Traffic Rules: ಸಂಚಾರ ನಿಯಮಾವಳಿಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳ್ಳಲಿ


Team Udayavani, Sep 25, 2024, 6:00 AM IST

traffic

ಸಂಚಾರ ನಿಯಮಾವಳಿಗಳನ್ನು ಉಲ್ಲಂ ಸುವ ವಾಹನ ಚಾಲಕರ ಚಾಲನ ಪರವಾನಿಗೆಯನ್ನು ರದ್ದುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳಿಗೆ ಬಹುತೇಕ ವಾಹನ ಚಾಲಕರು ಸಂಚಾರ ನಿಯಮಾವಳಿಗಳನ್ನು ಉಲ್ಲಂ ಸುತ್ತಿರುವುದೇ ಪ್ರಮುಖ ಕಾರಣವಾಗಿರುವುದರಿಂದ ಮುಖ್ಯಮಂತ್ರಿಗಳ ಈ ನಿರ್ದೇಶನ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ಕೇಂದ್ರ ಸರಕಾರ ಸಂಚಾರ ನಿಯಮಾವಳಿಗಳನ್ನು ಬಿಗಿಗೊಳಿಸಿದ್ದೇ ಅಲ್ಲದೆ ಸಣ್ಣಪುಟ್ಟ ಸಂಚಾರ ನಿಯಮಗಳ ಉಲ್ಲಂಘನೆಯ ಸಂದರ್ಭದಲ್ಲಿ ಈ ಹಿಂದೆ ವಿಧಿಸ ಲಾಗುತ್ತಿದ್ದ ದಂಡದ ಮೊತ್ತದಲ್ಲಿ ಭಾರೀ ಏರಿಕೆಯನ್ನು ಮಾಡಿತ್ತು. ಇದರಂತೆ ರಾಜ್ಯ ದಲ್ಲಿಯೂ ಈ ಬಿಗಿ ನಿಯಮವನ್ನು ಜಾರಿಗೆ ತರಲಾಗಿದೆಯಾದರೂ ಒಟ್ಟಾರೆ ಸಂಚಾರ ನಿಯಮಾವಳಿಗಳ ಉಲ್ಲಂಘನೆ ಪ್ರಕರಣಗಳ ಸಂಖ್ಯೆಯಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿಲ್ಲ, ಸದ್ಯ ರಾಜ್ಯದಲ್ಲಿ ದಿನಂಪ್ರತಿ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದರೆ ಭಾರೀ ಸಂಖ್ಯೆಯಲ್ಲಿ ಜನರು ಗಾಯಾಳುಗಳಾಗಿ ಅಂಗವೈಕಲ್ಯ ಸಹಿತ ತಮ್ಮ ಜೀವನಪರ್ಯಂತ ನರಕಯಾತನೆ ಅನುಭವಿಸುವಂತಾಗಿದೆ.

ವರ್ಷಗಳ ಹಿಂದೆ ರಸ್ತೆ ಅಪಘಾತಗಳಿಗೆ ರಸ್ತೆಗಳ ನಾದುರಸ್ತಿ, ಅವೈಜ್ಞಾನಿಕ ಮಾದರಿ ಯಲ್ಲಿ ನಿರ್ಮಿಸಲಾದ ರಸ್ತೆಗಳು, ತಿರುವು-ಮುರುವುಗಳಿಂದ ಕೂಡಿದ ರಸ್ತೆಗಳು ಕಾರಣ ವಾಗುತ್ತಿದ್ದರೆ ಕಳೆದ ಕೆಲವು ವರ್ಷಗಳಿಂದ ಪ್ರಮುಖ ಹೆದ್ದಾರಿಗಳನ್ನು ಹೊರತುಪಡಿಸಿ ರಾಜ್ಯದ ಹೆಚ್ಚಿನ ರಸ್ತೆಗಳು ಸುಧಾರಣೆ ಕಂಡಿವೆ. ರಸ್ತೆಗಳು ಸುವ್ಯವಸ್ಥಿತವಾಗಿರುವುದರಿಂದ ರಸ್ತೆಗಳಲ್ಲಿ ಸಂಚರಿಸುವ ವಾಹನಗಳ ವೇಗಕ್ಕೆ ಮಿತಿಯೇ ಇಲ್ಲದಂತಾಗಿದೆ.

