![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 11, 2024, 7:42 AM IST
ಬಳ್ಳಾರಿ/ರಾಯಚೂರು/ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿ ಸಿದಂತೆ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ, ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಹಾಗೂ ಶಾಸಕರ ಆಪ್ತ ಸಹಾಯಕರು, ಮಾಧ್ಯಮ ಸಲಹೆಗಾರರ ಮನೆ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಅಗತ್ಯ ಮಾಹಿತಿಗಳನ್ನು ಕಲೆ ಹಾಕಿದ್ದಾರೆ.
ಬಳ್ಳಾರಿ, ರಾಯಚೂರಿನ ಶಾಸಕರ ನಿವಾಸಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಸುದೀರ್ಘ 12 ಗಂಟೆ ಕಾಲ ತಪಾಸಣೆ ನಡೆಸಿದೆ. ಅನಂತರ ಶಾಸಕರ ಆಪ್ತರನ್ನೂ ವಿಚಾರಣೆ ಮಾಡಿ ಕೆಲ ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದಿದ್ದಾರೆ.
ಬಳ್ಳಾರಿ ನಗರದ ನೆಹರೂ ಕಾಲೋನಿಯ ಶಾಸಕ ನಾಗೇಂದ್ರ ಮನೆಗೆ ಬೆಂಗಳೂರಿನ 8 ಮಂದಿ ಇಡಿ ಅಧಿಕಾರಿಗಳ ತಂಡ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು, ಮನೆಯಲ್ಲಿ ಯಾರೂ ಇಲ್ಲದ ಕಾರಣ, ಮನೆಯಲ್ಲಿರುವ ಸಿಬಂದಿ ಮೂಲಕ ಮಾಹಿತಿ ಪಡೆದಿದ್ದಾರೆ.
ಅನಂತರ ಶಾಸಕ ನಾಗೇಂದ್ರರ ಆಪ್ತ ಸಹಾಯಕ (ಸರಕಾರಿ ನೌಕರ) ಚೇತನ್ರನ್ನು ಕರೆಯಿಸಿ ಮಾಹಿತಿ ಪಡೆದಿದ್ದಾರೆ. ನಾಗೇಂದ್ರ ಅವರ ಹಲವು ಆಪ್ತರು ಈಗಾಗಲೇ ಬೆಂಗಳೂರು ತಲುಪಿದ್ದಾರೆ ಎನ್ನಲಾಗುತ್ತಿದ್ದು, ಇರುವ ಆಪ್ತ ಸಹಾಯಕರನ್ನು ಕರೆದು ವಿಚಾರಣೆ ನಡೆಸಿ ಅವರಿಂದಲೇ ಮಾಹಿತಿ ಕಲೆ ಹಾಕಿದ್ದಾರೆ. ಶಾಸಕ ನಾಗೇಂದ್ರರ ಆಪ್ತ ಸಹಾಯಕ ಚೇತನ್ ಬಳಿಯಿದ್ದ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ಇವು ಹಲವರ ಸಹಿಗಳಿರುವ ದಾಖಲೆ ಪತ್ರಗಳು ಎನ್ನಲಾಗುತ್ತಿದೆ.
ಆಪ್ತರಲ್ಲಿ ಹೆಚ್ಚಿದ ಆತಂಕ
ಶಾಸಕ ನಾಗೇಂದ್ರ ಆಪ್ತ ಸಹಾಯಕ ಚೇತನ್ ವಿಚಾರಣೆ ಬೆನ್ನಲ್ಲೇ ನಾಗೇಂದ್ರ ಆಪ್ತರಲ್ಲಿ ಆತಂಕ ಹೆಚ್ಚಾಗಿದೆ. ಈ ಪೈಕಿ ಕೆಲ ಆಪ್ತರಿಗೆ ಇಡಿ ಅಧಿಕಾರಿಗಳು ಕರೆ ಮಾಡಿದಾಗ ಅವರು ಬಳ್ಳಾರಿಯಲ್ಲಿ ಇಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ನೀವು ಇಲ್ಲಿಗೆ ಬರದಿದ್ದಲ್ಲಿ ನೋಟಿಸ್ ನೀಡಿ ಬೆಂಗಳೂರಿಗೆ ಕರೆಸುತ್ತೇವೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈ ಮಧ್ಯೆ ನಾಗೇಂದ್ರ ಅವರ ಮಾಧ್ಯಮ ಸಲಹೆಗಾರ ಎಸ್. ನಾಗರಾಜ್ ಎನ್ನುವವರನ್ನು ನಿವಾಸಕ್ಕೆ ಕರೆಸಿದ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.
ಮಾಜಿ ಸಚಿವರನ್ನು ಬ್ಯಾಂಕ್ಗೆ ಕರೆದೊಯ್ದ ಇಡಿ
ಬೆಂಗಳೂರಿನ ಡಾಲರ್ಸ್ ಕಾಲನಿಯ ನಾಗೇಂದ್ರ ಮನೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಮಾಜಿ ಸಚಿವರು ಬಳಸುತ್ತಿದ್ದ ಮೊಬೈಲ್, ಕೆಲವು ಕಾಗದ ಪತ್ರ, ಅವರ ಬ್ಯಾಂಕ್ ಖಾತೆಗಳ ದಾಖಲೆ ಪಡೆದು ಪರಿಶೀಲಿಸಲಾಗಿದೆ. ಅವರಿಂದ ಪ್ರಾಥಮಿಕ ಮಾಹಿತಿ ಕಲೆ ಹಾಕಿದ ಇಡಿ ಅಧಿಕಾರಿಗಳು, ಮತ್ತಿಕೆರೆಯ ಐಸಿಐಸಿಐ ಬ್ಯಾಂಕ್ಗೆ ಅವರನ್ನು ಕರೆದೊಯ್ದು ಬ್ಯಾಂಕ್ ವ್ಯವಹಾರದ ಕುರಿತು ಹೇಳಿಕೆ ಪಡೆದಿದ್ದಾರೆ. ಇನ್ನು ಮಹರ್ಷಿ ವಾಲಿ¾ಕಿ ಅಭಿವೃದ್ದಿ ನಿಗಮದಲ್ಲಿ ಕೆಲಸ ಮಾಡುವ ಸಿಬ್ಬಂದಿಯ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.