Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

ಎಂಜಿಎಂ ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನ ಮಂಡಳಿ ಪದಪ್ರದಾನ

Team Udayavani, Oct 17, 2024, 2:15 AM IST

MGM-College

ಉಡುಪಿ: ಕಡತ ಬದಲಾವಣೆಯಿಂದ ಅಥವಾ ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಎಲ್ಲವೂ ಬದಲಾಗಲಿದೆ ಎಂದಿಲ್ಲ. ವಿದ್ಯಾರ್ಥಿಗಳು ಶಿಕ್ಷಕ/ ಪ್ರಾಧ್ಯಾಪಕರ ಮನ ಗೆಲ್ಲಬೇಕು, ಪ್ರಾಧ್ಯಾಪಕರ ಅಧ್ಯಯನ ಶೀಲತೆಯ ಯುವ ಮನಸ್ಸಿನಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಮಂಗಳೂರು ವಿಶ್ವ ವಿದ್ಯಾಲಯ ಕುಲಪತಿ ಪ್ರೊ| ಪಿ.ಎಲ್‌. ಧರ್ಮ ಹೇಳಿದರು.

ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಬುಧವಾರ ಜರಗಿದ ವಿದ್ಯಾರ್ಥಿ ಕ್ಷೇಮಪಾಲನ ಮಂಡಳಿಯ ಪದಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಂಜಿಎಂ ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯದಲ್ಲೇ ದೊಡ್ಡ ಹೆಸರು ಮಾಡಿದೆ. ಕೊರೊನಾ ಸಂದರ್ಭದಲ್ಲಿ ಮೌಲ್ಯಮಾಪನ ಕೇಂದ್ರ ತೆರೆದು ಮಾದರಿಕಾರ್ಯ ನಿರ್ವಹಿಸಿದೆ. ವಿಶ್ವವಿದ್ಯಾನಿಲಯಕ್ಕೆ ಸಾಕಷ್ಟು ಕೊಡುಗೆ ನೀಡುತ್ತಾ ಬಂದಿದೆ ಎಂದು ಶ್ಲಾಘಿಸಿದರು.

ಪ್ರಾಧ್ಯಾಪಕರು ಸದಾ ಅಧ್ಯಯನ ಶೀಲರಾಗಬೇಕು. ವಿದ್ಯಾರ್ಥಿಗಳಿಗೆ ನಿರಂತರ ಪ್ರೋತ್ಸಾಹ ನೀಡಬೇಕು. ವಿದ್ಯಾರ್ಥಿಗಳು ಇಲ್ಲದೇ ಗುರು ಇರಲು ಸಾಧ್ಯವೇ ಇಲ್ಲ. ಇತ್ತೀಚಿನ ವರ್ಷಗಳಲ್ಲಿ ಶಾಲಾ ಕಾಲೇಜುಗಳು ಅಣಬೆಯಂತೆ ಹುಟ್ಟಿಕೊಳ್ಳುತ್ತಿವೆ ಮತ್ತು ಗುಣಮಟ್ಟವೂ ಯೋಚಿಸುವ ಸ್ಥಿತಿಗೆ ಬಂದಿದೆ. ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಹೀಗಾಗಿ ಸಮಾಜಕ್ಕೆ ಉತ್ತಮ ಶಿಕ್ಷಕರ ಅಗತ್ಯ ಹೆಚ್ಚಿದ್ದು, ವಿದ್ಯಾರ್ಥಿಗಳು ಶಿಕ್ಷಕ ವೃತ್ತಿಯನ್ನು ಹೆಚ್ಚೆಚ್ಚು ಆಯ್ಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಅಕಾಡೆಮಿ ಆಫ್ ಜನರಲ್‌ ಎಜುಕೇಶನ್‌(ಎಜಿಇ) ಕಾರ್ಯದರ್ಶಿ ವರದರಾಯ ಪೈ, ಶ್ರೀ ಮೋಹನ್‌ದಾಸ್‌ ಪೈ ಕೌಶಲಾಭಿವೃದ್ಧಿ ಕೇಂದ್ರದ ನಿರ್ದೇಶಕ ಟಿ.ರಂಗ ಪೈ ಶುಭ ಹಾರೈಸಿದರು. ಪ್ರಾಂಶುಪಾಲ ಪ್ರೊ| ಲಕ್ಷ್ಮೀನಾರಾಯಣ ಕಾರಂತ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಪ್ರೊ| ಅರುಣ್‌ ಕುಮಾರ್‌ ಬಿ. ಪ್ರತಿಜ್ಞಾವಿಧಿ ಬೋಧಿಸಿದರು.

ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ| ದೇವಿದಾಸ್‌ ನಾಯ್ಕ, ವಿದ್ಯಾರ್ಥಿ ಕ್ಷೇಮಪಾಲನ ಮಂಡಳಿಯ ಲಿಖೀತಾ ಪೂಜಾರಿ, ನಿಶಾಂತ್‌ ಕುಮಾರ್‌, ಟಿ. ನಿವೇದಿತಾ ಪೈ., ಆದಿತ್ಯ ಕೆ.ವಿ., ನಿಹನ್‌ ಅಲೀ ಬಾರಕೂರು, ಪೃಥ್ವಿ ಎಂ., ಗೌರಿ ನಾಯಕ್‌, ಪ್ರಥಮ್‌ ಶಂಭು, ಜೋಸ್ನಾ ಎಸ್‌. ಜಾನ್‌, ದಿನೇಶ್‌ ಶೆಟ್ಟಿ, ಸೌಂದರ್ಯ ಬಿ.ಎನ್‌., ಉಪಸ್ಥಿತ ರಿದ್ದರು. ವಿದ್ಯಾರ್ಥಿ ಕ್ಷೇಮಪಾಲನ ಮಂಡಳಿ ಅಧ್ಯಕ್ಷ ಗಣೇಶ್‌ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಅನ್ವಿತಾ ಎಂ. ತಂತ್ರಿ ವಂದಿಸಿ, ವಿನಿತಾ ಅತಿಥಿಗಳನ್ನು ಪರಿಚಯಿಸಿ, ನಿವೇದಿತಾ ಪೈ ವಿವಿಧ ಕ್ಲಬ್‌ಗಳ ಪದಾಧಿಕಾರಿಗಳ ಪಟ್ಟಿ ವಾಚಿಸಿದರು. ದೀಕ್ಷಾ ನಿರೂಪಿಸಿದರು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

ANAKU-operation

Udupi: “ಸಾಗರ್‌ ಕವಚ್‌’ ಅಣಕು ಕಾರ್ಯಾಚರಣೆ; 21 ಮಂದಿ ಬಂಧನ, 2 ಬೋಟ್‌, ವಾಹನಗಳು ವಶಕ್ಕೆ

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.