Udupi: ಆ.1- ಸೆ.1ರವರೆಗೆ ಕೃಷ್ಣಮಠದಲ್ಲಿ ಶ್ರೀ ಕೃಷ್ಣ ಮಾಸೋತ್ಸವ

ಒಂದು ತಿಂಗಳು ನಿರಂತರ ಕಾರ್ಯಕ್ರಮ ರಾಜಾಂಗಣ, ಗೀತಾ ಮಂದಿರದಲ್ಲಿ ಆಯೋಜನೆ: ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು

Team Udayavani, Jul 30, 2024, 6:35 AM IST

Udupi-krishna-Mata

ಉಡುಪಿ: ಶ್ರೀ ಕೃಷ್ಣ ಮಠ, ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಕೃಷ್ಣ ಲೀಲೋತ್ಸವವನ್ನು ಸಾಂಪ್ರದಾಯಿಕವಾಗಿ ಮತ್ತು ವೈಭವ ಪೂರ್ಣವಾಗಿ ಆಚರಿಸುವ ಪ್ರಯುಕ್ತ ಆ.1ರಿಂದ ಸೆ.1ರ ವರೆಗೆ ಶ್ರೀ ಕೃಷ್ಣ ಮಾಸೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಪರ್ಯಾಯ ಮಠಾಧೀಶರಾದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ನುಡಿದರು.

ಶ್ರೀಕೃಷ್ಣ ಮಠದ ಕನಕ ಮಂಟಪದಲ್ಲಿ ಸೋಮವಾರ ಜರಗಿದ ಸುದ್ದಿಗೋಷ್ಠಿ ಯಲ್ಲಿ ಶ್ರೀಪಾದರು ಮಾಹಿತಿ ನೀಡಿ, ಶ್ರೀ ಕೃಷ್ಣನು ಅವತರಿಸಿದ ದಿನವನ್ನು ಕೃಷ್ಣಜನ್ಮಾಷ್ಟಮಿಯಾಗಿ ಆಚರಿಸಲಾಗು ತ್ತದೆ. ಕಾರ್ಯಕ್ರಮ ವ್ಯವಸ್ಥಿತವಾಗಿ ಆಯೋಜಿಸುವ ದೃಷ್ಟಿಯಿಂದ ಸಮಿತಿ ರಚಿಸಲಾಗಿದೆ. ಆ.1ರಂದು ಗುರುಗಳಾದ ಶ್ರೀಸುಜ್ಞಾನೇಂದ್ರ ತೀರ್ಥರ ಸಂಸ್ಮರಣೆಯೊಂದಿಗೆ ಶ್ರೀ ಕೃಷ್ಣ ಮಾಸೋತ್ಸವ ಆರಂಭವಾಗಲಿದೆ. ಪ್ರತಿ ದಿನವೂ ವಿವಿಧ ಕಾರ್ಯಕ್ರಮ, ಸ್ಪರ್ಧೆ ಇರಲಿದೆ ಎಂದರು.

ನಾಲ್ಕು ಉತ್ಸವ: ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಲಡ್ಡೋತ್ಸವ, ಸಾಮೂಹಿಕ ಡೋಲೋತ್ಸವ, ಕ್ರೀಡೋತ್ಸವ ಹಾಗೂ ಗೀತೋತ್ಸವ ನಡೆಯಲಿದೆ. ಕೃಷ್ಣಜನ್ಮಾಷ್ಟಮಿ ಎಂದರೆ ಲಡ್ಡು, ಉಂಡಿ, ಚಕ್ಕುಲಿಗಳು ಪ್ರಮುಖ ವಾಗಿರುತ್ತವೆ. ಲಡ್ಡು ಮಾಡಲು ಉತ್ತೇಜನ ನೀಡುವುದು ಮತ್ತು 108 ಬಗೆಯ ಲಡ್ಡುಗಳನ್ನು ಶ್ರೀಕೃಷ್ಣನಿಗೆ ಸಮರ್ಪಿಸಲಾಗುವುದು. ಡೋಲೋತ್ಸವದಲ್ಲಿ ತೊಟ್ಟಿಲೋತ್ಸವ ಇತ್ಯಾದಿಗಳು ವೈಭವದಿಂದ ನಡೆಯಲಿವೆ. ಕ್ರೀಡೋತ್ಸವದಲ್ಲಿ ಜನಪದ ಕ್ರೀಡೆಗಳು, ಹುಲಿಕುಣಿತ, ವಿವಿಧ ಸ್ಪರ್ಧೆಗಳು ನಡೆಯಲಿವೆ. ಗೀತೋತ್ಸವದಲ್ಲಿ ಭಗದ್ಗೀತೆಯ ಪಠನ ಸಹಿತವಾಗಿ ಕೋಟಿಗೀತ ಲೇಖನ ಯಜ್ಞ, ಭಗವದ್ಗೀತೆ ಸಾಮೂಹಿಕ ಗಾಯನ ಇತ್ಯಾದಿ ನಿರಂತರವಾಗಿ ನಡೆಯಲಿದೆ ಎಂದರು.

ರಾಷ್ಟ್ರೀಯ ಹಬ್ಬದಂತೆ ಆಚರಣೆ
ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ರಾಷ್ಟ್ರೀಯ ಹಬ್ಬದಂತೆ ಆಚರಿಸಬೇಕು. ಶ್ರೀ ಕೃಷ್ಣಮಠದಲ್ಲಿ ಒಂದು ತಿಂಗಳು ನಿರಂತರ ಕಾರ್ಯಕ್ರಮ ರಾಜಾಂಗಣ ಹಾಗೂ ಗೀತಾ ಮಂದಿರದಲ್ಲಿ ನಡೆಯಲಿದೆ ಎಂದರು.
ಶ್ರೀ ಮಠದ ದಿವಾನ ನಾಗರಾಜ ಆಚಾರ್ಯ ಮಾತನಾಡಿ, ಆ.1ರಂದು ರಾಜಾಂಗಣದಲ್ಲಿ ಶ್ರೀ ಕೃಷ್ಣ ಮಾಸೋತ್ಸವಕ್ಕೆ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು, ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶತೀರ್ಥ ಶ್ರೀಪಾದರು, ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನೆರವೇರಲಿದೆ ಎಂದರು.

ಶ್ರೀಮಠದ ರಮೇಶ್‌ ಭಟ್‌ ಅವರು ಕ್ರೀಡೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಶ್ರೀ ಮಠದ ಪ್ರಸನ್ನ ಆಚಾರ್ಯ, ರಾಘವೇಂದ್ರ ಆಚಾರ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.