![Arrested: ಸರ್ಕಾರಿ ನೌಕರಿ ಆಸೆ ತೋರಿಸಿ 46 ಜನಕ್ಕೆ 1 ಕೋಟಿ ವಂಚನೆ: ರೈಲ್ವೆ ಅಧಿಕಾರಿ ಸೆರೆ](https://www.udayavani.com/wp-content/uploads/2024/12/5-62-415x249.jpg)
ಉಳ್ಳಾಲ: ವ್ಯಕ್ತಿ ಸಮುದ್ರಪಾಲು, ಪುತ್ರನ ರಕ್ಷಣೆ
Team Udayavani, Apr 25, 2023, 6:12 AM IST
![ಉಳ್ಳಾಲ: ವ್ಯಕ್ತಿ ಸಮುದ್ರಪಾಲು, ಪುತ್ರನ ರಕ್ಷಣೆ](https://www.udayavani.com/wp-content/uploads/2023/04/ullala-3-620x371.jpg)
ಉಳ್ಳಾಲ: ಉಳ್ಳಾಲ ದರ್ಗಾ ಸಂದರ್ಶನ ನಡೆಸಿ ಉಳ್ಳಾಲ ಸಮುದ್ರ ತೀರಕ್ಕೆ ಕುಟುಂಬ ಸಮೇತ ಆಗಮಿಸಿದ್ದ ಮಳಲಿ ನಿವಾಸಿ ಖಾಲಿದ್(51) ಸಮುದ್ರ ಪಾಲಾದರೆ, ಅವರ ಪುತ್ರನನ್ನು ಸ್ಥಳೀಯ ಈಜುಗಾರರು ರಕ್ಷಿಸಿದ ಘಟನೆ ಸೋಮವಾರ ನಡೆದಿದೆ.
ಖಾಲಿದ್ ಅವರು ಪತ್ನಿ, ಮಗ, ಸಂಬಂಧಿ ಮಕ್ಕಳ ಜತೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದರು. ದರ್ಗಾ ಭೇಟಿ ಬಳಿಕ ಉಳ್ಳಾಲ ಬೀಚ್ಗೆ ತೆರಳಿದ್ದರು.ಈ ವೇಳೆ ಖಾಲಿದ್ ಮಗ ಮತ್ತು ಕುಟುಂಬದ ಸದಸ್ಯರು ನೀರಾಟವಾಡುತ್ತಿದ್ದ ವೇಳೆ ಸಮುದ್ರದ ಅಲೆಗೆ ಖಾಲಿದ್ ಮತ್ತು ಅವರ ಪುತ್ರ ಸಮುದ್ರ ಪಾಲಾಗಿದ್ದಾರೆ. ಸ್ಥಳದಲ್ಲಿದ್ದ ಈಜುಗಾರರು ಖಾಲಿದ್ ಅವರ ಮಗನನ್ನು ರಕ್ಷಿಸಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂಜೆ ವೇಳೆಗೆ ಮೃತದೇಹ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ.
