Uttar Pradesh: ಅತ್ತೆ ಜತೆ ದೈಹಿಕ ಸಂಬಂಧಕ್ಕಾಗಿ ಪತಿ ಕಿರುಕುಳ; ದೂರು ನೀಡಿದ ಪತ್ನಿ!
ತನ್ನ ಕೈಗೆ ಐದು ಕಡೆ ಹೊಲಿಗೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಿದ್ದಾಳೆ.
Team Udayavani, Jun 26, 2024, 12:30 PM IST
ಲಕ್ನೋ(ಉತ್ತರಪ್ರದೇಶ): ಅತ್ತೆ(Mother in-laws) ಜತೆ ದೈಹಿಕ ಸಂಬಂಧ ಇರಿಸಿಕೊಳ್ಳುವ ನಿಟ್ಟಿನಲ್ಲಿ ಬಲವಂತ ಮಾಡಿ ತನಗೆ ಕಿರುಕುಳ(Harsssment) ನೀಡಿ ಪತಿ ಮತ್ತು ಅತ್ತೆ ಹಲ್ಲೆ ನಡೆಸಿರುವುದಾಗಿ ಉತ್ತರಪ್ರದೇಶದ ಆಗ್ರಾದ ಮಹಿಳೆಯೊಬ್ಬಳು ಪೊಲೀಸರಿಗೆ ದೂರು ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:Chikkamagaluru: ನಕಲಿ ಕೀ ಬಳಸಿ ಕಾರಿನಲ್ಲಿದ್ದ ನಗದು ಸೇರಿ ವಸ್ತುಗಳ ಕಳ್ಳತನ
ಎಫ್ ಐಆರ್ (FIR) ಪ್ರಕಾರ, 2022ರಲ್ಲಿ ದೂರುದಾರ ಮಹಿಳೆ ಗಾಜಿಪುರ್ ಜಿಲ್ಲೆಯ ಅಲೋಕ್ ಉಪಾಧ್ಯಾಯ ಎಂಬಾತನ ಜತೆ ವಿವಾಹವಾಗಿತ್ತು. ಮದುವೆಯಾದ ಬಳಿಕ ಕಿರುಕುಳ ನೀಡಲು ಪ್ರಾರಂಭಿಸಿರುವುದಾಗಿ ತಿಳಿಸಿದೆ.
ತನ್ನ ಜತೆ ದೈಹಿಕ ಸಂಬಂಧ ಹೊಂದುವಂತೆ ಅತ್ತೆ ಒತ್ತಡ ಹೇರಿದ್ದು, ಅದಕ್ಕೆ ಒಪ್ಪದಿದ್ದಾಗ ಅತ್ತೆ ಬ್ಲೇಡ್ ನಿಂದ ತನ್ನ ಮೇಲೆ ದಾಳಿ ನಡೆಸಿದ್ದು, ಇದರ ಪರಿಣಾಮ ತನ್ನ ಕೈಗೆ ಐದು ಕಡೆ ಹೊಲಿಗೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಿದ್ದಾಳೆ.
ನಾದಿನಿ ಕೂಡಾ ನನ್ನ ಬಟ್ಟೆಯನ್ನೆಲ್ಲಾ ಬಚ್ಚಿಟ್ಟುಕೊಂಡಿದ್ದು, ಉಟ್ಟ ಬಟ್ಟೆಯನ್ನೇ ತಿಂಗಳು ಕಾಲ ಧರಿಸುವಂತೆ ಬಲವಂತ ಮಾಡುತ್ತಿರುವುದಾಗಿ ಮಹಿಳೆ ಆರೋಪಿಸಿದ್ದಾಳೆ. ಅಷ್ಟೇ ಅಲ್ಲ ವರ ದಕ್ಷಿಣೆ ನೀಡುವಂತೆ ಮಾನಸಿಕ ಕಿರುಕುಳ ನೀಡುತ್ತಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
2023ರಲ್ಲಿ ಗಂಡು ಮಗುವಿಗೆ ಜನ್ಮ ನೀಡಿದಾಗಲೂ, ಪತಿ ಮಗುವಿನ ತಂದೆಯ ಬಗ್ಗೆ ಪ್ರಶ್ನಿಸಿ ಹಲ್ಲೆ ನಡೆಸಿ, ಮನೆಯಿಂದ ಹೊರ ಹಾಕಿದ್ದು, ಈ ಸಂದರ್ಭದಲ್ಲಿ ನೆರೆಹೊರೆಯವರು ಮಧ್ಯಪ್ರವೇಶಿಸಿ ಮನೆಯಲ್ಲಿ ಇರಲು ಅವಕಾಶ ಮಾಡಿಕೊಟ್ಟಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ಬಗ್ಗೆ ತನಿಖೆ ನಡೆಯುತ್ತಿರುವುದಾಗಿ ಆಗ್ರಾ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು
ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್
Leader of the Opposition; ಚೊಚ್ಚಲ ಭಾಷಣದಲ್ಲೇ ಅಬ್ಬರ! ; ರಾಹುಲ್ ವಿರುದ್ಧ ಕ್ರಮ?
Bhojshala; ಪೂಜೆ ಅವಕಾಶಕ್ಕಾಗಿ ಜೈನರ ಅರ್ಜಿ
MP ಎಂಜಿನಿಯರ್ ರಶೀದ್ ಪ್ರಮಾಣ ವಚನ ಸ್ವೀಕಾರಕ್ಕೆ ಕೊನೆಗೂ ಎನ್ಐಎ ಅಸ್ತು
MUST WATCH
ಹೊಸ ಸೇರ್ಪಡೆ
Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!
Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ
Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್
BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.