ತುಳುವಿಗೆ ರಾಜ್ಯ ಭಾಷೆ ಸ್ಥಾನ; ಮತ್ತೆ ಮೂಡಿದ ನಿರೀಕ್ಷೆ

ಮುನ್ನೆಲೆಗೆ ಬಾರದ ಅಧ್ಯಯನ ಸಮಿತಿ ವರದಿ

Team Udayavani, May 31, 2023, 7:10 AM IST

ತುಳುವಿಗೆ ರಾಜ್ಯ ಭಾಷೆ ಸ್ಥಾನ; ಮತ್ತೆ ಮೂಡಿದ ನಿರೀಕ್ಷೆ

ಮಂಗಳೂರು: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವುದಕ್ಕೆ ಪೂರಕವಾಗಿ ರಾಜ್ಯ ಭಾಷೆಯನ್ನಾಗಿ ಘೋಷಿಸಬೇಕು ಎಂಬ ತುಳುನಾಡಿಗರ ಬೇಡಿಕೆ ಇನ್ನೂ ಈಡೇರಿಲ್ಲ. ಬಿಜೆಪಿ ಸರಕಾರದ ಅವಧಿಯಲ್ಲಿ ರಚಿಸಿದ ಸಮಿತಿಯ ವರದಿಯೇ ಬಹಿರಂಗಗೊಂಡಿಲ್ಲ.

ಬಿಜೆಪಿ ಸರಕಾರದ ಅವಧಿಯಲ್ಲಿ ಕರಾವಳಿಗರೇ ಆದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ ಕುಮಾರ್‌ ಮೇಲೆ ತುಳುನಾಡಿಗರಿಗೆ ಅಪಾರ ನಿರೀಕ್ಷೆ ಇತ್ತು. ತುಳುವನ್ನು 2ನೇ ಅಧಿಕೃತ ಭಾಷೆಯಾಗಿ ಘೋಷಿಸುವ ಭರವಸೆಯನ್ನೂ ನೀಡಿದ್ದರು. ಆದರೆ ಈಡೇರಲಿಲ್ಲ. ಇದೀಗ ಕಾಂಗ್ರೆಸ್‌ ನೂತನ ಸರಕಾರ ರಚನೆಯಾಗಿದ್ದು, ಮಂತ್ರಿಮಂಡಲವೂ ಅಸ್ತಿತ್ವಕ್ಕೆ ಬಂದಿದೆ. ಈಗ ಮತ್ತೆ ತುಳುನಾಡಿಗರ ಕೂಗು ಮುನ್ನೆಲೆಗೆ ಬಂದಿದೆ.

ತುಳುವನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವುದಕ್ಕೆ ಸಂಬಂಧಿಸಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಬಿಜೆಪಿ ಸರಕಾರವು ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಮೋಹನ ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿತ್ತು. ಸಮಿತಿಯು ಅಧ್ಯಯನ ನಡೆಸಿ ವಿಸ್ಕೃತ ವರದಿಯನ್ನು ಕೆಲವು ತಿಂಗಳ ಹಿಂದೆಯೇ ಸಲ್ಲಿಸಿತ್ತು. ಬಳಿಕ ಚುನಾವಣೆ ವಿಚಾರ ಮುನ್ನೆಲೆಗೆ ಬಂದ ಕಾರಣ ಆ ವರದಿ ಮೂಲೆಗೆ ಸೇರಿದೆ. ಇದೀಗ ನೂತನ ಸರಕಾರ ಅಧಿಕಾರ ವಹಿಸಿಕೊಂಡಿದ್ದು, ಈ ವರದಿ ಮುನ್ನೆಲೆಗೆ ಬರುತ್ತದೆಯೇ ಎಂದು ಕಾದು ನೋಡಬೇಕಾಗಿದೆ.

