ರಾಜಧಾನಿಯಲ್ಲಿ ಅವಳಿ ಗೋಪುರ


Team Udayavani, Mar 6, 2020, 6:30 AM IST

rajadhani

ರಾಜಧಾನಿಯ ಹೃದಯ ಭಾಗದಲ್ಲಿ ಸರ್ಕಾರಿ ಕಚೇರಿಗಳೆಲ್ಲ ಒಂದೇ ಕಡೆ ಇರುವಂತೆ 400 ಕೋಟಿ ರೂ. ವೆಚ್ಚದಲ್ಲಿ ಅವಳಿ ಗೋಪುರ ನಿರ್ಮಾಣ ಯೋಜನೆ ಘೋಷಿಸಲಾಗಿದೆ. ಬೆಂಗಳೂರಿನ ಆನಂದರಾವ್‌ ವೃತ್ತದಲ್ಲಿ ಸರ್ಕಾರಿ ಕಚೇರಿಗಳನ್ನು ಒಂದೇ ಕಟ್ಟಡದಲ್ಲಿ ಅವಕಾಶ ಕಲ್ಪಿಸಲು ಉದ್ದೇಶಿಸಿದೆ. ಅದರಂತೆ 25 ಅಂತಸ್ತಿನ ಬಹುಮಹಡಿ ಅವಳಿ ಗೋಪುರ ನಿರ್ಮಾಣಕ್ಕೆ ಆಯವ್ಯಯದಲ್ಲಿ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವುದಾಗಿ ಪ್ರಕಟಿಸಿದೆ.

ರಾಜ್ಯದ ನಾನಾ ಇಲಾಖೆಗಳು ಆಯಾ ಇಲಾಖೆಯ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಪ್ರತ್ಯೇಕ ಅನುಸೂಚಿ ದರಗಳನ್ನು (ಶೆಡ್ನೂಲ್‌ ರೇಟ್‌) ಸಿದ್ಧಪಡಿಸಲಾಗುತ್ತಿದೆ. ಇದರಿಂದ ಒಂದೇ ಪ್ರದೇಶದಲ್ಲಿ ಒಂದೇ ಕಾಮಗಾರಿಗೆ ಪ್ರತ್ಯೇಕ ಅನುಸೂಚಿ ದರಗಳನ್ನು ಪರಿಗಣಿಸಲಾಗುತ್ತಿದೆ. ಎಲ್ಲ ಇಲಾಖೆಗಳು ಹಾಗೂ ನಿಗಮ- ಮಂಡಳಿಗಳಿಗೆ ಏಕರೂಪದ ಅನುಸೂಚಿ ದರಗಳನ್ನು ರೂಪಿಸಿ ಜಾರಿಗೊಳಿಸುವುದಾಗಿ ಬಜೆಟ್‌ನಲ್ಲಿ ತಿಳಿಸಲಾಗಿದೆ.

ಧಾರವಾಡ- ಬೆಳಗಾವಿ ನಡುವೆ ಕಿತ್ತೂರಿನ ಮೂಲಕ ನೂತನ ರೈಲು ಮಾರ್ಗ ನಿರ್ಮಾಣದಿಂದ ಧಾರವಾಡ- ಬೆಳಗಾವಿ ನಡುವಿನ ಅಂತರ 121 ಕಿ.ಮೀ.ನಿಂದ 73 ಕಿ.ಮೀ.ಗೆ ಇಳಿಕೆಯಾಗುತ್ತದೆ. ಜತೆಗೆ ಪ್ರಯಾಣ ಅವಧಿಯಲ್ಲಿ ಕನಿಷ್ಠ ಒಂದು ಗಂಟೆ ಉಳಿತಾಯವಾಗುತ್ತದೆ. ಆದ್ದರಿಂದ ಈ ನೂತನ ರೈಲು ಮಾರ್ಗ ಯೋಜನೆಗೆ ಉಚಿತವಾಗಿ ಭೂಮಿ ನೀಡಲು ಹಾಗೂ ಶೇ. 50ರಷ್ಟು ಕಾಮಗಾರಿ ವೆಚ್ಚವನ್ನು ಭರಿಸುವುದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಆಯವ್ಯಯದಲ್ಲಿ ದಾಖಲಿಸಲಾಗಿದೆ.

