Valmiki Nigama Scam: ಗದ್ದಲದಲ್ಲೇ ಪರಿಷತ್‌ನಲ್ಲಿ ಸಿಎಂ ಉತ್ತರ

ವಿಪಕ್ಷಗಳ ಗಲಾಟೆ ಜೋರಾಗುತ್ತಿದ್ದಂತೆ ಸದನ ಮುಂದೂಡಿಕೆ, ಲಿಖಿತ ಉತ್ತರದ ಅರ್ಧ ಭಾಗ ಓದಿ ಉಳಿದಿದ್ದು ಸದನದ ಮುಂದೆ ಮಂಡಿಸಿದ ಸಿಎಂ

Team Udayavani, Jul 23, 2024, 6:45 AM IST

Vidhana-parisaht

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣದ ಮೇಲಿನ ಚರ್ಚೆ ಹಾಗೂ ಅದಕ್ಕೆ ಮುಖ್ಯಮಂತ್ರಿಯವರ ಉತ್ತರದ ವಿಚಾರದಲ್ಲಿ ವಿಧಾನಸಭೆಯಲ್ಲಿ ನಡೆದ ಪ್ರಹಸನಕ್ಕೆ ವಿಧಾನಪರಿಷತ್ತೂ ಸೋಮವಾರ ಸಾಕ್ಷಿಯಾಯಿತು.

ಗಲಾಟೆಯ ಮಧ್ಯೆಯೇ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ ವಿಪಕ್ಷಗಳ ವಿರುದ್ಧ ಹರಿಹಾಯ್ದರು. ಜತೆಗೆ ಪರಿಶಿಷ್ಟ ಜಾತಿ-ಪಂಗಡದವರ ಅಭಿವೃದ್ಧಿಗೆ ಹೊಸದಾಗಿ ಕಾಯ್ದೆಗಳನ್ನು ತಂದವರು ನಾವು, ಇರುವ ಕಾನೂನುಗಳಿಗೆ ತಿದ್ದಪಡಿ ತಂದವರು ನಾವು, ಕಾರ್ಯಕ್ರಮ-ಯೋಜನೆಗಳನ್ನು ಜಾರಿಗೆ ತಂದವರು ನಾವು. ದಲಿತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದ, ಆರಂಭದಿಂದಲೂ ದಲಿತ-ದಮನಿತ ಸಮುದಾಯಗಳ ವಿರೋಧಿಯಾಗಿರುವ ಬಿಜೆಪಿಯಿಂದ ದಲಿತರ ಕಾಳಜಿಯ ಬಗ್ಗೆ ನಾವು ಪಾಠ ಕಲಿಯಬೇಕಾಗಿಲ್ಲ ಎಂದು ಸಮರ್ಥನೆ ನೀಡಿದರು.

ಗಲಾಟೆ, ಗದ್ದಲ, ಸದನದ ಬಾವಿಗಿಳಿದು ಪ್ರತಿಭಟನೆ, ಕಲಾಪ ಮುಂದೂಡಿಕೆ ನಡೆದು ಮುಖ್ಯಮಂತ್ರಿಯವರು ವಿಧಾನಸಭೆಯಲ್ಲಿ ಎರಡನೇ ದಿನ ಉತ್ತರ ನೀಡಿದರು. ಆದರೆ ವಿಧಾನಪರಿಷತ್ತಿನಲ್ಲಿ ಮೊದಲು ಉತ್ತರ ಕೊಟ್ಟು, ಅನಂತರ ಲಿಖೀತ ಉತ್ತರ ಓದಿ, ಕೊನೆಗೆ ವಿಪಕ್ಷಗಳ ಗಲಾಟೆ ಜೋರಾಗುತ್ತಿದ್ದಂತೆ ಇನ್ನುಳಿದ ಲಿಖೀತ ಉತ್ತರವನ್ನು ಸದನದ ಮುಂದೆ ಮಂಡಿಸಿದರು.

ಮೇಲ್ಮನೆಯಲ್ಲಿ ವಿಪಕ್ಷಗಳ ಚರ್ಚೆಗೆ ಮುಖ್ಯಮಂತ್ರಿಯವರು ಸೋಮವಾರ ಉತ್ತರ ನೀಡಲು ಸದನಕ್ಕೆ ಬಂದರು. ಪ್ರಶ್ನೋತ್ತರ ಬಳಿಕ ಅವರು ಸರಕಾರದ ಪರವಾಗಿ ಉತ್ತರಿಸಲು ಎದ್ದು ನಿಂತರು. ಆಗ ವಿಪಕ್ಷದವರು ಗಲಾಟೆ ಎಬ್ಬಿಸಿದರು. ಆಡಳಿತ ಪಕ್ಷಗಳ ಸದಸ್ಯರೂ ತಿರುಗೇಟು ಕೊಟ್ಟರು. ಈ ಗಲಾಟೆಯ ನಡುವೆ ಸಿಎಂ ಉತ್ತರ ಆರಂಭಿಸಿದರು. ಲಿಖಿತ ಉತ್ತರ ಓದಲಾರಂಭಿಸಿದಾಗ ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟಿಸಿದರು.

