Tunnel:120 ಗಂಟೆಗಳಿಂದ ಸುರಂಗದೊಳಗೆ ಸಿಲುಕಿದ್ದ 40 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಸ್ಥಗಿತ
Team Udayavani, Nov 17, 2023, 5:48 PM IST
ಡೆಹ್ರಾಡೂನ್: ಉತ್ತರಕಾಶಿಯಲ್ಲಿನ ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿದ್ದ 40 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾದ ಹಿನ್ನೆಲೆಯಲ್ಲಿ ಶುಕ್ರವಾರ (ನವೆಂಬರ್ 17) ರಕ್ಷಣಾ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:Mysore: ರಾತ್ರೋರಾತ್ರಿ ರೈತ ಮುಖಂಡರ ಬಂಧನ; ಠಾಣೆ ಎದುರು ಪ್ರತಿಭಟನೆ
ಕಳೆದ ಆರು ದಿನಗಳಿಂದ ಸುರಂಗದೊಳಗೆ ಸಿಲುಕಿದ್ದ 40 ಕಾರ್ಮಿಕರನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿತ್ತು. ಆದರೆ ಇಂದು ಮಧ್ಯಾಹ್ನ ಮತ್ತೆ ಮಣ್ಣು ಕುಸಿದ ಪರಿಣಾಮ ರಕ್ಷಣಾ ಕಾರ್ಯಾಚರಣೆ ಸ್ಥಗಿತಗೊಳಿಸಿರುವುದಾಗಿ ಮೂಲಗಳು ಹೇಳಿವೆ.
ರಕ್ಷಣಾ ಕಾರ್ಯಾಚರಣೆಗಾಗಿ 5ನೇ ಟ್ಯೂಬ್ ಅನ್ನು ಸುರಂಗದೊಳಗೆ ಇಳಿಸಿದಾಗ ಮಣ್ಣು ಕುಸಿಯಲು ಆರಂಭಿಸಿತ್ತು. ಇದರಿಂದಾಗಿ ಡ್ರಿಲ್ಲಿಂಗ್ ಮೆಷಿನ್ ಕಾರ್ಯಕ್ಕೆ ತೊಡಕಾಗಿತ್ತು. ಆ ನಿಟ್ಟಿನಲ್ಲಿ ಕಾರ್ಯಾಚರಣೆ ನಿಲ್ಲಿಸಲಾಗಿದೆ ಎಂದು ವರದಿ ವಿವರಿಸಿದೆ.
ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿರುವ 40 ಕಾರ್ಮಿಕರನ್ನು ರಕ್ಷಿಸುವ ನಿಟ್ಟಿನಲ್ಲಿ ರಕ್ಷಣಾ ತಂಡ ಹಗಲು ರಾತ್ರಿ ಕಾರ್ಯಾಚರಣೆ ನಡೆಸಿತ್ತು. ಆದರೆ ದೊಡ್ಡ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದಿದ್ದರಿಂದ ಕಾರ್ಯಾಚರಣೆ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.
ಸುಮಾರು 30ರಿಂದ 40 ಮೀಟರ್ ನಷ್ಟು ಮಣ್ಣನ್ನು ಹೊರತೆಗೆಯಬೇಕಾಗಿದೆ. ಬಳಿಕ ಕಾರ್ಮಿಕರು ಸಿಲುಕಿರುವ ಸ್ಥಳವನ್ನು ತಲುಪಬಹುದಾಗಿದೆ. ಕಾರ್ಮಿಕರು ಈಗಾಗಲೇ ಸುರಂಗದಾಳದಲ್ಲಿ ಸಿಲುಕಿಕೊಂಡು 120 ಗಂಟೆಗಳು ಕಳೆದಿದೆ. ಏತನ್ಮಧ್ಯೆ ಆದಷ್ಟು ಶೀಘ್ರದಲ್ಲಿ ಕಾರ್ಮಿಕರನ್ನು ರಕ್ಷಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್ ನಿಧಿ ವರ್ಗಾವಣೆ
Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್ ಘೋಷಣೆ
Social Media: ಇನ್ಸ್ಟಾದಂತೆ ವಾಟ್ಸ್ಆ್ಯಪ್ನಲ್ಲಿ ಇನ್ನು ಲೈಕ್, ಮೆನ್ಷನ್ ಆಯ್ಕೆ
Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್ಪರಿಶೀಲನೆ ಮಾಡುವುದಿಲ್ಲ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ
Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್ ಭೇಟಿ
Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ
Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು
Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.