![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Apr 27, 2024, 12:23 PM IST
ಲಕ್ನೋ: ಉತ್ತರಪ್ರದೇಶ ಯೂನಿರ್ವಸಿಟಿಯ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಪರೀಕ್ಷೆಯ ವೇಳೆ ಉತ್ತರ ಪತ್ರಿಕೆಯಲ್ಲಿ “ಜೈ ಶ್ರೀರಾಮ್ ಮತ್ತು ಕೆಲವು ಕ್ರಿಕೆಟಿಗರ” ಹೆಸರನ್ನು ಬರೆದಿದ್ದು, ಈ ಉತ್ತರಪತ್ರಿಕೆಗೆ ಪ್ರೊಫೆಸರ್ ಅಂಕ ನೀಡಿ ಪಾಸ್ ಮಾಡಿರುವ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ
ಹಾಡುಗಳು, ಸಂಗೀತ, ಧಾರ್ಮಿಕ ಘೋಷಣೆಗಳನ್ನು ಬರೆದ ಉತ್ತರಪತ್ರಿಕೆಗೆ ಅಂಕ ನೀಡಲು ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಿದ್ದ ಆರೋಪದ ಮೇಲೆ ಜೌನ್ ಪುರದ ವೀರ್ ಬಹದೂರ್ ಸಿಂಗ್ ಪೂರ್ವಾಂಚಲ್ ಯೂನಿರ್ವಸಿಟಿಯ ಇಬ್ಬರು ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿ ಹೇಳಿದೆ.
ವಿಶ್ವವಿದ್ಯಾಲಯದ ಕೆಲವು ಅಧಿಕಾರಿಗಳ ಸಹಕಾರದಿಂದ ಶೂನ್ಯ ಅಂಕ ಪಡೆದ ವಿದ್ಯಾರ್ಥಿಗಳಿಗೂ ಶೇ.60ಕ್ಕಿಂತ ಹೆಚ್ಚು ಅಂಕ ನೀಡಿ ತೇರ್ಗಡೆ ಮಾಡಲಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿ ಮುಖಂಡ ದಿವ್ಯಾಂಶು ಸಿಂಗ್ ಪ್ರಧಾನಿ, ಮುಖ್ಯಮಂತ್ರಿ, ಗವರ್ನರ್ ಹಾಗೂ ಉಪ ಕುಲಪತಿಗಳಿಗೆ ಪತ್ರ ಬರೆದಿರುವುದಾಗಿ ವರದಿ ವಿವರಿಸಿದೆ.
ಮರು ಮೌಲ್ಯಮಾಪನ ಸಂದರ್ಭದಲ್ಲಿ ಅಕ್ರಮಗಳು ಆರ್ ಟಿಐ ಮಾಹಿತಿ ಮೂಲಕ ಬಹಿರಂಗಗೊಂಡಿದೆ. ಕೆಲವು ವಿದ್ಯಾರ್ಥಿಗಳಿಗೆ ಹೆಚ್ಚು ಅಂಕ ನೀಡಲಾಗಿದೆ ಎಂಬ ಆರೋಪವಿದೆ. ನಾವು ಈ ಬಗ್ಗೆ ಸಮಿತಿಯನ್ನು ರಚಿಸಿದ್ದು, ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಉಪ ಕುಲಪತಿ ವಂದನಾ ಸಿಂಗ್ ತಿಳಿಸಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.