Vahical Riders: ಸಂಚಾರ ನಿಯಮ ಉಲ್ಲಂಘಿಸಿದರೆ ಲೈಸನ್ಸ್‌ ರದ್ದು: ಸಿಎಂ ಸಿದ್ದರಾಮಯ್ಯ

ರಾಜ್ಯದ 65 ಕಡೆ "ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ' ಆರಂಭ, ನೂತನ 65 ಆ್ಯಂಬುಲೆನ್ಸ್‌ಗಳ ಲೋಕಾರ್ಪಣೆ

Team Udayavani, Sep 24, 2024, 6:40 AM IST

Ambulance

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುವುದು, ಅತೀ ವೇಗವಾಗಿ ವಾಹನ ಚಲಾಯಿಸುವುದರ ಸಹಿತ ಸಂಚಾರ ನಿಯಮ ಉಲ್ಲಂಘಿಸುವವರ ಚಾಲನ ಪರವಾನಗಿ ರದ್ದುಪಡಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ’ ಅಡಿಯಲ್ಲಿ ನೂತನ 65 ಆ್ಯಂಬುಲೆನ್ಸ್‌ಗಳನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿ ನಮ್ಮ ಸರಕಾರ ರಸ್ತೆ ಸುರಕ್ಷೆಗೆ ಆದ್ಯತೆ ನೀಡುತ್ತಿದ್ದು, ಅಪಘಾತ ಪ್ರಕರಣಗಳಲ್ಲಿ ಸಾವುನೋವು ತಡೆಯಲು ವಿವಿಧ ಕಾರ್ಯಕ್ರಮಗಳನ್ನು ಹಾಕಿಕೊಳ್ಳುತ್ತಿದೆ. ಆದರೆ ಸಂಚಾರ ನಿಯಮಗಳ ಉಲ್ಲಂಘನೆ ನಡೆಯುತ್ತಲೇ ಇದೆ. ಹೀಗಾಗಿ ಗಂಭೀರ ಸ್ವರೂಪದಲ್ಲಿ ಸಂಚಾರ ನಿಯಮ ಉಲ್ಲಂ ಸುವವರ ವಾಹನ ಚಾಲನೆ ಪರವಾನಿಗೆ ರದ್ದು ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ವೇದಿಕೆಯಲ್ಲಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸೂಚನೆ ನೀಡಿದರು.

ವಿದೇಶಗಳಲ್ಲಿ ರಸ್ತೆ ಸುರಕ್ಷೆಯ ನಿಯಮಗಳನ್ನು ಉಲ್ಲಂಘಿಸಿದ ತತ್‌ಕ್ಷಣ ಪರವಾನಿಗೆ ರದ್ದು ಮಾಡುತ್ತಾರೆ. ನಮ್ಮಲ್ಲೂ ಇದೇ ಕ್ರಮ ಅನುಸರಿಸಬೇಕು. ಬಳಿಕ ಬೇಕಾದರೆ ಅವರು ಕೋರ್ಟ್‌ಗೆ ಹೋಗಲಿ. ಸಾರಿಗೆ ಇಲಾಖೆ ಮತ್ತು ಪೊಲೀಸರು ಈ ಕ್ರಮ ತೆಗೆದುಕೊಳ್ಳಬೇಕು. ಇಂತಹ ಕ್ರಮಗಳಿಂದ ಅಪಘಾತಗಳ ಸಂಖ್ಯೆ ತಗ್ಗಿಸಬಹುದು ಎಂದು ಮುಖ್ಯಮಂತ್ರಿಗಳು ಹೇಳಿದರು.

ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ಸಾಗಿಸುವ ಉದ್ದೇಶದಿಂದ 65 ಆ್ಯಂಬುಲೆನ್ಸ್‌ಗಳನ್ನು ಆರೋಗ್ಯ ಇಲಾಖೆಯಿಂದ ಲೋಕಾರ್ಪಣೆ ಮಾಡುತ್ತಿದ್ದೇವೆ. ಈ ಸೇವೆಯನ್ನು ರಾಷ್ಟ್ರೀಯ ಹೆದ್ದಾರಿ ಮಾತ್ರವಲ್ಲದೆ ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳಿಗೂ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ರಾಜ್ಯದಲ್ಲಿ ಪ್ರತೀ ವರ್ಷ ಸರಾಸರಿ 40 ಸಾವಿರ ಅಪಘಾತಗಳು ಸಂಭವಿಸುತ್ತಿದ್ದು, ಪ್ರತೀ ವರ್ಷ ಸರಾಸರಿ ಹತ್ತು ಸಾವಿರ ಮಂದಿ ಸಾವನ್ನಪ್ಪುತ್ತಿದ್ದಾರೆ. ರಸ್ತೆ ಅಪಘಾತಗಳಿಂದಾಗಿ ಅನೇಕರು ಜೀವಮಾನವಿಡೀ ನರಳಬೇಕಾಗುತ್ತದೆ. ಅಪಘಾತ ನಡೆದ ಒಂದು ತಾಸಿನ ಒಳಗೆ ಸರಿಯಾದ ಚಿಕಿತ್ಸೆ ಲಭಿಸಿದರೆ ಪ್ರಾಣ ಹಾನಿ ತಪ್ಪಿಸಬಹುದು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಿದರು.


ದೀಪ ಉರಿಸಲು ಬಿಡದ ಗಾಳಿ!

