Saharanpur; ದೇವಾಲಯ ನಿರ್ಮಾಣ ಕಾರ್ಯದ ವೇಳೆ ಮೊಘಲರ ಕಾಲದ 400 ನಾಣ್ಯ ಪತ್ತೆ
ಪತ್ತೆಯಾಗಿರುವ ನಾಣ್ಯಗಳು ಅಂದಾಜು 350 ವರ್ಷಗಳ ಹಿಂದಿನದ್ದಾಗಿದೆ.
Team Udayavani, May 23, 2023, 2:53 PM IST
ಲಕ್ನೋ: ದೇವಸ್ಥಾನ ನಿರ್ಮಾಣದ ಕಾಮಗಾರಿ ಸಂದರ್ಭದಲ್ಲಿ ಮೊಘಲರ ಕಾಲದ 400 ನಾಣ್ಯಗಳು ಪತ್ತೆಯಾಗಿರುವ ಘಟನೆ ಉತ್ತರಪ್ರದೇಶದ ಸಹರಾನ್ ಪುರ್ ನಲ್ಲಿ ನಡೆದಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:VIRAL: ಮದುವೆ ದಿನ ಪರಾರಿಯಾಗಲು ಯತ್ನಿಸಿದ ವರ: 20ಕಿ.ಮೀ ಚೇಸ್ ಮಾಡಿ ಮಂಟಪಕ್ಕೆ ಕರೆತಂದ ವಧು
ಪೊಲೀಸ್ ವರಿಷ್ಠಾಧಿಕಾರಿ ಸಾಗರ್ ಜೈನ್ ಅವರು ನೀಡಿರುವ ಮಾಹಿತಿ ಪ್ರಕಾರ, ಸಹರಾನ್ ಪುರದ ಹುಸೈನ್ ಪುರ ಗ್ರಾಮದ ಸತಿ ಧಾಮ್ ದೇವಾಲಯದ ಆವರಣ ಗೋಡೆಯನ್ನು ತೆರವುಗೊಳಿಸಿ, ಮಣ್ಣನ್ನು ಅಗೆಯುತ್ತಿದ್ದ ವೇಳೆ ಈ ನಾಣ್ಯಗಳು ಪತ್ತೆಯಾಗಿರುವುದಾಗಿ ತಿಳಿಸಿದ್ದಾರೆ.
ಘಟನೆ ಕುರಿತು ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ, ಸುಮಾರು 400 ನಾಣ್ಯಗಳನ್ನು ವಶಕ್ಕೆ ಪಡೆದಿರುವುದಾಗಿ ಪಿಟಿಐ ವರದಿ ಮಾಡಿದೆ. ಮೊಘಲರ ಕಾಲದಲ್ಲಿ ಬಳಸುತ್ತಿದ್ದ ಈ ನಾಣ್ಯದಲ್ಲಿ ಅರೆಬಿಕ್ ಭಾಷೆಯಲ್ಲಿ ಲಿಪಿ ಇರುವುದಾಗಿ ಜೈನ್ ವಿವರಿಸಿದ್ದಾರೆ.
ಪುರಾತತ್ವ ಶಾಸ್ತ್ರ ಇಲಾಖೆ ಕೂಡಾ ನಾಣ್ಯಗಳನ್ನು ಪರಿಶೀಲಿಸುತ್ತಿದ್ದು, ಯಾವ ಲೋಹವನ್ನು ಬಳಸಿ ನಾಣ್ಯಗಳನ್ನು ತಯಾರಿಸಲಾಗಿದೆ ಎಂಬುದನ್ನು ಖಚಿತಪಡಿಸಲಿದೆ. ಪತ್ತೆಯಾಗಿರುವ ನಾಣ್ಯಗಳು ಅಂದಾಜು 350 ವರ್ಷಗಳ ಹಿಂದಿನದ್ದಾಗಿದೆ. ಪ್ರತಿ ನಾಣ್ಯವು 11 ಗ್ರಾಮ್ ತೂಕವಿದೆ.
ವರದಿಯ ಪ್ರಕಾರ, ಪ್ರತಿ ನಾಣ್ಯದ ಪ್ರಸ್ತುತ ಮಾರುಕಟ್ಟೆ ಬೆಲೆ 3,500 ರೂಪಾಯಿ ಎಂದು ತಿಳಿಸಿದೆ. ಹುಸೈನ್ ಪುರ್ ನಲ್ಲಿ ದೊರೆತ ನಾಣ್ಯಗಳು ಮೊಘಲ್ ದೊರೆ ಶಾ ಅಲಾಂ II ಕಾಲಘಟ್ಟದ್ದಾಗಿದೆ. ಇದರಲ್ಲಿರುವುದು ಪಾರ್ಸಿ ಭಾಷೆಯ ಲಿಪಿಯಾಗಿದೆ ಎಂದು ಇತಿಹಾಸಕಾರ ರಾಜೀವ್ ಉಪಾಧ್ಯಾಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.