Tragedy: ಗೋವಾದ ಹೊಟೇಲ್ನಲ್ಲಿ ತಂಗಿದ್ದ ಯಲ್ಲಾಪುರದ ವ್ಯಕ್ತಿ ಮೃತ್ಯು!
ಹೊಟೇಲ್ ಸಿಬ್ಬಂದಿ ಮಾಹಿತಿ ಮೇರೆಗೆ ಕೊಠಡಿ ಬಾಗಿಲು ತೆರೆದ ಅಗ್ನಿಶಾಮಕದಳದ ಸಿಬ್ಬಂದಿ
Team Udayavani, Sep 26, 2024, 4:52 PM IST
ಪಣಜಿ (ಮಡಗಾಂವ್): ಗೋವಾದ ಮಡಗಾಂವ್ನಲ್ಲಿರುವ ಹೋಟೆಲ್ವೊಂದರಲ್ಲಿ ತಂಗಿದ್ದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವೃಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಮೃತ ವ್ಯಕ್ತಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾಗೋಡಿಗ ಮಾಲದ ಮನೆಯ ಸುಬ್ರಾಯ ಭಟ್ (53 ವರ್ಷ) ಎಂದು ಗುರುತಿಸಲಾಗಿದ್ದು, ಘಟನೆಗೆ ಸಂಬಂಧಿಸಿ ಲಭ್ಯವಾಗಿರುವ ಮಾಹಿತಿಯ ಅನುಸಾರ ಗೋವಾದ ಮಡಗಾಂವ್ನ ಹೋಟೆಲ್ವೊಂದರಲ್ಲಿ ಯಲ್ಲಾಪುರದ ಸುಬ್ರಾಯ ಭಟ್ ವಾಸ್ತವ್ಯ ಹೂಡಿದ್ದರು. ಆದರೆ ಮರುದಿನ ಬೆಳಗಾಗಿದ್ದರೂ ಕೊಠಡಿಯಿಂದ ಹೊರಬಾರದ್ದರಿಂದ ಅನುಮಾನಗೊಂಡು ಹೋಟೆಲ್ ಸಿಬ್ಬಂದಿ ಎಷ್ಟೇ ಬಾಗಿಲು ಬಡಿದರೂ ಬಾಗಿಲು ತೆರೆಯದ್ದರಿಂದ ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದರು.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೋಣೆಯ ಬಾಗಿಲು ತೆರೆದು ನೋಡಿದಾಗ ಸುಬ್ರಾಯ ಭಟ್ ಮಂಚದ ಮೇಲೆ ಮಲಗಿರುವ ಸ್ಥಿತಿಯಲ್ಲಿದ್ದ ಅವರ ಕೂಡಲೇ ಮಡಗಾಂವ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಇವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಇವರ ಸಾವಿಗೆ ನಿಖರವಾದ ಕಾರಣ ಇನ್ನು ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
High Court: ಪ್ರಜ್ವಲ್ “ಮಾಸ್ ರೆಪಿಸ್ಟ್’ ಹೇಳಿಕೆ: ರಾಹುಲ್ ತುರ್ತು ವಿಚಾರಣೆ ಇಲ್ಲ!
Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ
Karnataka; ರಾಜ್ಯ ಟೆನಿಸ್ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ
Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್, ಎಂಆರ್ಐ ಸೇವೆ ವ್ಯತ್ಯಯ
Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್ ಇಂದಿನಿಂದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.