Udupi: ತಪ್ಪಿತಸ್ಥನಿಗೆ 37 ವರ್ಷ ಕಠಿನ ಜೈಲು ಶಿಕ್ಷೆ ಪ್ರಕಟ

ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ

Team Udayavani, Aug 5, 2024, 6:30 AM IST

Court1

ಉಡುಪಿ: ಉಡುಪಿ ಮಹಿಳಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 2022ರಲ್ಲಿ ನಡೆದ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲಿನ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥನಿಗೆ ಉಡುಪಿ ಹೆಚ್ಚುವರಿ ಜಿಲ್ಲಾ  ಪೋಕ್ಸೋ ವಿಶೇಷ ನ್ಯಾಯಾಲಯವು ಒಟ್ಟು 37 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಶನಿವಾರ ಆದೇಶ ನೀಡಿದೆ.

ಕೋಟ ನಿವಾಸಿ ಸಚಿನ್‌ ಪೂಜಾರಿ (26) ಶಿಕ್ಷೆಗೆ ಒಳಗಾದ ಆರೋಪಿ. ಈತ ನೊಂದ ಬಾಲಕಿಯ ಮನೆ ಕೆಲಸಕ್ಕೆ ಬರುತ್ತಿದ್ದವಳ ಸಂಬಂಧಿಕನಾಗಿದ್ದ. ಆಕೆಯಿಂದ ಬಾಲಕಿಯ ಮೊಬೈಲ್‌ ನಂಬರ್‌ ಪಡೆದುಕೊಂಡು ಮೊಬೈಲ್‌ನಲ್ಲಿ ಚಾಟಿಂಗ್‌ ಮಾಡಿ, ಬಾಲಕಿಯ ಅಶ್ಲೀಲ ಫೋಟೋವನ್ನು ತರಿಸಿಕೊಂಡಿದ್ದ. ಅದನ್ನು ವೈರಲ್‌ ಮಾಡುವುದಾಗಿ ಹೆದರಿಸಿ ನೊಂದ ಬಾಲಕಿಯಿಂದ ಹಲವು ಬಾರಿ ಲಕ್ಷಾಂತರ ರೂ. ಹಣವನ್ನು ಪಡೆದುಕೊಂಡಿದ್ದ. ಅದೇ ರೀತಿ ಚಿನ್ನಾಭರಣಗಳನ್ನು ತರಿಸಿಕೊಂಡು ಅದನ್ನು ತನ್ನ ಸ್ವಂತ ಉಪಯೋಗಕ್ಕೆ ಬಳಸಿ ಕೆಲವು ಚಿನ್ನಾಭರಣಗಳನ್ನು ಅಡವು ಇಟ್ಟಿದ್ದ.

ಅನಂತರ 2020ರ ಸೆಪ್ಟೆಂಬರ್‌ ಹಾಗೂ ನವೆಂಬರ್‌ ತಿಂಗಳಲ್ಲಿ ಆಕೆಯನ್ನು ಎರಡು ಮೂರು ಬಾರಿ ಬಲವಂತವಾಗಿ ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಮತ್ತೆ ಹಣ ಹಾಗೂ ಚಿನ್ನಾಭರಣ ನೀಡುವಂತೆ ಪೀಡಿಸುತ್ತಿದ್ದ. ಮನೆಯಿಂದ ಕಾಣೆಯಾಗುತ್ತಿರುವ ಚಿನ್ನಾಭರಣ, ಹಣವನ್ನು ಮನೆಯವರು ಹುಡುಕುವಾಗ ಬಾಲಕಿ ಈ ಎಲ್ಲ ಘಟನೆಯ ಬಗ್ಗೆ ಮನೆಯವರಿಗೆ ತಿಳಿಸಿದ್ದಳು. ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

24 ಸಾಕ್ಷಿಗಳ ವಿಚಾರಣೆ
ಈ ಬಗ್ಗೆ ತನಿಖೆ ನಡೆಸಿದ ಮಹಿಳಾ ಠಾಣಾ ಪ್ರಭಾರ ಪೊಲೀಸ್‌ ನಿರೀಕ್ಷಕ ಮಂಜುನಾಥ್‌ ಆರೋಪಿ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಒಟ್ಟು 42 ಸಾಕ್ಷಿಗಳ ಪೈಕಿ 24 ಸಾಕ್ಷಿಗಳ ವಿಚಾರಣೆ ನಡೆಸಿದ ನ್ಯಾಯಾಲಯ 50 ದಾಖಲೆಗಳನ್ನು ಪರಿಶೀಲಿಸಿತು. ನೊಂದ ಬಾಲಕಿಯ ಸಾಕ್ಷಿ ಮತ್ತು ಸಾಂದರ್ಭಿಕ ಸಾಕ್ಷಿ ಮತ್ತು ಆರೋಪಿಯಿಂದ ವಶಪಡಿಸಲಾದ ಚಿನ್ನಾಭರಣಗಳಿಂದ ಇತರ ಸಾಕ್ಷಿದಾರರೂ ಕೂಡ ಅಭಿಯೋಜನೆ ಪರವಾಗಿ ಸಾಕ್ಷಿ ನುಡಿದಿದ್ದು, ಅದರಂತೆ ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅಭಿಪ್ರಾಯಪಟ್ಟರು.

ಬಾಲಕಿಗೆ 2 ಲಕ್ಷ ರೂ. ಪರಿಹಾರಕ್ಕೆ ಆದೇಶ
ಬಾಲಕಿಯನ್ನು ಅಪಹರಿಸಿದ್ದಕ್ಕೆ 5 ವರ್ಷ ಕಠಿನ ಜೈಲು ಶಿಕ್ಷೆ ಮತ್ತು 5,000 ರೂ. ದಂಡ, ಅತ್ಯಾಚಾರಕ್ಕೆ ಸಂಬಂಧಿಸಿ 10 ವರ್ಷ ಕಠಿನ ಶಿಕ್ಷೆ ಮತ್ತು 10 ಸಾವಿರ ರೂ. ದಂಡ, ಬಲವಂತವಾಗಿ ಹಣ ಮತ್ತು ಚಿನ್ನಾಭರಣ ಪಡೆದ ಪ್ರಕರಣಕ್ಕೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 3,000 ರೂ. ದಂಡ, ಬೆದರಿಕೆಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 2 ಸಾವಿರ ರೂ. ದಂಡ, ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ 20 ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದರು.

40 ಸಾವಿರ ರೂ. ದಂಡದ ಮೊತ್ತದಲ್ಲಿ 10 ಸಾವಿರ ರೂ. ಸರಕಾರಕ್ಕೆ ಮತ್ತು 30 ಸಾವಿರ ರೂ. ಸಂತ್ರಸ್ತೆಗೆ ನೀಡುವಂತೆ ಮತ್ತು ಸರಕಾರದಿಂದ ನೊಂದ ಬಾಲಕಿಗೆ 2 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶ ನೀಡಿದೆ. ಆರೋಪಿಯು ಎಲ್ಲ ಶಿಕ್ಷೆಯನ್ನು ಒಟ್ಟಾಗಿ ಅನುಭವಿಸುವಂತೆ ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದಿಸಿದ್ದರು.

ಟಾಪ್ ನ್ಯೂಸ್

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.