ಉಡುಪಿ ಜಿಲ್ಲೆಯಲ್ಲಿ ಮುಚ್ಚಿವೆ 12 ಶಾಲೆ; ಶಿಕ್ಷಕ- ವಿದ್ಯಾರ್ಥಿ ಅನುಪಾತದಲ್ಲಿ ಅಜಗಜಾಂತರ


Team Udayavani, Jan 15, 2022, 7:50 AM IST

ಉಡುಪಿ ಜಿಲ್ಲೆಯಲ್ಲಿ ಮುಚ್ಚಿವೆ 12 ಶಾಲೆ;  ಶಿಕ್ಷಕ- ವಿದ್ಯಾರ್ಥಿ ಅನುಪಾತದಲ್ಲಿ ಅಜಗಜಾಂತರ

ಉಡುಪಿ: ಕೊರೊನಾದಿಂದ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಏರಿಕೆಯಾಗುವ ಜತೆಗೆ ಖಾಸಗಿ ಶಾಲೆಗಳಿಗೆ ಒಂದಷ್ಟು ಪೆಟ್ಟು ಬಿದ್ದಿದೆ. ಈ ಮಧ್ಯೆ ಜಿಲ್ಲೆಯಲ್ಲಿ ತಲಾ 3 ಸರಕಾರಿ ಶಾಲೆ ಹಾಗೂ ಖಾಸಗಿ (ಅನುದಾನ ರಹಿತ) ಶಾಲೆಗಳು ಮತ್ತು 6 ಅನುದಾನಿತ ಶಾಲೆಗಳು ಬಂದ್‌ ಆಗಿವೆ.

ಬ್ರಹ್ಮಾವರದ 4, ಬೈಂದೂರು, ಕಾರ್ಕಳ, ಉಡುಪಿ ಹಾಗೂ ಕುಂದಾಪುರದ ತಲಾ 2 ಶಾಲೆಗಳು ಸೇರಿವೆ. ಇದರಲ್ಲಿ ಬಹುತೇಕ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳು. ಜಿಲ್ಲೆಯ ಸರಕಾರಿ ಶಾಲೆಗಳಲ್ಲಿ ಸುಮಾರು 60 ಸಾವಿರ, ಖಾಸಗಿ ಶಾಲೆಗಳಲ್ಲಿ 75 ಸಾವಿರ ಹಾಗೂ ಅನುದಾನಿತ ಶಾಲೆಗಳಲ್ಲಿ 22 ಸಾವಿರ ಸೇರಿದಂತೆ ಒಟ್ಟು ಸುಮಾರು 1.50 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಸರಕಾರಿ ಶಾಲೆ: 473 ಹುದ್ದೆ ಖಾಲಿ
ಜಿಲ್ಲೆಯ 650ಕ್ಕೂ ಅಧಿಕ ಸರಕಾರಿ ಶಾಲೆಗಳಲ್ಲಿ 473 ಸಹಾಯಕ ಶಿಕ್ಷಕರ ಹುದ್ದೆಗಳು ಖಾಲಿಯಿವೆ. ಇದರಲ್ಲಿ ಪ್ರೌಢಶಾಲಾ ವಿಭಾಗ ಬೇರೆ ಇರುವುದಿಂದ ಪ್ರೌಢಶಾಲೆಯಲ್ಲಿ ವಿಷಯವಾರು ಇಂಗ್ಲಿಷ್‌, ವಿಜ್ಞಾನ, ಗಣಿತ ಮೊದಲಾದ ಶಿಕ್ಷಕರ ಹುದ್ದೆಯೂ ಖಾಲಿಯಿದೆ. ಹುದ್ದೆ ಭರ್ತಿಗೆ ರಾಜ್ಯ ಸರಕಾರದಿಂದಲೇ ಕ್ರಮವಾಗಬೇಕು. ಸದ್ಯಕ್ಕೆ ಅತಿಥಿ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ.

ವೇತನ ಕಡಿಮೆ ಇರುವುದರಿಂದ ವರ್ಷದಿಂದ ವರ್ಷಕ್ಕೆ ಅತಿಥಿ ಶಿಕ್ಷಕರು ಬದಲಾಗುತ್ತಿರುತ್ತಾರೆ. ಇದು ವಿದ್ಯಾರ್ಥಿಗಳ ಕಲಿಕೆಯ ಮೇಲೂ ಪ್ರಭಾವ ಬೀರುತ್ತದೆ.

30-40 ವಿದ್ಯಾರ್ಥಿಗಳಿಗೆ ಓರ್ವ ಶಿಕ್ಷಕ
ಶಿಕ್ಷಕರ ಕೊರತೆ ಜತೆಗೆ ಶಿಕ್ಷಕ-ವಿದ್ಯಾರ್ಥಿಗಳ ಅನುಪಾತದಲ್ಲೂ ಅಜಗಜಾಂತರವಿದೆ. ಸರಕಾರದ ನಿಯಮದಂತೆ 18ರಿಂದ 22 ವಿದ್ಯಾರ್ಥಿಗಳಿಗೆ ಓರ್ವ ಶಿಕ್ಷಕ ಇರಬೇಕು. ಆದರೆ ಜಿಲ್ಲೆಯ ಬಹುತೇಕ ಶಾಲೆಗಳಲ್ಲಿ 30ರಿಂದ 40 ವಿದ್ಯಾರ್ಥಿಗಳಿಗೆ ಓರ್ವ ಶಿಕ್ಷಕರಿದ್ದಾರೆ. 583 ಸರಕಾರಿ ಪ್ರಾಥಮಿಕ ಶಾಲೆಗಳ ಪೈಕಿ 127ರಲ್ಲಿ ಮಾತ್ರ ಸರಕಾರದ ನಿಯಮದಂತೆ ಶಿಕ್ಷಕರಿದ್ದಾರೆ. 106 ಪ್ರೌಢ ಶಾಲೆಗಳ ಪೈಕಿ ಬಹುತೇಕ ಎಲ್ಲಡೆ ನಿಯಮದಂತೆ ಶಿಕ್ಷಕರಿದ್ದಾರೆ.

ಮಾಹಿತಿ ಸಂಗ್ರಹ
ಜಿಲ್ಲೆಯ ಪ್ರೌಢ ಶಾಲಾ ವಿಭಾಗದಲ್ಲಿ ಶಿಕ್ಷಕ-ವಿದ್ಯಾರ್ಥಿಗಳ ಅನುಪಾತ ಚೆನ್ನಾಗಿದೆ. ಪ್ರಾಥಮಿಕ ವಿಭಾಗದಲ್ಲಿ ಸ್ವಲ್ಪ ಕಡಿಮೆಯಿದೆ. ಹೊಸ ಶಿಕ್ಷಕರ ನೇಮಕಾತಿಯಿಂದ ಇದು ಸರಿಯಾಗಲಿದೆ. ಶಾಲೆ ಮುಚ್ಚಿರುವ ಬಗ್ಗೆ ಮಾಹಿತಿ ಸಂಗ್ರಹಿಸಬೇಕಿದೆ..
-ಮಲ್ಲೇಸ್ವಾಮಿ,
ಡಿಡಿಪಿಐ, ಉಡುಪಿ

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

4

Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.