Upper Krishna: ನೀರಾವರಿ ಇಲಾಖೆ ಭೂಸ್ವಾಧೀನ ಹೆಚ್ಚಳದ ಬಗ್ಗೆ ಸಮಗ್ರ ತನಿಖೆ : ಡಿಸಿಎಂ

ಎಕರೆಗೆ 5.18 ಕೋಟಿ ಪರಿಹಾರ ನೀಡಲು ಸೂಚಿಸಿದ ಕೋರ್ಟ್‌ !

Team Udayavani, Jul 24, 2024, 6:15 AM IST

DCM-DK-Shivakumar

ವಿಧಾನಸಭೆ: ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ವಿವಿಧ ಕಾಮಗಾರಿಗಳ ಭೂಸ್ವಾಧೀನ ಹಾಗೂ ಪರಿಹಾರ ನಿಗದಿ ವಿಚಾರದಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಕಟಿಸಿದ್ದಾರೆ.

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪ್ರಶ್ನೆಗೆ ಉತ್ತರಿಸಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಇಲ್ಲಿ ನಡೆದಿರುವ ಕೆಲ ಸಂಗತಿಗಳನ್ನು ಗಮನಿಸಿದರೆ ನೀವೆಲ್ಲರೂ ಗಾಭರಿಯಾಗಬೇಕಾಗುತ್ತದೆ. ಈ ಯೋಜನೆ ಅನುಷ್ಠಾನ ಸಂದರ್ಭದಲ್ಲಿ ರೈತರು ಎಕರೆಗೆ 1 ರಿಂದ 3 ಸಾವಿರ ರೂ.ವರೆಗೆ ಮಾತ್ರ ಪರಿಹಾರ ಪಡೆದಿದ್ದರು. ಆದರೆ ಈಗ ಪರಿಹಾರ ಮತ್ತು ಭೂಸ್ವಾಧೀನ ವಿಚಾರವೇ ಹಗರಣದ ಸ್ವರೂಪ ಪಡೆದಿದ್ದು, ಈ ಬಗ್ಗೆ ತನಿಖೆ ನಡೆಸಬೇಕಾದ ಸಂದರ್ಭ ಬಂದಿದೆ ಎಂದರು.

ಒಟ್ಟು 2000 ಪ್ರಕರಣಗಳಲ್ಲಿ ನಾವು ಪರಿಹಾರ ಕೊಡಬೇಕಿದೆ. ಹಿಂದೆ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಸರಾಸರಿ 25 ಲಕ್ಷ ರೂ. ಪ್ರತಿ ಎಕರೆಗೆ ಪರಿಹಾರ ನಿಗದಿ ಮಾಡಲಾಗಿತ್ತು. ಆದರೆ ವಿಜಯಪುರದ ಒಂದು ಪ್ರಕಣದಲ್ಲಿ ಒಂದು ಎಕರೆಗೆ 5.18 ಕೋಟಿ ರೂ. ಪರಿಹಾರ ನೀಡುವಂತೆ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.

ಬೆಂಗಳೂರಿನ ಹೊರ ವರ್ತುಲ ರಸ್ತೆಯಲ್ಲೂ ಇಷ್ಟು ಪರಿಹಾರ ನೀಡುವುದಕ್ಕೆ ಸಾಧ್ಯವಿಲ್ಲ. ಸರ್ಕಾರಿ ವಕೀಲರು ಹಾಗೂ ಕಕ್ಷಿದಾರರ ಭಾಗಿದಾರಿಕೆಯಿಂದ ಇಂಥ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಂಥ ಪ್ರಕರಣದಲ್ಲಿ ಭಾಗಿಯಾದ ಎಲ್ಲ ವಕೀಲರನ್ನು ಕಿತ್ತು ಹಾಕುವುದಕ್ಕೆ ಕಾನೂನು ಮತ್ತು ಸಂಸದೀಯ ಇಲಾಖೆ ಜತೆ ಸಭೆ ನಡೆಸಿ ಸಮಗ್ರ ತನಿಖೆ ನಡೆಸಲಾಗುವುದು ಎಂದು ಹೇಳಿದರು.

ಇದಕ್ಕೂ ಮೊದಲು ಮಾತನಾಡಿದ ಬಸನಗೌಡ ಯತ್ನಾಳ್‌, ಕೃಷ್ಣಾ ನದಿ ಕರ್ನಾಟಕದ ಶೇ.68 ರಷ್ಟು ನೀರಾವರಿ ಯೋಜನೆಗಳಿಗೆ ಆಧಾರವಾಗಿದೆ. ಆದರೆ, ಕಾವೇರಿ ಕೊಳ್ಳದ ಯೋಜನೆಗಳಿಗೆ ಸಿಕ್ಕ ಆದ್ಯತೆ ಲಭ್ಯವಾಗುತ್ತಿಲ್ಲ. ಇದೇ ರೀತಿಯಾದರೆ 100 ವರ್ಷವಾದರೂ ಕಾಮಗಾರಿಗಳು ಮುಕ್ತಾಯವಾಗುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸಪೇಟೆ: ವಿಜಯನಗರದ ಕಾಲದ ಅಪರೂಪದ ಮಾಸ್ತಿಕಲ್ಲು ಪತ್ತೆ

ಹೊಸಪೇಟೆ: ವಿಜಯನಗರದ ಕಾಲದ ಅಪರೂಪದ ಮಾಸ್ತಿಕಲ್ಲು ಪತ್ತೆ

Hagaribommanahalli: ಜೆಸ್ಕಾಂ ಇಲಾಖೆಯಿಂದ ನಿರ್ಲಕ್ಷ್ಯ, ಟಿಸಿಗಳ ಸುತ್ತ ಗಿಡಗಂಟೆಗಳು

Hagaribommanahalli: ಜೆಸ್ಕಾಂ ಇಲಾಖೆಯಿಂದ ನಿರ್ಲಕ್ಷ್ಯ, ಟಿಸಿಗಳ ಸುತ್ತ ಗಿಡಗಂಟೆಗಳು

12-crime

Hagaribommanahalli: ಅನೈತಿಕ ಸಂಬಂಧ: ಯುವಕನ ಬರ್ಬರ ಕೊಲೆ; ಆರೋಪಿ ಪೊಲೀಸರಿಗೆ ಶರಣು

12-hosapete

Hosapete ರೋಟರಿ ಕ್ಲಬ್ ನೂತನ ಸಭಾಂಗಣಕ್ಕೆ ರತನ್ ಟಾಟಾ ಹೆಸರು

7-vijayanagara

Vijayanagara: ಒಂದೇ ಹಗ್ಗದಲ್ಲಿ ನೇಣಿಗೆ ಶರಣಾದ ಯುವಕ-ಯವತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.