Udupi: ಕರಾವಳಿಯ ನೇಜಿಗೆ ಒಡಿಶಾ ಕಾರ್ಮಿಕರ ಬಲ

ಮೂಲತಃ ಮೀನು ಕಾರ್ಮಿಕ ಮಹಿಳೆಯರು, ಮಳೆಗಾಲದಲ್ಲಿ ಗದ್ದೆಗಿಳಿಯಲೂ ಸೈ

Team Udayavani, Jul 7, 2024, 7:50 AM IST

Odish-Neji

ಕೋಟ: ದೂರದ ಒಡಿಶಾದ ಕೃಷಿ ಕಾರ್ಮಿಕ ಮಹಿಳೆಯರ ತಂಡವೊಂದು ಉಡುಪಿ ಜಿಲ್ಲೆಯ ಕೋಟ ಆಸುಪಾಸಿನಲ್ಲಿ ಸಾಂಪ್ರದಾಯಿಕ ಭತ್ತ ನಾಟಿಯಲ್ಲಿ ತೊಡಗಿಸಿಕೊಂಡಿದೆ.
ಕರಾವಳಿಯಲ್ಲಿ ಕಾರ್ಮಿಕರ ಕೊರತೆಯಿಂದ ಸಾಂಪ್ರದಾಯಿಕ ಭತ್ತದ ನಾಟಿ ಮರೆಯಾಗುತ್ತಿದೆ. ಆದರೆ ಸಾಂಪ್ರದಾಯಿಕ ರೀತಿಯಿಂದಲೇ ಹೆಚ್ಚು ಲಾಭ ಹಾಗೂ ಅನುಕೂಲಗಳಿವೆ ಎಂದು ಅನೇಕ ರೈತರು ಹೇಳುತ್ತಿದ್ದು, ಎಷ್ಟು ಕಷ್ಟವಾದರೂ ಈ ವಿಧಾನವನ್ನೇ ಅನುಸರಿಸುತ್ತಾರೆ. ಒಡಿಶಾದ ಕಾರ್ಮಿಕ ಮಹಿಳೆಯರ ನೇಜಿ ನಾಟಿ ಇದಕ್ಕೆ ಪೂರಕವಾಗಿದೆ.

ಮೀನುಗಾರಿಕೆ ಕಾರ್ಮಿಕರು
ಒಡಿಶಾದ ಈ ತಂಡದಲ್ಲಿ 40 ಮಂದಿ ಮಹಿಳೆಯರಿದ್ದಾರೆ. ಇವರೆಲ್ಲ ಮೂಲತಃ ಮೀನುಗಾರಿಕೆಗೆ ಸಂಬಂಧಿಸಿದ ಕೆಲಸ ಮಾಡುವವರಾಗಿದ್ದು, ಉಡುಪಿ ಸುತ್ತಮುತ್ತ ಫಿಶ್‌ಕಟ್ಟಿಂಗ್‌ ಶೆಡ್‌ ಹಾಗೂ ಮೀನಿಗೆ ಸಂಬಂಧಿಸಿದ ಇತರ ಕಾರ್ಖಾನೆಗಳಲ್ಲಿ ದುಡಿಯು ತ್ತಾರೆ. ಈ ಹಿಂದೆ ಜೂನ್‌ನಿಂದ ಆಗಸ್ಟ್‌ ತನಕ ಮೀನುಗಾರಿಕೆ ರಜೆ ಸಂದರ್ಭ ತಮ್ಮ ಊರುಗಳಿಗೆ ತೆರಳಿ ಅಲ್ಲಿ ಕೃಷಿಯಲ್ಲಿ ತೊಡಗುತ್ತಿದ್ದರು. ಆದರೆ ಪ್ರಸ್ತುತ ಉಡುಪಿಯಲ್ಲೇ ಕೆಲಸ ಸಿಗುತ್ತಿರುವುದರಿಂದ ಮತ್ತು ತಮ್ಮೂರಿಗೆ ಹೋಲಿಸಿದರೆ ಸಂಬಳವೂ ಹೆಚ್ಚು ಇರುವುದರಿಂದ ಈ ಬಾರಿ ಊರಿಗೆ ಹೋಗಿಲ್ಲ.

