Udupi: ಇಂದು ಶ್ರೀ ಕೃಷ್ಣ ಮಠದಲ್ಲಿ 100 ನೃತ್ಯಗಾರರಿಂದ 14 ಗಂಟೆ ನೃತ್ಯ ಪ್ರದರ್ಶನ
ಬೆಳಗ್ಗಿನಿಂದ ಸಂಜೆವರೆಗೆ ಮಧ್ವಾಂಗಣ, ಸಂಜೆ ಬಳಿಕ ರಾಜಾಂಗಣದಲ್ಲಿ ಕಾರ್ಯಕ್ರಮ
Team Udayavani, Oct 17, 2024, 7:16 AM IST
ಉಡುಪಿ: ಅಭಿಜ್ಞಾ ನೃತ್ಯ ಶಾಲೆ ವತಿಯಿಂದ ಶ್ರೀಕೃಷ್ಣ ಮಠ, ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಅ.17ರಂದು ಶ್ರೀಕೃಷ್ಣಮಠ ಮಧ್ವಾಂಗಣ, ರಾಜಾಂಗಣದಲ್ಲಿ ದಾಖಲೆಗಾಗಿ 100 ಮಂದಿ 14 ಗಂಟೆಗಳ ನಿರಂತರ ಭರತನಾಟ್ಯ ಪ್ರಸ್ತುತಪಡಿಸಲಿದ್ದಾರೆ ಎಂದು ಅಭಿಜ್ಞಾ ನೃತ್ಯ ಶಾಲೆ ಮುಖ್ಯಸ್ಥೆ, ಕಾರ್ಯಕ್ರಮ ಸಂಚಾಲಕಿ ಚಂದ್ರಬಾನು ಚತುರ್ವೇದಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ನ.17ರಂದು ಬೆಳಗ್ಗೆ 9ಕ್ಕೆ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉದ್ಘಾಟನೆ ನೆರವೇರಿಸಿ ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಅಶ್ವತ್ಥ ನಾರಾಯಣ ಸ್ವಾಮಿ, ಕಂಠಶಾಲ ಪವನ್ಕುಮಾರ್ ಸಹಿತ ದಕ್ಷಿಣ ಭಾರತದ ಖ್ಯಾತ, ಹಿರಿಯ ನೃತ್ಯ ಗುರುಗಳು ಭಾಗವಹಿಸಲಿದ್ದಾರೆ. 5ರಿಂದ 60 ವರ್ಷಗಳ ವರೆಗಿನ ಮಹಿಳೆಯರು ಹೈದರಾಬಾದ್, ಚೆನ್ನೈ, ವಿಜಯವಾಡ, ಬೆಂಗಳೂರು ಸಹಿತ ನಾನಾ ಭಾಗಗಳಿಂದ ನೃತ್ಯಗಾರರು ಭಾಗವಹಿಸಲಿದ್ದಾರೆ.
ಬೆಳಗ್ಗೆ 8ರಿಂದ ನಿರಂತರ 14 ಗಂಟೆಗಳ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಗೆ ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗ್ಗಿನಿಂದ ಸಂಜೆವರೆಗೆ ಮಧ್ವಾಂಗಣ, ಸಂಜೆ ಬಳಿಕ ರಾಜಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಶಾಸ್ತ್ರೀಯ ಸಂಗೀತ ಒಳಗೊಂಡ ಭರತನಾಟ್ಯ ನೃತ್ಯಕಾರ್ಯಕ್ರಮ ಇದಾಗಿದೆ ಎಂದರು.
ಅಭಿಜ್ಞಾ ನೃತ್ಯ ಶಾಲೆ ಸಂಸ್ಥೆಯು ಆಂಧ್ರಪ್ರದೇಶದ ಹಿಂದೂಪುರದಲ್ಲಿದೆ. ಕಳೆದ 20 ವರ್ಷಗಳಿಂದ ದೇಸಿ ನೃತ್ಯ, ಭರತನಾಟ್ಯ ಕಲೆಗಳ ತರಬೇತಿಯನ್ನು ನಡೆಸಿಕೊಂಡು ಬರುತ್ತಿದೆ. ಕರ್ನಾಟಕ, ಆಂಧ್ರ ಸಹಿತ ದಕ್ಷಿಣ ಭಾರತದಲ್ಲಿ ಗಿನ್ನೆಸ್ ಬುಕ್, ಲಿಮ್ಕಾ ರೆಕಾರ್ಡ್ನಂಥ ದಾಖಲೆ ಕೂಟಗಳನ್ನು ಆಯೋಜಿಸಿ ಪ್ರಮಾಣಪತ್ರ ಪಡೆದಿದೆ ಎಂದರು. ಪುತ್ತಿಗೆ ಮಠದ ಸಾಂಸ್ಕೃತಿ ಕಾರ್ಯದರ್ಶಿ ರವೀಂದ್ರ ಆಚಾರ್ಯ ಮತ್ತು ಚಂದ್ರಮೋಹನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangaladesh illegal immigrants: ಕಾರ್ಮಿಕರ ಮಾಹಿತಿ ಸಂಗ್ರಹ ಆರಂಭಿಸಿದ ಪೊಲೀಸರು
Udupi: ಅಪ್ರಾಪ್ತೆಯ ಅತ್ಯಾಚಾರ; ಆರೋಪಿ ಖುಲಾಸೆ
Koni: ಬ್ಯಾಂಕ್ನಲ್ಲಿ ಕಳ್ಳತನಕ್ಕೆ ಯತ್ನ- ಹೈದರಾಬಾದ್ನಿಂದ ಎಚ್ಚರಿಸಿದ ಸೆಕ್ಯುರಿಟಿ ಸಂಸ್ಥೆ
Kundapura: ಲಾರಿಯಲ್ಲಿ ಮಲಗಿದ ಸ್ಥಿತಿಯಲ್ಲಿ ಮರಣ ಹೊಂದಿದ ಚಾಲಕ
Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್ರಾಜ್ ಕಾಂಚನ್
MUST WATCH
ಹೊಸ ಸೇರ್ಪಡೆ
Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ
ಭಾರತದ ವನಿತಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಕ್ಯಾಪ್ಟನ್ಸಿಗೆ ಕುತ್ತು?
Bangaladesh illegal immigrants: ಕಾರ್ಮಿಕರ ಮಾಹಿತಿ ಸಂಗ್ರಹ ಆರಂಭಿಸಿದ ಪೊಲೀಸರು
By Election: ಕಾಂಗ್ರೆಸ್ನಲ್ಲಿ ಅಭ್ಯರ್ಥಿ ಆಯ್ಕೆ: ಸಿಎಂ, ಡಿಸಿಎಂ ಜತೆ ವೇಣುಗೋಪಾಲ್ ಸಭೆ
Edible Oil Mission: ಕರಾವಳಿಗರ ಕೈ ಹಿಡಿದೀತೇ ಎಣ್ಣೆ ತಾಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.