ಅತೀ ವೇಗ, ಮದ್ಯ ಸೇವಿಸಿ ವಾಹನ ಚಾಲನೆ, ಏಕಮುಖ ರಸ್ತೆಯಲ್ಲಿ ಅಥವಾ ವಿರುದ್ಧ ದಿಕ್ಕಿನಲ್ಲಿ ವಾಹನಗಳನ್ನು ಚಲಾಯಿಸುವುದು, ಪಾರ್ಕಿಂಗ್‌ ನಿಷೇಧಿತ ಪ್ರದೇಶದಲ್ಲಿ ವಾಹನಗಳ ಪಾರ್ಕಿಂಗ್‌, ಸಮರ್ಪಕ ಸಿಗ್ನಲ್‌ಗ‌ಳನ್ನು ನೀಡದಿರುವುದು ಸಹಿತ ಹತ್ತು ಹಲವು ಸಂಚಾರ ನಿಯಮಗಳನ್ನು ವಾಹನ ಚಾಲಕರು ಸಮರ್ಪಕವಾಗಿ ಪಾಲಿಸದಿರುವ ಪರಿಣಾಮ ಅಪಘಾತಗಳು ಹೆಚ್ಚುತ್ತಲೇ ಸಾಗಿದೆ. ಈ ಕಾರಣದಿಂದಾಗಿಯೇ ಮುಖ್ಯಮಂತ್ರಿ ಅವರು ಇಂತಹ ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸುವಂತೆ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ದಂಡ ಮೊತ್ತ ಹೆಚ್ಚಳ, ಸಂಚಾರ ಕಾನೂನನ್ನು ಬಿಗಿಗೊಳಿಸಿದರೂ ಚಾಲಕರ ಧಾವಂತಕ್ಕೆ ಕಡಿವಾಣ ಹಾಕಲು ಸಾಧ್ಯವಾಗದಿರುವುದನ್ನು ಮನಗಂಡೇ ಮುಖ್ಯಮಂತ್ರಿ ಇಂತಹ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಸಾರಿಗೆ ಇಲಾಖೆ ತುರ್ತು ಗಮನ ಹರಿಸುವುದು ಸೂಕ್ತ.

ಸರಕಾರ ಇಂತಹ ಕಠಿನ ನಿಲುವು ತಾಳಿ, ಈ ಸಂಬಂಧ ಅಧಿಕೃತ ಆದೇಶ ಹೊರಡಿ ಸುವುದಕ್ಕಷ್ಟೇ ಸೀಮಿತವಾಗದೆ ಈ ನಿಯಮವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರತೀ ಬಾರಿಯೂ ಸರಕಾರ ಜನತೆಯ ಹಿತದೃಷ್ಟಿಯಿಂದ ಸದುದ್ದೇಶದಿಂದ ಕೂಡಿದ ಕಾನೂನು ನಿಯಮಾವಳಿ­ಯನ್ನು ಜಾರಿಗೊಳಿ ಸುತ್ತದೆ ಯಾದರೂ ಅದರ ಸಮರ್ಪಕ ಅನುಷ್ಠಾನದಲ್ಲಿ ಎಡವುತ್ತಿದೆ. ಲೋಪದೋಷಗಳಿಂದ ಕೂಡಿದ ಅನುಷ್ಠಾನ ಪ್ರಕ್ರಿಯೆ, ಭ್ರಷ್ಟಾಚಾರಗಳ ಕಾರಣಗಳಿಂದಾಗಿ ಯಾವೊಂದೂ ಕಾನೂನು, ನಿಯಮಾವಳಿಗಳು ತಳಮಟ್ಟದಲ್ಲಿ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಇದು ಸರಕಾರಿ ವ್ಯವಸ್ಥೆಗೆ ಬಲುದೊಡ್ಡ ಕಳಂಕವಾಗಿದ್ದು ಇದರಿಂದಾಗಿಯೇ ಸರಕಾರದ ನೈಜ ಉದ್ದೇಶ ಈಡೇರುತ್ತಿಲ್ಲ.

