲಿ ಮುಂಬಯಿ ಐಐಟಿ ಸಕ್ರಿಯವಾಗಿದೆ. ಥರ್ಮೋ ಎಲೆಕ್ಟ್ರಿಕ್‌ ಡಿವೈಸ್‌ನಿಂದ ಶಾಖವನ್ನು ವೋಲ್ಟೆಜ್‌ಗೆ ಪರಿವರ್ತಿಸಿ, ಎಲೆಕ್ಟ್ರಿಕ್‌ ಉಪಕರಣ ಚಾರ್ಜಿಂಗ್‌ ಸಾಧ್ಯತೆಗಳ ಕುರಿತು ಸಂಶೋಧನೆ ನಡೆಸುತ್ತಿದೆ.

ಥರ್ಮೋ ಎಲೆಕ್ಟ್ರಿಕ್‌ ಡಿವೈಸ್‌ನಿಂದ ಉತ್ಪಾದನೆಯಾಗುವ ವಿದ್ಯುತ್‌ನ್ನು ಸಂಗ್ರ ಹಿಸುವ ವ್ಯವಸ್ಥೆ ಇಲ್ಲದಿರುವುದು ಇದುವರೆಗೆ ಇದ್ದ ಅಡ್ಡಿಯಾಗಿತ್ತು. ಆದರೆ ಈಗ ಆ ತಂತ್ರಜ್ಞಾನವನ್ನು ನಾವು ಅಭಿವೃದ್ಧಿಪಡಿಸಿದ್ದೇವೆ, ಇದರ ಬೆನ್ನಲ್ಲೇ ಮನುಷ್ಯನ ದೇಹ ಶಾಖದಿಂದ ವಿದ್ಯುತ್‌ ಉತ್ಪಾದಿಸುವ ಸಂಶೋಧನೆ ನಡೆಯು ತ್ತಿದೆ. ಇದು ಸಾಕಾರಗೊಂಡರೆ ಇಂಧನ ಕ್ಷೇತ್ರ ದಲ್ಲಿ ಹೊಸ ಶಕೆ ಆರಂಭವಾಗಲಿದೆ ಎಂದು ಮುಂಬಯಿ ಐಐಟಿಯ ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಸಿ. ಸುಬ್ರಮಣಿಯಂ “ಉದಯವಾಣಿ’ಗೆ ತಿಳಿಸಿದ್ದಾರೆ.

ಎಲ್‌ಇಡಿ ದೀಪವನ್ನೂ ಉರಿಸಬಹುದು!
ದೇಶದಲ್ಲಿ ಈ ರೀತಿಯ ತಂತ್ರಜ್ಞಾನ ಅಭಿವೃದ್ಧಿಪಡಿಸಿದ್ದು ಇದೇ ಮೊದಲು ಎಂದು ಸಂಶೋಧಕ ಸುಬ್ರಮಣಿಯಂ ಮಾಹಿತಿ ನೀಡಿದ್ದಾರೆ. ಇದರ ಮುಂದುವರಿದ ಭಾಗ ನಮ್ಮ ದೇಹ ಶಾಖದಿಂದ ವಿದ್ಯುತ್‌ ಉತ್ಪಾದನೆ ಮಾಡುವುದು. ದೇಹದ ಮೇಲಿನ ಒತ್ತಡದ ಪರಿಣಾಮ ಶಾಖ ಉಂಟಾಗುತ್ತದೆ. ಅದನ್ನು ಥರ್ಮೋಎಲೆಕ್ಟ್ರಿಕ್‌ ಡಿವೈಸ್‌ನಿಂದ ವೋಲ್ಟೆಜ್‌ ಆಗಿ ಪರಿವರ್ತಿಸಬಹುದು. ಅದರಿಂದ ಎಲೆಕ್ಟ್ರಿಕ್‌ ಉಪಕರಣಗಳನ್ನು ಚಾರ್ಜ್‌ ಮಾಡಬಹುದಾಗಿದೆ ಎಂದು ಅವರು ವಿವರಿಸಿದ್ದಾರೆ.

ವಿಜ್ಞಾನ ಲೋಕಕ್ಕೆ ಹೊಸದಲ್ಲ
ಈ ಆಲೋಚನೆ ವಿಜ್ಞಾನ ಲೋಕಕ್ಕೆ ಹೊಸದಲ್ಲ. ದೇಹದ ಶಾಖದಿಂದ ಕೆಲವು ಮಿಲಿವ್ಯಾಟ್‌ಗಳಷ್ಟು ವಿದ್ಯುತ್‌ ಉತ್ಪಾದನೆ ಮಾಡಬಹುದಾಗಿದೆ. ಸದ್ಯದ ಮಟ್ಟಿಗೆ ಆ ವಿದ್ಯುತ್ತನ್ನೂ ಪಡೆಯುವುದು ಕಷ್ಟ. ಯಾಕೆಂದರೆ, ಅದನ್ನು ಸಂಗ್ರಹಿಸಿಡುವ ವ್ಯವಸ್ಥೆಯೇ ಇಲ್ಲ.

- ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.