![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 22, 2022, 3:57 PM IST
ಲಕ್ನೋ: ಹಾವು ಹಿಡಿಯುವುದರಲ್ಲಿ ಜನಪ್ರಿಯರಾಗಿದ್ದ ವ್ಯಕ್ತಿಯೊಬ್ಬ ವಿಷಪೂರಿತ ಹಾವನ್ನು ಹಿಡಿದ ಬಳಿಕ ಆ ಹಾವು ಕಚ್ಚಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಷಹಜಹಾನ್ ಪುರ್ ನಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಟಿಪ್ಪು ಬಂದಾಗಲೇ ಹೆದರಲಿಲ್ಲ,ಸಿದ್ದು ಸುಲ್ತಾನ್ ಗೆ ಹೆದರುತ್ತೇವಾ?: ಪ್ರತಾಪ್ ಸಿಂಹ
ಹಾವು ಕಡಿತದಿಂದ ಸಾವನ್ನಪ್ಪಿರುವ ವ್ಯಕ್ತಿಯನ್ನು ದೇವೇಂದ್ರ ಮಿಶ್ರಾ ಎಂದು ಗುರುತಿಸಲಾಗಿದೆ. ತನ್ನ ಗ್ರಾಮದಲ್ಲಿನ ನೆರೆಯ ಮನೆಯೊಂದರಲ್ಲಿದ್ದ ಹಾವನ್ನು ಮಿಶ್ರಾ ಅವರು ಹಿಡಿದಿದ್ದರು. ಇದು ಅತೀ ವಿಷಕಾರಿ ಹಾವುಗಳ ಪ್ರಬೇಧಗಳಲ್ಲಿ ಒಂದಾಗಿತ್ತು.
ನಂತರ ಮಿಶ್ರಾ ಹಾವನ್ನು ತನ್ನ ಕೊರಳಿಗೆ ಸುತ್ತಿಕೊಂಡು ಊರಿನಲ್ಲಿ ಸುತ್ತಾಡಿದ್ದ. ಕೋಲಿನ ಸಹಾಯದಿಂದ ಹಾವನ್ನು ಹಿಡಿಯುತ್ತಿರುವ ಮಿಶ್ರಾ ವಿಡಿಯೋ ವೈರಲ್ ಆಗಿದೆ. ಮತ್ತೊಂದು ವಿಡಿಯೋದಲ್ಲಿ ಮಗುವಿನ ಕೊರಳಿಗ ಹಾವನ್ನು ಸುತ್ತಿರುವುದು ಸೆರೆಯಾಗಿತ್ತು ಎಂದು ವರದಿ ವಿವರಿಸಿದೆ.
ಹಾವನ್ನು ಹಿಡಿದ ಸುಮಾರು ಎರಡು ಗಂಟೆಗಳ ನಂತರ ಮಿಶ್ರಾಗೆ ಹಾವು ಕಚ್ಚಿತ್ತು. ಆಸ್ಪತ್ರೆಗೆ ಕರೆದೊಯ್ಯುವ ಮೊದಲು ಹಲವಾರು ಗಿಡಮೂಲಿಕೆಗಳ ಔಷಧ ನೀಡಲಾಗಿತ್ತು. ಆದರೆ ಅತಿ ವಿಷದ ಪರಿಣಾಮ ಮಿಶ್ರಾ ಮನೆಯಲ್ಲಿ ಕೊನೆಯುಸಿರೆಳೆದಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.