![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 15, 2022, 10:28 AM IST
ಖೈಬರ್ ಪಖ್ತುಂಖ್ವಾ(ಪಾಕಿಸ್ತಾನ): ಭಯೋತ್ಪಾದನೆ ಘಟನೆಗಳಿಂದ ರೋಸಿ ಹೋಗಿರುವ ಪಾಕಿಸ್ತಾನದ ಸ್ವಾತ್ ಕಣಿವೆ ಮತ್ತು ಶಾಂಗ್ಲಾ ನಿವಾಸಿಗಳು ಸಾವಿರಾರು ಸಂಖ್ಯೆಯಲ್ಲಿ ಬೀದಿಗಿಳಿದು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಪ್ರಾಕೃತಿಕ ಸೌಂದರ್ಯದ ಕಣಿವೆ ಪ್ರದೇಶದಲ್ಲಿನ ಭಯೋತ್ಪಾದನೆ ವಿರುದ್ಧ ಪಾಕ್ ಸರ್ಕಾರ ಇನ್ನೂ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ:ರೋಹಿತ್ ಅಭಿಮಾನಿಯನ್ನು ಹತ್ಯೆಗೈದ ವಿರಾಟ್ ಕೊಹ್ಲಿ ಫ್ಯಾನ್: ಏನಿದು ‘ಫ್ಯಾನ್ ವಾರ್’?
ಪ್ರಕೃತಿ ಸೌಂದರ್ಯದ ಈ ಪ್ರದೇಶದಲ್ಲಿ ಶಾಂತಿ ನೆಲೆಸುವ ನಿಟ್ಟಿನಲ್ಲಿ ಅಧಿಕಾರಿಗಳು ಉಗ್ರರನ್ನು ಬಗ್ಗುಬಡಿಯಬೇಕೆಂದು ಆಗ್ರಹಿಸಿರುವುದಾಗಿ ಡಾನ್ ವರದಿ ಮಾಡಿದೆ. ಸ್ಥಳೀಯ ಸಂಘಟನೆಯಾದ ಖ್ವಾಮಿ ಜಿರ್ಗಾ ಪ್ರತಿಭಟನೆಯನ್ನು ಆಯೋಜಿಸಿದ್ದು, ಚಾರ್ ಬಾಗ್ ನ ವಿವಿಧ ಪ್ರದೇಶಗಳಿಂದ ಹಿರಿಯರು, ಯುವಕರು, ಮಕ್ಕಳು ಭಾಗವಹಿಸಿದ್ದರು.
ಕಣಿವೆ ಪ್ರದೇಶದಲ್ಲಿ ಶಾಂತಿಯನ್ನು ಪುನರ್ ಸ್ಥಾಪಿಸಿ ಎಂಬ ಘೋಷಣೆ ಕೂಗಿ ಪ್ರತಿಭಟನೆ ನಡೆಸಿರುವುದಾಗಿ ವರದಿ ವಿವರಿಸಿದೆ. ಸೋಮವಾರ ಉಗ್ರರು ಶಾಲಾ ವಾಹನವನ್ನು ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ ನಡೆಸಿದ್ದ ಪರಿಣಾಮ ಚಾಲಕ ಸಾವನ್ನಪ್ಪಿದ್ದು, ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿತ್ತು.
ಒಂದು ವೇಳೆ ಉಗ್ರರನ್ನು ಮಟ್ಟ ಹಾಕಲು ಅಧಿಕಾರಿಗಳು ವಿಫಲರಾದರೆ, ನಾವೇ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಂಡು ಉಗ್ರರನ್ನು ಸದೆಬಡಿಯಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿರುವುದಾಗಿ ವರದಿ ತಿಳಿಸಿದೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.