ಕಾರ್ಯಕ್ರಮದ ಉದ್ಘಾಟನೆಗೆ ಮುಖ್ಯಮಂತ್ರಿಗಳು ದೀಪ ಬೆಳಗಲು ಮುಂದಾದಾಗ ಗಾಳಿ ಬೀಸುತ್ತಿದ್ದುದರಿಂದ ಮೋಂಬತ್ತಿ ಉರಿಸಲು ಹಲವು ಬಾರಿ ಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೊನೆಗೆ ದೀಪದಲ್ಲಿದ್ದ ಹಲವು ಬತ್ತಿಗಳನ್ನು ಒಂದೆಡೆ ಕೂಡಿಸಿ, ರಾಮಲಿಂಗಾರೆಡ್ಡಿ ಮತ್ತು ದಿನೇಶ್‌ ಗುಂಡೂರಾವ್‌ ತಮ್ಮ ಕೈಗಳನ್ನು ಗಾಳಿ ಬೀಸುವ ದಿಕ್ಕಿಗೆ ಅಡ್ಡವಿಟ್ಟ ಬಳಿಕ ಮುಖ್ಯಮಂತ್ರಿಗಳಿಗೆ ದೀಪ ಬೆಳಗಲು ಸಾಧ್ಯವಾಯಿತು.

ಆ್ಯಂಬುಲೆನ್ಸ್‌ ಕಾರ್ಯಾಚರಣೆ ಹೇಗೆ?
ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಲಾಗಿದ್ದು, ಹತ್ತಿರದ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗಳಿಗೆ ಆ್ಯಂಬುಲೆನ್ಸ್‌ ನೀಡಲಾಗುತ್ತಿದೆ. ತುರ್ತು ಸಂದರ್ಭದಲ್ಲಿ ಇದರ ಸೇವೆ ಲಭ್ಯವಾಗಲಿದೆ. ಇವು ಸುಸಜ್ಜಿತ ಉಪಕರಣ ಮತ್ತು ಔಷಧ ಇತ್ಯಾದಿ ಹೊಂದಿರಲಿವೆ. ಸದ್ಯ ರಾಜ್ಯದ 26 ಜಿಲ್ಲಾಸ್ಪತ್ರೆಗಳಿಗೆ ಸುಧಾರಿತ ಆ್ಯಂಬುಲೆನ್ಸ್‌ ಒದಗಿಸಲಾಗಿದ್ದು, ಉಳಿದ 39 ಪ್ರಾಥಮಿಕ ಆ್ಯಂಬುಲೆನ್ಸ್‌ಗಳನ್ನು 20 ಜಿಲ್ಲೆಗಳ 39 ತಾಲೂಕು ಆಸ್ಪತ್ರೆಗಳಿಗೆ ನೀಡಲಾಗಿದೆ.

ಟಾಪ್ ನ್ಯೂಸ್

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Garlic2

Smuggling Garlic: ಭಾರತಕ್ಕೆ ನಿಷೇಧಿತ ಚೀನಿ ಬೆಳ್ಳುಳ್ಳಿ ಪ್ರವೇಶ!

Munirathna

Legal Action: ಮುನಿರತ್ನ ವಿಧಾನಸಭೆ ಸದಸ್ಯತ್ವ ಅಮಾನತು?

BJP-Meeting

By Election: ಚನ್ನಪಟ್ಟಣ ಬಿಜೆಪಿಗೆ ಕೇಳಲು ಕೋರ್‌ಕಮಿಟಿ ಸೂತ್ರ!

Udupi: ಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಈ ಸರ್ವೀಸ್‌ ರಸ್ತೆಗಳೆಂಬ ನಿತ್ಯ ತಮಾಷೆ !

Udupi: ಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಈ ಸರ್ವೀಸ್‌ ರಸ್ತೆಗಳೆಂಬ ನಿತ್ಯ ತಮಾಷೆ !

Murder-Represent

Bengaluru: ಅಕ್ರಮ ಸಂಬಂಧವೇ ನೇಪಾಲಿ ಮಹಿಳೆಯ ಕೊಲೆಗೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Munirathna

Legal Action: ಮುನಿರತ್ನ ವಿಧಾನಸಭೆ ಸದಸ್ಯತ್ವ ಅಮಾನತು?

BJP-Meeting

By Election: ಚನ್ನಪಟ್ಟಣ ಬಿಜೆಪಿಗೆ ಕೇಳಲು ಕೋರ್‌ಕಮಿಟಿ ಸೂತ್ರ!

ಇನ್ನು ಮುಂದೆ ಶನಿವಾರ, ರವಿವಾರವೂ ಉಪನೋಂದಣಿ ಕಚೇರಿ ಕಾರ್ಯಾಚರಣೆ !

Karnataka: ಇನ್ನು ಮುಂದೆ ಶನಿವಾರ, ರವಿವಾರವೂ ಉಪನೋಂದಣಿ ಕಚೇರಿ ಕಾರ್ಯಾಚರಣೆ !

High-Court

High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Garlic2

Smuggling Garlic: ಭಾರತಕ್ಕೆ ನಿಷೇಧಿತ ಚೀನಿ ಬೆಳ್ಳುಳ್ಳಿ ಪ್ರವೇಶ!

Munirathna

Legal Action: ಮುನಿರತ್ನ ವಿಧಾನಸಭೆ ಸದಸ್ಯತ್ವ ಅಮಾನತು?

BJP-Meeting

By Election: ಚನ್ನಪಟ್ಟಣ ಬಿಜೆಪಿಗೆ ಕೇಳಲು ಕೋರ್‌ಕಮಿಟಿ ಸೂತ್ರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.