Udupi: ಸಂತೆಕಟ್ಟೆ ಓವರ್‌ಪಾಸ್‌ ಪ್ರದೇಶ: ನಿತ್ಯ ವೆಟ್‌ಮಿಕ್ಸ್‌ ಹಾಕಿ, ಮೇಲ್ವಿಚಾರಣೆ ನಡೆಸಿ

ಜಿಲ್ಲಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

Team Udayavani, Aug 4, 2024, 7:45 AM IST

Kota-Meeting

ಮಣಿಪಾಲ: ಸಂತೆಕಟ್ಟೆ ವೆಹಿಕ್ಯುಲರ್‌ ಓವರ್‌ಪಾಸ್‌ ಪ್ರದೇಶದಲ್ಲಿ ವಾಹನಗಳ ಸುಲಭ ಸಂಚಾರಕ್ಕೆ ಅನುಕೂಲವಾಗುವಂತೆ ನಿತ್ಯ ವೆಟ್‌ಮಿಕ್ಸ್‌ ಹಾಕಬೇಕು ಮತ್ತು ನಿತ್ಯವೂ ಅದರ ಮೇಲ್ವಿಚಾರಣೆ ಮಾಡಬೇಕು. ಮಳೆ ಬಿಡುವು ನೀಡಿದ ತತ್‌ಕ್ಷಣವೇ ಕಾಮಗಾರಿ ಆರಂಭಿಸಿ ಶೀಘ್ರ ಪೂರ್ಣಗೊಳಿಸಬೇಕು ಎಂದು ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.

ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ನಡೆಯುತ್ತಿರುವುದರಿಂದ ವಾಹನ ಸವಾರರಿಗೆ, ಸ್ಥಳೀಯರಿಗೆ ಆಗುತ್ತಿರುವ ಸಮಸ್ಯೆ ಬಗ್ಗೆ “ಉದಯವಾಣಿ’ ಸರಣಿ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಸಂಸದರು ಜಿಲ್ಲಾಡಳಿತ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿ ನಿರ್ದೇಶನ ನೀಡಿದ್ದರೂ ಯಾವುದೇ ಬದಲಾವಣೆ ಆಗದ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಿದರು.

ಅಂದಾಜು ನಕ್ಷೆ ಪರಿಷ್ಕರಿಸಲು ಸೂಚನೆ
ಅಂಬಲಪಾಡಿ ವೃತ್ತದಲ್ಲಿ ಡಬಲ್‌ ಸೆಲ್‌ ಅಂಡರ್‌ಪಾಸ್‌ (ಕರಾವಳಿ ಬೈಪಾಸ್‌ ಮಾದರಿ) ನಿರ್ಮಾಣ ಮಾಡಲು ರೂಪಿಸಿರುವ ನಕ್ಷೆಯಲ್ಲಿ ಅಂಡರ್‌ಪಾಸ್‌ ವಿಸ್ತರಣೆ ಚಿಕ್ಕದಾಗಿದೆ. ಹೀಗಾಗಿ ಇದನ್ನು ಪರಿಷ್ಕರಿಸಿ ಹೊಸ ಅಂದಾಜು ನಕ್ಷೆ ಸಿದ್ಧಪಡಿಸಬೇಕು. ವಾಹನ ಸಂಚಾರಕ್ಕೆ ಸಮಸ್ಯೆಯಾಗದಂತೆ ವಿಶಾಲ ಅಂಡರ್‌ಪಾಸ್‌ ರಚಿಸಲು ಬೇಕಾದ ನಕ್ಷೆ ಸಿದ್ಧಪಡಿಸಲು ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು.

ಭೂಸ್ವಾಧೀನ ಅಂತಿಮ
ಮಲ್ಪೆ-ಆದಿಉಡುಪಿ ರಸ್ತೆ ಅಗಲಗೊಳಿಸುವ ಸಂಬಂಧ ಭೂಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಇದು ಮುಗಿದ ತತ್‌ಕ್ಷಣವೇ ಮುಂದಿನ ಚಟುವಟಿಕೆ ಆರಂಭಿಸಲಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದರು. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಮುಗಿಸಿ ಸಂಚಾರ ಮುಕ್ತಗೊಳಿಸಲು ಸಂಸದರು ಸೂಚಿಸಿದರು.

