ಮಾಸ್ಕ್ ಹಾಕಬೇಕೆಂದು ನನಗೆ ಅನಿಸಿಲ್ಲ, ಹಾಕಲ್ಲ: ಸಚಿವ ಕತ್ತಿ ಉಡಾಫೆ ಉತ್ತರ


Team Udayavani, Jan 18, 2022, 9:15 PM IST

ಮಾಸ್ಕ್ ಹಾಕಬೇಕೆಂದು ನನಗೆ ಅನಿಸಿಲ್ಲ, ಹಾಕಲ್ಲ: ಸಚಿವ ಕತ್ತಿ ಉಡಾಫೆ

ಬೆಳಗಾವಿ : ಮಾಸ್ಕ್ ಹಾಕುವುದು ಬಿಡುವುದು ಜನರ ವೈಯಕ್ತಿಕ ವಿಚಾರ. ನನಗೆ ಮಾಸ್ಕ್ ಹಾಕಬೇಕೆಂದು ಅನಿಸಿಲ್ಲ. ಹೀಗಾಗಿ ನಾನು ಮಾಸ್ಕ್ ಹಾಕುವುದಿಲ್ಲ ಎಂದು
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಅರಣ್ಯ ಸಚಿವ ಉಮೇಶ ಕತ್ತಿ ಉಡಾಫೆ ಉತ್ತರ ನೀಡುವ ಮೂಲಕ ಎಡವಟ್ಟು ಮಾಡಿಕೊಂಡಿದ್ದಾರೆ.‌

ಅಥಣಿಯಲ್ಲಿ ಸಾಮಾಜಿಕ ಅಂತರ ಮರೆತು‌ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾಧ್ಯಮದವರ ಪ್ರಶ್ನೆಗೆ ಇಂಥ ಉಡಾಫೆ ಉತ್ತರ ನೀಡಿದ ಸಚಿವ ಕತ್ತಿ, ಯಾವುದೇ ನಿರ್ಬಂಧ ವಿಧಿಸುವುದಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರೇ ಹೇಳಿದ್ದಾರೆ. ಸ್ವಂತ ಜವಾಬ್ದಾರಿ ಹೊತ್ತು ಅವರೇ (ಜನರು) ಮಾಸ್ಕ್ ಹಾಕಿಕೊಳ್ಳಬೇಕು.‌ ಮಾಸ್ಕ್ ಹಾಕದೇ ಇರುವುದು ನನ್ನ ವೈಯಕ್ತಿಕ ವಿಚಾರ.‌ ನಾನು ಮಾಸ್ಕ್ ಹಾಕುವುದಿಲ್ಲ ಎಂದು ಹೇಳಿದರು.

ಮಾಸ್ಕ್ ವಿಚಾರದಲ್ಲಿ ಜನ ಸಾಮಾನ್ಯರಿಗೊಂದು ನ್ಯಾಯ ಜನಪ್ರತಿನಿಧಿಗಳಿಗೆ ಒಂದು ನ್ಯಾಯ ಆಗಿದ್ದು, ಈ ಬಗ್ಗೆ ಉಮೇಶ ಕತ್ತಿ ಹೇಳಿಕೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾರ್ಯಕ್ರಮದಲ್ಲಿಯೂ ಮಾಸ್ಕ್ ಇಲ್ಲದೇ, ಸಾಮಾಜಿಕ ಅಂತರ ಮರೆತು ಜನಪ್ರತಿನಿಧಿಗಳು ಭಾಗವಹಿಸಿದ್ದರು. ಉಮೇಶ ಕತ್ತಿ, ಮಾಜಿ ಸಚಿವ ಲಕ್ಷ್ಮಣ ಸವದಿ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕ ಮಹೇಶ ಕುಮಟಳ್ಳಿ ಮಾಸ್ಕ್ ಹಾಕಿಕೊಂಡಿರಲಿಲ್ಲ.

ನನ್ನ ಹೇಳಿಕೆಯ ಅಪಾರ್ಥ ಬೇಡ: ಸಚಿವ ಕತ್ತಿ ಟ್ವಿಟ್

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಸಚಿವ ಉಮೇಶ ಕತ್ತಿ ಅವರು, ನಾನು ಮಾತನಾಡಿರುವ ಬಗ್ಗೆ ಜನ ಅಪಾರ್ಥ ತಿಳಿಯಬಾರದು.‌ ಮಾಸ್ಕ್ ಹಾಕುವ ವಿಚಾರದಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿ ಅರಿತು ಪಾಲಿಸಬೇಕು ಎನ್ನುವುದು ನನ್ನ ನಿಲುವು.‌‌ಅದೇ ನನ್ನ ಹೇಳಿಕೆಯೂ ಆಗಿತ್ತು. ನಾನು ಮಾಸ್ಕ್ ಹಾಕಬೇಡಿ ಎಂದು ಯಾರಿಗೂ ಹೇಳಿಲ್ಲ. ನನ್ನ ಹೇಳಿಕೆಯನ್ನು ಅಪಾರ್ಥ ಮಾಡಿಕೊಳ್ಳುವುದು ಬೇಡ. ರಾಜ್ಯ ಸರ್ಕಾರದ ಜವಾಬ್ದಾರಿಯುತ ಸ್ಥಾನದಲ್ಲಿರುವ ನನಗೆ, ನನ್ನ ಜವಾಬ್ದಾರಿಯ ಸಂಪೂರ್ಣ ಅರಿವಿದೆ. ಆದರೆ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಮಾಧ್ಯಮದಲ್ಲಿ ವರದಿಯಾಗಿದೆ. ಕೋವಿಡ್ ನಂತಹ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ನಮಗೆಲ್ಲರಿಗೂ ನಮ್ಮ ಹೊಣೆಗಾರಿಕೆ ಬಗ್ಗೆ ತಿಳಿದಿದೆ. ಹೀಗಾಗಿ ಕೋವಿಡ್ ಮುಗಿಯುವವರೆಗೆ ನಾವೆಲ್ಲರೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸೋಣ‌ ಎಂದು ಟ್ವಿಟ್ಟರ್ ಹಾಗೂ ಫೇಸಬುಕ್ ಪುಟದಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ : ಏ.16ರಿಂದ ಮೇ 4 ರವರೆಗೆ ನಡೆಯಲಿದೆ ಪರೀಕ್ಷೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.