ಜೀವರಕ್ಷಕರ ಪರ್ಸ್ ಕಳವು
ಖಾಲಿದ್ ಮುಳುಗುತ್ತಿದ್ದಂತೆ ಕುಟುಂಬಸ್ಥರು ರಕ್ಷಣೆಗಾಗಿ ಬೊಬ್ಬಿರಿದಿದ್ದು, ಈ ವೇಳೆ ಸಮೀಪದಲ್ಲೇ ಇದ್ದ ಕೋಡಿ ನಿವಾಸಿಗಳಾದ ಜಬ್ಟಾರ್, ಅಶ್ರಫ್, ಇಮ್ತಿಯಾಝ, ಮಹಮ್ಮದ್ ಅವರು ಧಾವಿಸಿ ಖಾಲಿದ್ ಅವರ ಪುತ್ರನನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಆದರೆ ಖಾಲಿದ್ ಅವರನ್ನು ಸಮುದ್ರ ದೂರಕ್ಕೆ ಎಳೆದಿದ್ದು, ಹಲವು ಗಂಟೆಗಳ ಕಾರ್ಯಾಚರಣೆ ಅನಂತರ ಮೃತದೇಹ ಪತ್ತೆ ಹಚ್ಚಿದ್ದಾರೆ. ಸಮುದ್ರಕ್ಕೆ ಹಾರುವ ಸಂದರ್ಭ ಜಬ್ಟಾರ್ ಅವರು ಪರಿಚಿತರ ಕೈಯಲ್ಲಿ 8,000 ರೂ. ನಗದು ಇದ್ದ ಪರ್ಸ್, ವಾಚ್ ನೀಡಿದ್ದರು. ಆದರೆ ಆ ಪರ್ಸ್ ಕಾಣೆಯಾಗಿದೆ. ಸಿಕ್ಕಿದವರು ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
![Arrested: ಸರ್ಕಾರಿ ನೌಕರಿ ಆಸೆ ತೋರಿಸಿ 46 ಜನಕ್ಕೆ 1 ಕೋಟಿ ವಂಚನೆ: ರೈಲ್ವೆ ಅಧಿಕಾರಿ ಸೆರೆ](https://www.udayavani.com/wp-content/uploads/2024/12/5-62-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Arrested: ಸರ್ಕಾರಿ ನೌಕರಿ ಆಸೆ ತೋರಿಸಿ 46 ಜನಕ್ಕೆ 1 ಕೋಟಿ ವಂಚನೆ: ರೈಲ್ವೆ ಅಧಿಕಾರಿ ಸೆರೆ](https://www.udayavani.com/wp-content/uploads/2024/12/5-62-150x90.jpg)
Arrested: ಸರ್ಕಾರಿ ನೌಕರಿ ಆಸೆ ತೋರಿಸಿ 46 ಜನಕ್ಕೆ 1 ಕೋಟಿ ವಂಚನೆ: ರೈಲ್ವೆ ಅಧಿಕಾರಿ ಸೆರೆ
![Bengaluru: ಸಿನಿಮೀಯವಾಗಿ ಬೈಕ್ ಕಳ್ಳನನ್ನು ಹಿಡಿದ ಜಲಮಂಡಳಿ ಅಧಿಕಾರಿ](https://www.udayavani.com/wp-content/uploads/2024/12/4-62-150x90.jpg)
Bengaluru: ಸಿನಿಮೀಯವಾಗಿ ಬೈಕ್ ಕಳ್ಳನನ್ನು ಹಿಡಿದ ಜಲಮಂಡಳಿ ಅಧಿಕಾರಿ
![ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ](https://www.udayavani.com/wp-content/uploads/2024/12/subbareddy-150x109.jpg)
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
![Bengaluru: ಇಬ್ಬರು ಪತ್ನಿಯರನ್ನು ಬಿಟ್ಟಿದ್ದ ಅಧಿಕಾರಿ ಆತ್ಮಹತ್ಯೆ](https://www.udayavani.com/wp-content/uploads/2024/12/3-55-150x90.jpg)
Bengaluru: ಇಬ್ಬರು ಪತ್ನಿಯರನ್ನು ಬಿಟ್ಟಿದ್ದ ಅಧಿಕಾರಿ ಆತ್ಮಹತ್ಯೆ
![Pratap Sarangi: ರಾಹುಲ್ ಬೌನ್ಸರ್ ರೀತಿ ವರ್ತಿಸುತ್ತಿದ್ದಾರೆ… ಪ್ರತಾಪ್ ಸಾರಂಗಿ ಆರೋಪ](https://www.udayavani.com/wp-content/uploads/2024/12/rahul-3-150x84.jpg)
Pratap Sarangi: ರಾಹುಲ್ ಬೌನ್ಸರ್ ರೀತಿ ವರ್ತಿಸುತ್ತಿದ್ದಾರೆ… ಪ್ರತಾಪ್ ಸಾರಂಗಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.