Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

ಚಾತುರ್ಮಾಸವ್ರತ ಸಮಾರೋಪದಲ್ಲಿ ಪುತ್ತಿಗೆ ಶ್ರೀ ಬಣ್ಣನೆ

Team Udayavani, Sep 18, 2024, 12:43 AM IST

BANDARAKERI

ಉಡುಪಿ: ಭಾಗವತ ಸೂರ್ಯ ನನ್ನು ಭಕ್ತರ ಮನೆಗಳಿಗೆ ಒಯ್ದು ಬೆಳಕು ಹರಿಸಿದ ಭಂಡಾರಕೇರಿ ಶ್ರೀಪಾದರು ಜ್ಞಾನ ಭಾಸ್ಕರರು ಎಂದು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬಣ್ಣಿಸಿದರು.

ಭಂಡಾರಕೇರಿ ಮಠದಲ್ಲಿ ಮಂಗಳವಾರ ಜರಗಿದ ಭಾಗವತ ನೀರಾ ಜನೋತ್ಸವ ಹಾಗೂ ಶ್ರೀ ವಿದ್ಯೇಶತೀರ್ಥ ಶ್ರೀಪಾದರ 45ನೇ ಚಾತುರ್ಮಾಸ ಸಮಾರೋಪ ಸಮಾರಂಭದಲ್ಲಿ ಪುತ್ತಿಗೆ ಶ್ರೀಗಳು ಆಶೀರ್ವಚನ ನೀಡಿದರು. ಶ್ರೀವಿದ್ಯೇಶತೀರ್ಥ ಶ್ರೀಪಾದರು ಆಶೀರ್ವಚನ ನೀಡಿ, 1,008 ಮನೆ ಗಳಿಗೆ ಭಾಗವತ ತಲುಪಿಸುವ ಗುರಿ ಹೊಂದಿದ್ದು, ಈ ವರ್ಷದ ಅಂತ್ಯದೊಳಗೆ ಗುರಿ ತಲುಪುವ ಪ್ರಯತ್ನ ನಡೆದಿದೆ. ಆಧ್ಯಾತ್ಮಿಕವಾಗಿ ಸಮಾಜಮುಖೀ ಸೇವೆಗಳು ಹೆಚ್ಚೆಚ್ಚು ನಡೆಯಬೇಕು ಎಂದರು.

ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಆಶೀರ್ವಚನ ನೀಡಿ ಭಕ್ತಿ ಜಾಗೃತಿ ಯಿಂದ ಜನರ, ಲೋಕೋದ್ಧಾರ ಸಾಧ್ಯ. ಅದಕ್ಕೆ ಎಲ್ಲರೂ ಆದ್ಯತೆ ನೀಡಬೇಕು ಎಂದು ಹೇಳಿದರು. ಶಾಸಕ ಯಶ್‌ಪಾಲ್‌ ಎ.ಸುವರ್ಣ, ಬಡಗುಬೆಟ್ಟು ಕ್ರೆಡಿಟ್‌ ಕೋ-ಆಪ್‌. ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಉದ್ಯಮಿ ರಂಜನ್‌ ಕಲ್ಕೂರ ಉಪಸ್ಥಿತರಿದ್ದರು. ಡಾ| ಶ್ರೀನಿಧಿ ವಾಸಿಷ್ಠ ಸ್ವಾಗತಿಸಿ, ವಾಸುದೇವ ಭಟ್‌ ಪೆರಂಪಳ್ಳಿ ನಿರೂಪಿಸಿದರು.

ಶ್ರೀಕೃಷ್ಣನಿಗೆ ಚಿನ್ನದ ನಾಣ್ಯ ಸಮರ್ಪಣೆ
70ನೆಯ ಸಂವತ್ಸರದ ಅಂಗವಾಗಿ ಶ್ರೀವಿದ್ಯೇಶತೀರ್ಥ ಶ್ರೀಪಾದರು ಪರ್ಯಾಯ ಪುತ್ತಿಗೆ ಶ್ರೀಪಾದರ ಮಹತ್ವಾಕಾಂಕ್ಷೆಯ ಸ್ವರ್ಣ ಪಾರ್ಥಸಾರಥಿ ರಥ ನಿರ್ಮಾಣಕ್ಕೆ 70 ಚಿನ್ನದ ನಾಣ್ಯಗಳನ್ನು ಸಮರ್ಪಿಸಿದರು. ಒಟ್ಟು 418 ಮನೆಗಳಲ್ಲಿ ನಡೆದ ಭಾಗವತ ನೀರಾಜನ ಸಮರ್ಪಣೆ ದ್ಯೋತಕವಾಗಿ ಚಾತುರ್ಮಾಸ ವ್ರತ ಸಮಿತಿಯಿಂದ ಭಂಡಾರಕೇರಿ ಶ್ರೀಗಳಿಗೆ ನಡೆದ ನಾಣ್ಯ ತುಲಾಭಾರದಲ್ಲಿ 15 ಗ್ರಾಂ ಚಿನ್ನ, 418 ಗ್ರಾಂ ಬೆಳ್ಳಿಯನ್ನು ಸಮರ್ಪಿಸಲಾಯಿತು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.