ಗದ್ದಲ, ಧಿಕ್ಕಾರ ಘೋಷಣೆ ನಡುವೆ ಅರ್ಧ ಉತ್ತರ ಓದಿದಿ ಸಿಎಂ ಅದನ್ನು ಮೊಟಕುಗೊಳಿಸಿ ಇನ್ನುಳಿದ ಉತ್ತರವನ್ನು ಸದನದ ಮುಂದೆ ಮಂಡಿಸಿದರು. ಗಲಾಟೆ ಜೋರಾಗುತ್ತಿದ್ದಂತೆ ಸಭಾಪತಿಯವರು ಸದನವನ್ನು ಸ್ವಲ್ಪ ಕಾಲ ಮುಂದೂಡಿದರು. ಮತ್ತೆ ಕಲಾಪ ಆರಂಭಗೊಂಡಾಗ ಸದನ ಕ್ರಮಬದ್ಧವಿಲ್ಲದಿದ್ದಾಗ ಸಿಎಂ ಉತ್ತರ ಕೊಟ್ಟಿದ್ದು ಸರಿಯಲ್ಲ ಎಂದು ವಿಪಕ್ಷಗಳು ತಗಾದೆ ತೆಗೆದವು. ಕಲಾಪ ತಹಬದಿಗೆ ತರಲು ನಾನು ಸಾಕಷ್ಟು ಪ್ರಯತ್ನಪಟ್ಟೆ, ಅದು ಸಾಧ್ಯವಾಗದಿದ್ದಾಗ ಲಿಖೀತ ಉತ್ತರ ಓದುವ ಸಂದರ್ಭ ಸೃಷ್ಟಿಯಾಯಿತು. ಈಗ ಸಿಎಂ ಉತ್ತರ ಕೊಟ್ಟಾಗಿದೆ ಎಂದ ಸಭಾಪತಿ ಬಸವರಾಜ ಹೊರಟ್ಟಿ ಸದನವನ್ನು ಭೋಜನ ವಿರಾಮಕ್ಕೆ ಮುಂದೂಡಿದರು.

ನಾವು ಅಷ್ಟೊಂದು ದಡ್ಡರಾ?: ಕೇಶವಪ್ರಸಾದ್‌
ಸಂವಿಧಾನ ರಚನೆ ಮಂಡಳಿ ಸಭೆಯಲ್ಲಿ 1949ರ ನ. 25ರಂದು ಡಾ| ಬಿ.ಆರ್‌. ಅಂಬೇಡ್ಕರ್‌ ಅವರು ಮಾಡಿದ ಭಾಷಣ ಈ ಬಿಜೆಪಿಯವರಿಗೆ ಅರ್ಥ ಆಗುತ್ತದೋ ಗೊತ್ತಿಲ್ಲ ಎಂದು ಸಿಎಂ ಹೇಳಿದಾಗ, ಯಾಕೆ ನಾವು ಅಷ್ಟೊಂದು ದಡ್ಡರಾ ಎಂದು ಬಿಜೆಪಿಯ ಕೇಶವ ಪ್ರಸಾದ್‌ ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಹೇಳುತ್ತಿರುವುದೆಲ್ಲ ಸುಳ್ಳು, ಹಗರಣದ ಬಗ್ಗೆ ಉತ್ತರ ಕೊಡುವುದು ಬಿಟ್ಟು ರಾಜಕೀಯ ಭಾಷಣ ಮಾಡುತ್ತಿದ್ದಾರೆ. ವಿಷಯಾಂತರ ಮಾಡಿ, ಬಿಜೆಪಿಯವರು ದಲಿತ ವಿರೋಧಿಗಳು ಎಂದು ಬಿಂಬಿಸಲು ಹೊರಟಿದ್ದಾರೆ, ಇದು ಸಹಿಸುವುದಿಲ್ಲ ಎಂದು ಬಿಜೆಪಿಯ ರವಿಕುಮಾರ್‌, ಸಿ.ಟಿ. ರವಿ ವಾಗ್ಧಾಳಿ ನಡೆಸಿದರು. ಈ ವೇಳೆ ಸಿ.ಟಿ. ರವಿ ಮತ್ತು ರವಿ ಕುಮಾರ್‌ ನಡುವೆ ವಿಪಕ್ಷ ನಾಯಕ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದೆ. ಅದಕ್ಕಾಗಿ ಪದೇಪದೆ ಎದ್ದು ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಸದಸ್ಯರು ಕಾಲೆಳೆದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.