ಶಾಸಕರಾದ ಯಶ್‌ಪಾಲ್‌ ಸುವರ್ಣ, ಗುರ್ಮೆ ಸುರೇಶ್‌ ಶೆಟ್ಟಿ, ಕಿರಣ್‌ ಕೊಡ್ಗಿ, ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಆರ್‌ಒ ಪಿ.ವಿ.ಬ್ರಾಹ್ಮಣಕರ್‌, ಭೂಸ್ವಾಧೀನಾಧಿಕಾರಿಗಳು, ಎಂಜಿನಿಯರ್‌ಗಳು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

15 ದಿನಗಳಲ್ಲಿ ಇಂದ್ರಾಳಿ ಸೇತುವೆ ಕಾಮಗಾರಿ ಆರಂಭಿಸಿ
ಮುಂದಿನ 15 ದಿನಗಳಲ್ಲಿ ಇಂದ್ರಾಳಿ ರೈಲ್ವೇ ಮೇಲ್ಸೇತುವೆಯ ಕಾಮಗಾರಿ ಆರಂಭಿಸಬೇಕು. ಇನ್ನೂ ತಾಂತ್ರಿಕ ಸಮಸ್ಯೆ ಹೇಳುತ್ತಾ ಕೂರುವುದಕ್ಕೆ ಅರ್ಥವಿಲ್ಲ. ಮಳೆ ಬಿಡುವು ನೋಡಿಕೊಂಡು ಕಾಮಗಾರಿ ಆರಂಭಿಸಬೇಕು ಎಂದು ನಿರ್ದೇಶಿಸಿದರು.

ಅಧಿಕಾರಿಗಳ ಜತೆ ಕೋಟ ಸಭೆ
ಮಣಿಪಾಲ: ಕೇಂದ್ರ ಸರಕಾರದ ಯೋಜನೆಗಳನ್ನು ಫ‌ಲಾನು ಭವಿಗಳಿಗೆ ಯಾವುದೇ ವಿಳಂಬ ಇಲ್ಲದೆ ತಲುಪಿಸಬೇಕು ಹಾಗೂ ಸಣ್ಣಪುಟ್ಟ ತಾಂತ್ರಿಕ ಕಾರಣಕ್ಕಾಗಿ ಯೋಜನೆಯು ಫ‌ಲಾನುಭವಿಗಳ ಕೈತಪ್ಪಬಾರದು. ಬ್ಯಾಂಕ್‌ಗಳಿಂದ ಸರಿಯಾದ ಸಮಯದಲ್ಲಿ ಸಾಲಸೌಲಭ್ಯ ಮಂಜೂರಾಗುತ್ತಿರುವ ಬಗ್ಗೆಯೂ ಪರಿಶೀಲಿಸುತ್ತಿರಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಸಂಸದರ ಕಚೇರಿಯಲ್ಲಿ ಶನಿವಾರ ಕೃಷಿ ಇಲಾಖೆಗೆ ಸಂಬಂಧಿಸಿ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ ಯೋಜನೆ, ಕೈಗಾರಿಕೆ ಇಲಾಖೆಯ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಹಾಗೂ ಮೆಸ್ಕಾಂನ ಪ್ರಧಾನಮಂತ್ರಿ ಸೂರ್ಯ ಘರ್‌ ಯೋಜನೆ ಕುರಿತು ಆಯಾ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಕಿಸಾನ್‌ ಸಮ್ಮಾನ ಯೋಜನೆ ಯನ್ನು ಜಿಲ್ಲೆಯ ಎಲ್ಲ ಅರ್ಹ ಭೂ ಹಿಡುವಳಿದಾರರು ಪಡೆಯುವಂತಾ ಗಬೇಕು. ಯಾರೂ ಯೋಜನೆ ಯಿಂದ ಹೊರಗೆ ಉಳಿಯಬಾರದು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು. ಪಿ.ಎಂ. ವಿಶ್ವಕರ್ಮ ಯೋಜನೆ ಅತ್ಯಂತ ಮಹತ್ವದ್ದಾಗಿದ್ದು, ಕೌಶಲ ತರಬೇತಿಯ ಜತೆಗೆ ಶಿಷ್ಯವೇತನ ಹಾಗೂ ಕಿಟ್‌ಗಳನ್ನು ಸಂಬಂಧಪಟ್ಟ ವೃತ್ತಿಯಲ್ಲಿ ಪ್ರಾವೀಣ್ಯ ಪಡೆದವರಿಗೆ ನೀಡಲಾಗುತ್ತದೆ. ನಮ್ಮಲ್ಲಿ ಟೈಲರಿಂಗ್‌ ಜಾಸ್ತಿ ನೋಂದಣಿ ಆಗುತ್ತಿದೆ. ಅದೇ ರೀತಿ ಇನ್ನುಳಿದ ವೃತ್ತಿ ಬಾಂಧವರು ನೋಂದಣಿ ಮಾಡುವಂತೆ ಪ್ರೇರೇಪಿಸಬೇಕು ಎಂದು ಹೇಳಿದರು.

ಕೃಷಿ ಇಲಾಖೆಯ ಅಧಿಕಾರಿಗಳಾದ ಡಾ| ಸೀತಾ, ಚಂದ್ರಶೇಖರ್‌, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ವಿ. ನಾಯಕ್‌, ಮೆಸ್ಕಾಂನ ಹಿರಿಯ ಅಧಿಕಾರಿಗಳು, ಯೋಜನೆಗಳ ಅನುಷ್ಠಾನಾಧಿಕಾರಿಗಳು, ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ಸಹಿತ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.