ಹಾಗೆಯೇ ಹಾಸನ- ಮಂಗಳೂರು ರೈಲು ಅಭಿವೃದ್ಧಿ ನಿಗಮವು ಸಕಲೇಶಪುರ, ಸುಬ್ರಹ್ಮಣ್ಯ ನಿಲ್ದಾಣಗಳ ನಡುವಿನ ಘಾಟಿ ಪ್ರದೇಶದ ರೈಲು ಮಾರ್ಗದ ಕ್ಷಮತೆ (ವೇಗ) ಹೆಚ್ಚಿಸುವ ಕಾಮಗಾರಿ ನಡೆಸಲು ಉದ್ದೇಶಿಸಿದೆ. ಇದರಿಂದ ಬೆಂಗಳೂರು- ಮಂಗಳೂರಿನ ನಡುವಿನ ರೈಲುಗಳ ವೇಗ ಹೆಚ್ಚುವುದಲ್ಲದೇ ಹೆಚ್ಚುವರಿ ರೈಲು ಸೇವೆ ಆರಂಭಿಸುವ ವಿಶ್ವಾಸ ವ್ಯಕ್ತಪಡಿಸಿದೆ. ಲೋಕೋಪಯೋಗಿ ಇಲಾಖೆಗೆ ಆಯವ್ಯಯದಲ್ಲಿ 11,463 ಕೋಟಿ ರೂ. ಅನುದಾನ ಕಾಯ್ದಿರಿಸಲಾಗಿದ್ದು, ಚಾಲ್ತಿ ಕಾಮಗಾರಿಗಳಿಗೆ ಹೆಚ್ಚಿನ ಹಣ ವಿನಿಯೋಗವಾಗುವ ಸಾಧ್ಯತೆ ಇದೆ.

ಪ್ರಾದೇಶಿಕ ಸಮತೋಲನ ಕಸರತ್ತು: ಪ್ರಾದೇಶಿಕ ಅಸಮಾನತೆ ನಿವಾರಿಸಿ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಹಿಂದುಳಿದ ತಾಲೂಕುಗಳ ಅಭಿವೃದ್ಧಿ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬರೋಬ್ಬರಿ 5,060 ಕೋಟಿ ರೂ. ಅನುದಾನ ಘೋಷಿಸಲಾಗಿದೆ. ರಾಜ್ಯದ ಪ್ರಾದೇಶಿಕ ಅಸಮಾನತೆ ನಿವಾರಣೆ ಸರ್ಕಾರದ ಪ್ರಮುಖ ಆದ್ಯತೆ ಎಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಯೋಜನೆಗೆ 2020-21ನೇ ಸಾಲಿನಲ್ಲಿ 3060 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಹೈದರಾಬಾದ್‌ ಕರ್ನಾಟಕ ಭಾಗವನ್ನು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿದ್ದ ಯಡಿಯೂರಪ್ಪ ಅವರು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 1,500 ಕೋಟಿ ರೂ. ಕಾಯ್ದಿರಿಸಿದ್ದಾರೆ.

ಮಾನವ ಸಂಪನ್ಮೂಲಕ್ಕೆ 500 ಕೋಟಿ: ಕಲ್ಯಾಣ ಕರ್ನಾಟಕ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘ ಹೊಸದಾಗಿ ರಚನೆಯಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಆರು ಜಿಲ್ಲೆಗಳಲ್ಲಿ ಕೃಷಿ, ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ಸ್ವಯಂ ಉದ್ಯೋಗ, ಯುವ ಸಬಲೀಕರಣ ಇತರೆ ವಲಯಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ ಮಾನವ ಸಂಪನ್ಮೂಲ ಅಭಿವೃದ್ಧಿಗಾಗಿ 500 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.