Udupi: ಅನರ್ಹ ಬಿಪಿಎಲ್ ಕಾರ್ಡ್ ಪರಿಶೀಲನೆ: ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ
Team Udayavani, Sep 12, 2024, 6:25 AM IST
ಉಡುಪಿ: ಜಿಲ್ಲೆಯಲ್ಲಿರುವ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಪರಿಶೀಲಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ತಿಳಿಸಿದರು.
ಜಿಲ್ಲೆಯ ಒಟ್ಟು ಕುಟುಂಬಗಳ ಶೇ.85ರಷ್ಟು ಬಿಪಿಎಲ್ ಕಾರ್ಡ್ ಇದೆ. 1.97 ಲಕ್ಷ ಬಿಪಿಎಲ್ ಕಾರ್ಡ್ ಇರುವುದರಿಂದ ಅನರ್ಹರೂ ಕಾರ್ಡ್ ಪಡೆದಿರುವ ಸಾಧ್ಯತೆ ಇದೆ. ಹೀಗಾಗಿ 6 ತಿಂಗಳಿಂದ ಯಾರು ಪಡಿತರ ತೆಗೆದುಕೊಂಡಿಲ್ಲವೋ ಅವರ ಕಾರ್ಡ್ಗಳನ್ನು ಆರಂಭದಲ್ಲಿ ಮುಟ್ಟುಗೋಲು ಹಾಕುತ್ತೇವೆ. ಹಾಗೆಯೇ 1.20 ಲಕ್ಷಕ್ಕಿಂತ ಅಧಿಕ ಆದಾಯ ಇರುವ ಮತ್ತು ಮನೆಯ ಪರಿಸ್ಥಿತಿಯನ್ನು ಅವಲೋಕಿಸಿಯೇ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲಾಗುತ್ತದೆ.
ಸದ್ಯ ಈ ಪ್ರಕ್ರಿಯೆ ಆರಂಭವಾಗಿದೆ. ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಬಿಪಿಎಲ್ ಕಾರ್ಡ್ ಅರ್ಹತೆಗಿಂತ ಅಧಿಕ ಆದಾಯ ಇದ್ದಲ್ಲಿ ಕಾರ್ಡ್ ವಾಪಸ್ ಸಲ್ಲಿಸಲು ಅವಕಾಶವಿದೆ. ಸರಕಾರಿ ಅಧಿಕಾರಿ, ನೌಕರರು ದಂಡ ಪಾವತಿಸಬೇಕಾಗುತ್ತದೆ. ಉಳಿದವರು ದಂಡ ಪಾವತಿಸುವ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸಂತೆಕಟ್ಟೆ ಕಾಮಗಾರಿ ಆರಂಭ
ಸಂತೆಕಟ್ಟೆ ಓವರ್ಪಾಸ್ ಕಾಮಗಾರಿ ಈಗಾಗಲೇ ಪುನರ್ ಆರಂಭಗೊಂಡಿದೆ. ಈ ಸಂಬಂಧ ಹೆದ್ದಾರಿ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ. 2025ರ ಮಾರ್ಚ್ ಒಳಗಾಗಿ ಕಾಮಗಾರಿ ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ. ಸದ್ಯ ಬಂಡೆ ಒಡೆಯುವ ಕಾರ್ಯ ನಡೆಯುತ್ತಿದೆ. ಹೆಚ್ಚು ಕಾರ್ಮಿಕರನ್ನು ಬಳಸಿಕೊಂಡು ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲು ನಿರ್ದೇಶನ ನೀಡಿದ್ದೇವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
3.50 ಕೋ.ರೂ. ವಿನಿಯೋಗ
ಜಿಲ್ಲೆಯಲ್ಲಿ ಈವರೆಗೂ ಸುಮಾರು 235 ಕೋ.ರೂ. ಮಳೆ ಹಾನಿ ಸಂಭವಿಸಿದೆ. ಇದರ ವರದಿಯನ್ನು ಸರಕಾರಕ್ಕೆ ಸಲ್ಲಿಸಿದ್ದೇವೆ. ರಸ್ತೆ, ಶಾಲೆ, ಅಂಗನವಾಡಿ ಕಟ್ಟಡಗಳ ತುರ್ತು ದುರಸ್ತಿಗೆ ಎನ್ಡಿಆರ್ಎಫ್ ನಿಧಿಯಡಿ ಜಿಲ್ಲಾಧಿಕಾರಿ ಪಿ.ಡಿ. ಖಾತೆಯಿಂದ 3.50 ಕೋ.ರೂ. ಬಿಡುಗಡೆ ಮಾಡಲಾಗಿದೆ. ಶೀಘ್ರವೇ ಕಾಮಗಾರಿಯೂ ಆರಂಭವಾಗಿದೆ. ಗ್ರಾಮೀಣ ರಸ್ತೆಗಳ ಗುಂಡಿ ಮುಚ್ಚುವುದು ಹಾಗೂ 85 ಶಾಲೆ, ಅಂಗನವಾಡಿಗಳ ದುರಸ್ತಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.