Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

ಗಣಪಯ್ಯ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿ ಸೂರಿಕುಮೇರು ಕೆ. ಗೋವಿಂದ ಭಟ್‌ ಮನದ ಮಾತು

Team Udayavani, Oct 8, 2024, 1:16 AM IST

MGM-govinda-Bhat

ಉಡುಪಿ: ಕಾರ್ಕಳ ಬೈಲೂರು ಸೀತಾನದಿ ಗಣಪಯ್ಯ ಶೆಟ್ಟಿ ಪ್ರತಿಷ್ಠಾನದ 37ನೇ ವರ್ಷದ ಸಂಸ್ಮರಣೆ-ಪ್ರಶಸ್ತಿ ಪ್ರದಾನ ಸಮಾರಂಭ ಸೋಮವಾರ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜರಗಿತು.

ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್‌ ಸೂರಿಕುಮೇರು ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಗೋವಿಂದ ಭಟ್‌ ಅವರು, ನಾನು ಕಲಾವಿದ ಎಂದು ಹೇಳಿಕೊಂಡವನಲ್ಲ. ಕಲಾವಿದನಾಗಿ ಈ ಕ್ಷೇತ್ರದಲ್ಲಿ ಪ್ರತಿಹಂತದಲ್ಲಿ ಕಲಿಯುವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದವನು. ರಂಗಭೂಮಿಯನ್ನು ಮೂರ್ತೀಕರಿಸುವ ಕೆಲಸ ರಂಗಕರ್ಮಿಗಳಿಂದ ನಡೆಯಬೇಕು. ಸೀತಾನದಿ ಗಣಪಯ್ಯ ಶೆಟ್ಟಿ ಶ್ರೇಷ್ಠ ಕಲಾವಿದರಾಗಿ ಗುರುತಿಸಿಕೊಂಡವರು. ಅವರೊಂದಿಗೆ ತಾಳಮದ್ದಳೆ ಅರ್ಥಧಾರಿಯಾಗಿದ್ದೆ ಎಂದು ಅವರೊಂದಿಗಿನ ಒಡನಾಡ ಮತ್ತು ಅವರ ವ್ಯಕ್ತಿತ್ವವನ್ನು ಸ್ಮರಿಸಿದರು.

ಎಂಐಟಿ ಪ್ರಾಧ್ಯಾಪಕ ಎಸ್‌. ವಿ. ಉದಯಕುಮಾರ್‌ ಶೆಟ್ಟಿ ಅಭಿನಂದನ ಭಾಷಣ ಮಾಡಿ, ಗೋವಿಂದ ಭಟ್ಟರು ಯಕ್ಷಗಾನ ಕ್ಷೇತ್ರದಲ್ಲಿ ಶ್ರೇಷ್ಠ ಕಲಾವಿದರಾಗಿ ಗುರುತಿಸಿಕೊಂಡವರು. ಸಾವಿರಾರು ಶಿಷ್ಯರಿಗೆ ಯಕ್ಷಗಾನ ಪಾಠ ಹೇಳಿಕೊಟ್ಟ ಮಹಾಗುರು. ಧರ್ಮಸ್ಥಳ ಮೇಳದ ಕಂಬವಾಗಿದ್ದ ಇವರು ಜನರ ಅಚ್ಚುಮೆಚ್ಚಿನ ಕಲಾವಿದರಾಗಿ ಎಲ್ಲ ಪಾತ್ರಗಳಿಗೂ ಜೀವ ತುಂಬುತ್ತಿದ್ದ ಸಮರ್ಥ ಪ್ರತಿಭೆಯಾಗಿದ್ದವರು ಎಂದು ಬಣ್ಣಿಸಿದರು.

ಪ್ರತಿಷ್ಠಾನದ ಅಧ್ಯಕ್ಷ ಪಿ. ಕಿಶನ್‌ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ| ಬಿ. ಜಗದೀಶ್‌ ಶೆಟ್ಟಿ, ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ, ಎಂಜಿಎಂ ಕಾಲೇಜು ಪ್ರಾಂಶುಪಾಲ ಪ್ರೊ| ಲಕ್ಷ್ಮೀನಾರಾಯಣ ಕಾರಂತ, ಪ್ರತಿಷ್ಠಾನದ ಗೌರವ ಸಲಹೆಗಾರ ಎಸ್‌. ಜಯರಾಮ ಶೆಟ್ಟಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಪ್ರತಿಷ್ಠಾನದ ಪ್ರ. ಕಾರ್ಯದರ್ಶಿ ಎಸ್‌. ಅಶೋಕ್‌ ಕುಮಾರ್‌ ಶೆಟ್ಟಿ ಪ್ರಸ್ತಾವನೆಗೈದರು. ಉಪಾಧ್ಯಕ್ಷ ಭುವನಪ್ರಸಾದ್‌ ಹೆಗ್ಡೆ ವಂದಿಸಿ, ಸಂಚಾಲಕ ಸೀತಾನದಿ ವಿಠಲ ಶೆಟ್ಟಿ ನಿರೂಪಿಸಿದರು. ಇಂದ್ರಾಳಿ ಯಕ್ಷಗಾನ ಕೇಂದ್ರದ ಕಲಾವಿದರಿಂದ ವೀರ ಬಭ್ರುವಾಹನ ಪ್ರಸಂಗ ಪ್ರಸ್ತುತಿಗೊಂಡಿತು.

ಟಾಪ್ ನ್ಯೂಸ್

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

Mangalur

PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

HAALUMADDI

Vitla: ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ

Tejasvi

Govt. Bungalow: ತೇಜಸ್ವಿ ಯಾದವ್ ತೆರವುಗೈದ ಸರಕಾರಿ ಬಂಗಲೆಯಲ್ಲಿ ಸೋಫಾ, ಎಸಿ ನಾಪತ್ತೆ!

1-dd-abbb

Dipa Karmakar; 31 ರ ಹರೆಯದಲ್ಲೇ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಜಿಮ್ನಾಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Bramavara: ಪೊಲೀಸರಿಗೆ ತಿಳಿಸದೆ ಅಂತ್ಯಕ್ರಿಯೆ; ದೂರು ದಾಖಲು

fraudd

Bramavara: ಟಾಟಾ ಪ್ಲೇ ಅಳವಡಿಕೆ ನೆಪದಲ್ಲಿ ವಂಚನೆ

1

Udupi: ಅಸಹಾಯಕ ಸ್ಥಿತಿಯಲ್ಲಿದ್ದ ಬಾಲಕಿಯ ರಕ್ಷಣೆ

Inauguration of ‘The Ocean Pearl Times Square’ in Udupi on Oct. 09

Ocean Pearl; ಅ.09ರಂದು ಉಡುಪಿಯಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್ʼ ಉದ್ಘಾಟನೆ

7(3)

Kaup: ಉಚ್ಚಿಲ ದಸರೆಗೆ ವಸ್ತುಪ್ರದರ್ಶನ ಮೆರುಗು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

1-gk

Shri Rama Sena;ನ. 4ರಿಂದ ದತ್ತಮಾಲಾ ಅಭಿಯಾನ

Mangalur

PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.