ಸ್ಪೀಕರ್‌ ಖಾದರ್‌ ಮೇಲೆ ನಿರೀಕ್ಷೆ
ತುಳು ರಾಜ್ಯ ಭಾಷೆಯಾಗಬೇಕು ಎಂಬ ಆಗ್ರಹಿಸಿದವರಲ್ಲಿ ಈಗ ಸ್ಪೀಕರ್‌ ಆಗಿರುವ ಯು.ಟಿ. ಖಾದರ್‌ ಕೂಡ ಒಬ್ಬರು. ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ತುಳು ಭಾಷೆ ಸ್ಥಾನಮಾನಕ್ಕೆ ಒತ್ತಾಯ ಮಾಡಿ “ತುಳು ಭಾಷೆ ಜಿಲ್ಲೆಯ ದೈವ ದೇವರು ಮಾತನಾಡುವ ಭಾಷೆಯಾಗಿದೆ. ಈ ಭಾಷೆಗೆ ಅದರದ್ದೇ ಆದ ಇತಿಹಾಸವಿದೆ, ಸಾಂಸ್ಕೃತಿಕ ನೆಲೆಗಟ್ಟು, ಸ್ವಂತ ಅಕಾಡೆಮಿ ಇದೆ. ರಾಜ್ಯ ಸರಕಾರ ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿ ಘೋಷಣೆ ಮಾಡಬೇಕು. ಅನೇಕ ವರ್ಷಗಳ ಇತಿಹಾಸ, ಸಾಹಿತ್ಯ, ಲಿಪಿ ಇರುವ ತುಳು ಭಾಷೆ ಅಧ್ಯಯನಕ್ಕೆ ಸಮಿತಿ ರಚಿಸಿ ಬಳಿಕ ಘೋಷಣೆ ಸರಿಯಲ್ಲ’ ಎಂದಿದ್ದರು.

ರಾಜ್ಯ ಭಾಷೆಯಾಗಿ ಬೇಡಿಕೆ
ದೇಶದ 22 ಭಾಷೆಗಳು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಂಡಿದ್ದು, ಇನ್ನೂ 44 ಭಾಷೆಗಳಿಂದ ಬೇಡಿಕೆ ಇದೆ. ಅದರಲ್ಲಿ ರಾಜ್ಯದ ತುಳು, ಕೊಡವ ಭಾಷೆಯೂ ಸೇರಿವೆ. ಅದಕ್ಕೂ ಮುನ್ನ ತುಳು ರಾಜ್ಯ ಭಾಷೆಯಾಗಲಿ ಎಂಬ ಅಭಿಯಾನ ಕೆಲವು ವರ್ಷಗಳಿಂದ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ 5 ವರ್ಷಗಳ ಹಿಂದೆಯೇ ತುಳು ಸಾಹಿತ್ಯ ಅಕಾಡೆಮಿಯಿಂದ ಕರಾವಳಿ ಭಾಗದ ಶಾಸಕರಿಗೆ ಪತ್ರ ಬರೆಯಲಾಗಿತ್ತು. ಬಳಿಕ ಅನೇಕ ಸಂಘಟನೆಗಳು ಮನವಿ ಮಾಡಿದ್ದು, ಟ್ವೀಟ್‌ ಅಭಿಯಾನಗಳು ನಡೆದಿವೆ. ಕೆಲವು ಜನಪ್ರತಿನಿಧಿಗಳು ಈ ಕುರಿತು ವಿಧಾನಸಭೆಯಲ್ಲಿ ಧ್ವನಿ ಎತ್ತಿದ್ದಾರೆ. ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿದೆ.

ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯೆಂದು ಘೋಷಿಸುವ ಸಲುವಾಗಿ ಸಮಿತಿಯು ಈಗಾಗಲೇ ವರದಿ ಸಲ್ಲಿಸಿದ್ದು, ಕಾನೂನು ಇಲಾಖೆಗೆ ಕಳುಹಿಸಲಾಗಿದೆ. ಅವರ ಕಡೆಯಿಂದ ಅಭಿಪ್ರಾಯ ಬಂದ ಬಳಿಕ ವರದಿ ಕ್ಯಾಬಿನೆಟ್‌ಗೆ ಬರಬೇಕಿದೆ. ಹೊಸ ಸರಕಾರ ಈ ಎಲ್ಲ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಆಗ್ರಹಿಸುತ್ತೇನೆ.
– ಸುನಿಲ್‌ ಕುಮಾರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಜಿ ಸಚಿವ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.