Ullala: ಬಸ್-ಕಾರು ಅಪಘಾತ; ನಾಲ್ವರಿಗೆ ಗಾಯ
Team Udayavani, Oct 16, 2024, 2:46 AM IST
ಉಳ್ಳಾಲ: ಬಸ್ -ಕಾರು ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಕಲ್ಕಟ್ಟ ಸಮೀಪದ ತಿರುವಿನಲ್ಲಿ ಮಂಗಳವಾರ ಸಂಜೆ ವೇಳೆ ಸಂಭವಿಸಿದೆ.
ಅಪಘಾತದಲ್ಲಿ ಆಸೀಫ್ ಕಲ್ಕಟ್ಟ, ಅರಾಫತ್ ಇನೋಳಿ, ಚಾಲಕ ಅಝ್ಮಾನ್, ಹ್ಯಾರೀಸ್ ಕಲ್ಕಟ್ಟ ಗಾಯಗೊಂಡಿದ್ದಾರೆ. ಮುಡಿಪುವಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ಸು ಮತ್ತು ನಾಟೆಕಲ್ನಿಂದ ಕಲ್ಕಟ್ಟ ಕಡೆಗೆ ಹೋಗುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ.
ನಾಲ್ವರನ್ನು ಕದ್ರಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲ್ಕಟ್ಟ ತಿರುವು ಪ್ರದೇಶ ಅಪಘಾತ ವಲಯವಾಗಿದ್ದು, ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.