ಮೂಲತಃ ಕೃಷಿಕರು: ಇವರೆಲ್ಲರೂ ಮೂಲತಃ ಕೃಷಿ ಕಾರ್ಮಿಕರು. ಒಡಿಶಾದಲ್ಲೂ ಸಾಂಪ್ರದಾಯಿಕ ಭತ್ತ ನಾಟಿ ಇಲ್ಲಿನ ಮಾದರಿಯಲ್ಲೇ ನಡೆಯುತ್ತದೆ. ಈ ತಂಡದ ಮಹಿಳೆಯರು ಬೆಳಗ್ಗೆ 7ರಿಂದ 11 ಗಂಟೆ ತನಕ ನೇಜಿ ಕಿತ್ತು, ಅಪರಾಹ್ನ 1ರಿಂದ 5.30ರ ತನಕ ನಾಟಿ ಮಾಡುತ್ತಾರೆ. ಪ್ರತಿದಿನ ಎಕ್ರೆಗಟ್ಟಲೆ ಗದ್ದೆ ನಾಟಿ ಮಾಡುವ ಇವರಿಗೆದಿನಕ್ಕೆ 550 ರೂ. ಸಂಬಳ ನೀಡಲಾಗುತ್ತದೆ.

ತಂಡವು ನಾಟಿಯ ನಡುವೆ ಒಡಿಸ್ಸಿ ಜಾನಪದ ಹಾಡು ಹಾಡುತ್ತ ಖುಷಿ ಪಡೆದುಕೊಳ್ಳುತ್ತದೆ. ಸ್ಥಳೀಯ ಕಾರ್ಮಿಕರಿಗೆ ಕಡಿಮೆ ಇಲ್ಲದಂತೆ ವೇಗವಾಗಿ ಹಾಗೂ ಉತ್ತಮರೀತಿಯಲ್ಲಿ ಕೆಲಸ ಮಾಡುತ್ತಾರೆ ಎನ್ನುವುದು ಇವರಿಗೆ ಸಹಾಯಕರಾಗಿರುವ ಸ್ಥಳೀಯರ ಅನಿಸಿಕೆ. ಇವರ ಜತೆಗೆ ಕೊಪ್ಪಳ, ಗಂಗಾವತಿಯಿಂದಲೂ ನೂರಾರು ಕಾರ್ಮಿಕರು ಇಲ್ಲಿಗೆ ಆಗಮಿಸಿ ಭತ್ತ ಬೇಸಾಯದ ಕೆಲಸ ನಿರ್ವಹಿಸುತ್ತಿದ್ದಾರೆ. ಅತ್ತ ದಕ್ಷಿಣ ಕನ್ನಡದಲ್ಲಿಯೂ ಹಲವೆಡೆ ಅಡಿಕೆ ಕೃಷಿ ಕಾರ್ಮಿಕರಾಗಿ ಉತ್ತರ ಭಾರತ ದವರಿದ್ದಾರೆ. ಒಟ್ಟಾರೆ ಕರಾವಳಿಯ ಸಾಂಪ್ರ ದಾಯಿಕ ಕೃಷಿಗೆ ಹೊರ ಜಿಲ್ಲೆ, ಹೊರ ರಾಜ್ಯದ ಕಾರ್ಮಿಕರೇ ಆಧಾರವಾಗುತ್ತಿರುವಂತಿದೆ.

“ನಮಗೆ ಊರಿನಲ್ಲಿ ಸಾಕಷ್ಟು ಜಮೀನಿದ್ದು, ಇದೇ ರೀತಿ ನಾಟಿ ಮಾಡುತ್ತೇವೆ. ಈ ಕೆಲಸ ನಮಗೆ ಖುಷಿ ಕೊಡುತ್ತಿದೆ. ಹೀಗಾಗಿ ಈ ಬಾರಿ ರಜೆಯಲ್ಲಿ ಊರಿಗೆ ತೆರಳದೆ ಇಲ್ಲಿ ಕೆಲಸ ಮಾಡುತ್ತಿದ್ದೇವೆ.’ ಜೆಲ್ಲಿ, ಕಾರ್ಮಿಕ ಮಹಿಳೆ

 

ರಾಜೇಶ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

1

Manipal: ಹೊಟೇಲ್‌ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌

3

Hiriydaka: ಅಕ್ರಮ ಮರಳುಗಾರಿಕೆ ಟಿಪ್ಪರ್‌ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

Minchu Hulu Review

Minchu Hulu Review: ಮಿಂಚುಹುಳು ತಂದ ಹೊಸಕಿರಣ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.