ಸಂಚಾರ ನಿಯಮಾವಳಿ ಉಲ್ಲಂ ಸುವ ಚಾಲಕರ ವಾಹನ ಚಾಲನ ಪರವಾನಿಗೆ ನಿರ್ದಾಕ್ಷಿಣ್ಯವಾಗಿ ರದ್ದುಗೊಳಿಸುವ ನಿರ್ಧಾರವನ್ನು ಸರಕಾರ ಕೈಗೊಂಡದ್ದೇ ಆದಲ್ಲಿ ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಇದರ ಅನುಷ್ಠಾನದ ಹೊಣೆಗಾರಿಕೆಯನ್ನು ಸಾರಿಗೆ ಮತ್ತು ಪೊಲೀಸ್‌ ಇಲಾಖೆ ಜಂಟಿಯಾಗಿ ವಹಿಸಿಕೊಳ್ಳಬೇಕು. ಈ ಎರಡು ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಸಂಚಾರ ನಿಯಮಾವಳಿಗಳು ಯಥಾವತ್ತಾಗಿ ಪಾಲನೆಯಾಗುವುದನ್ನು ಖಾತರಿಪಡಿಸಿದ್ದೇ ಆದಲ್ಲಿ ರಸ್ತೆ ಅಪಘಾತಗಳು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಲಿದೆ.

ಟಾಪ್ ನ್ಯೂಸ್

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

BR-patil

Congress ಸರಕಾರದಲ್ಲಿ ಹಣಕಾಸು ಸಮಸ್ಯೆಯಿಂದ ಶಾಸಕರ ಬೇಡಿಕೆ ಈಡೇರಿಲ್ಲ ಎನ್ನುವುದು ವಾಸ್ತವ

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

High-Court–CM

MUDA Scam: ಮುಖ್ಯಮಂತ್ರಿ ವಿರುದ್ಧ ತನಿಖೆಯ ಅಗತ್ಯವಿದೆ: ಹೈಕೋರ್ಟ್‌

weWestern Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು

Western Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು

tirupatiTirupati; Even in controversy, 14 lakh laddus were sold in 4 days

Tirupati; ವಿವಾದದಲ್ಲೂ 4 ದಿನದಲ್ಲಿ ಮಾರಾಟವಾದ ಲಡ್ಡುಗಳೆಷ್ಟು ಗೊತ್ತೇ?

Udupiಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಶಾಶ್ವತ ರಸ್ತೆ ಆಮೇಲೆ,ಸಂಚಾರ ಯೋಗ್ಯ ರಸ್ತೆಯೇ ಮೊದಲಾಗಲಿ

Udupiಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಶಾಶ್ವತ ರಸ್ತೆ ಆಮೇಲೆ,ಸಂಚಾರ ಯೋಗ್ಯ ರಸ್ತೆಯೇ ಮೊದಲಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreme-Court

Supreme Court: ಪೋಕ್ಸೋ ವ್ಯಾಪ್ತಿ ವಿಸ್ತರಣೆ: ಸುಪ್ರೀಂ ತೀರ್ಪು ಐತಿಹಾಸಿಕ

Karnataka: ಶಾಲೆಗಳು ಎದುರಿಸುತ್ತಿರುವ ನೈಜ ಸಮಸ್ಯೆಗಳನ್ನು ಪರಿಹರಿಸಿ

Karnataka: ಶಾಲೆಗಳು ಎದುರಿಸುತ್ತಿರುವ ನೈಜ ಸಮಸ್ಯೆಗಳನ್ನು ಪರಿಹರಿಸಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

BR-patil

Congress ಸರಕಾರದಲ್ಲಿ ಹಣಕಾಸು ಸಮಸ್ಯೆಯಿಂದ ಶಾಸಕರ ಬೇಡಿಕೆ ಈಡೇರಿಲ್ಲ ಎನ್ನುವುದು ವಾಸ್ತವ

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

High-Court–CM

MUDA Scam: ಮುಖ್ಯಮಂತ್ರಿ ವಿರುದ್ಧ ತನಿಖೆಯ ಅಗತ್ಯವಿದೆ: ಹೈಕೋರ್ಟ್‌

weWestern Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು

Western Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.