![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jul 16, 2024, 7:30 AM IST
ಬೆಂಗಳೂರು: ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.)ದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಪ್ರಕರಣದ ಉರುಳು ಮತ್ತಷ್ಟು ಬಿಗಿಯಾಗುವ ಸಾಧ್ಯತೆಯಿದೆ. ನಾಗೇಂದ್ರ ಚುನಾವಣ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದ ಆಸ್ತಿ ಮೊತ್ತ ಹಾಗೂ ಆದಾಯವನ್ನು ಇ.ಡಿ. ಅಧಿಕಾರಿಗಳು ತಾಳೆ ಹಾಕಲು ಆರಂಭಿಸಿದ್ದಾರೆ.
ಇ.ಡಿ. ಅಧಿಕಾರಿಗಳು ಇದುವರೆಗೆ ನಿಗಮದ ಬ್ಯಾಂಕ್ ಖಾತೆಯಿಂದ ಹೈದರಾಬಾದ್ ಹಾಗೂ ರಾಜ್ಯದ ಬೇರೆ ಬೇರೆ ಖಾಸಗಿ ಸಂಸ್ಥೆಗಳ ಖಾತೆಗಳಿಗೆ ವರ್ಗಾವಣೆಯಾದ ಹಣದ ಬಗ್ಗೆಯಷ್ಟೇ ಮಾಹಿತಿ ಸಂಗ್ರಹಿಸುತ್ತಿದ್ದರು. ಆದರೆ ಈಗ ಮಾಜಿ ಸಚಿವ ನಾಗೇಂದ್ರ ಅವರ ಆದಾಯ ಮೂಲ ಕೆದಕಲು ಆರಂಭಿಸಿದ್ದಾರೆ.
ಇತ್ತೀಚೆಗೆ ನಾಗೇಂದ್ರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿದಾಗ ಕೆಲವು ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದ್ದವು. ಆದರೆ ಪ್ರಾಥಮಿಕ ಮಾಹಿತಿ ಪ್ರಕಾರ ಆ ಆಸ್ತಿ ಪತ್ರಗಳು ಹಾಗೂ ಹೂಡಿಕೆ ದಾಖಲೆಗಳು ಬೇನಾಮಿ ಎಂದು ಹೇಳಲಾಗುತ್ತಿದ್ದು, ಮತ್ತೂಂದೆಡೆ ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಆಸ್ತಿ ಪ್ರಮಾಣ ಪತ್ರದಲ್ಲಿ ಈ ಆಸ್ತಿಗಳ ಬಗ್ಗೆ ಉಲ್ಲೇಖೀಸಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣ ಆಯೋಗದಿಂದ ನಾಗೇಂದ್ರ ಸಲ್ಲಿಸಿದ್ದ ಪ್ರಮಾಣಪತ್ರವನ್ನು ಪಡೆದುಕೊಂಡಿರುವ ಇ.ಡಿ. ಅಧಿಕಾರಿಗಳು ಈ ಆಧಾರದ ಮೇಲೆ ವಿಚಾರಣೆ ಮುಂದುವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆದಾಯ ಹಾಗೂ ಆಸ್ತಿ ವಿವರ ತಾಳೆ
ನಾಗೇಂದ್ರ ಈ ಹಿಂದೆ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿದ್ದರು. ಜತೆಗೆ ಲೋಕಾಯುಕ್ತ ಮತ್ತು ಸಿಬಿಐ, ಆದಾಯ ತೆರಿಗೆ ಇಲಾಖೆ, ಇ.ಡಿ.ಯಿಂದಲೂ ವಿಚಾರಣೆ ಎದುರಿಸಿದ್ದರು. ಈ ನಡುವೆ ಪ್ರತೀ ವರ್ಷ ತಮ್ಮ ಆದಾಯ ಹಾಗೂ ಆಸ್ತಿಯನ್ನು ಒಂದಲ್ಲ ಒಂದು ರೀತಿಯಲ್ಲಿ ಹೆಚ್ಚಿಸಿಕೊಳ್ಳುತ್ತಿರುವ ನಾಗೇಂದ್ರ ಕಳೆದ ಒಂದು ವರ್ಷದಲ್ಲಿ ಸಂಪಾದಿಸಿರುವ ಆಸ್ತಿ ಎಷ್ಟು, ಚುನಾವಣ ಪ್ರಮಾಣ ಪತ್ರದಲ್ಲಿ ಉಲ್ಲೇಖೀಸಿರುವ ಆಸ್ತಿ ಮೌಲ್ಯ ಎಷ್ಟು ಎಂಬ ಬಗ್ಗೆ ಲೆಕ್ಕಾಧಿಕಾರಿಗಳ ಮೂಲಕ ಇ.ಡಿ. ಮಾಹಿತಿ ಸಂಗ್ರಹಿಸುತ್ತಿದೆ. 2023ರ ವಿಧಾನಸಭಾ ಚುನಾವಣ ಪೂರ್ವ ಪ್ರಮಾಣ ಪತ್ರದಲ್ಲಿ ನಾಗೇಂದ್ರ ಘೋಷಿಸಿಕೊಂಡಿದ್ದ ಆಸ್ತಿ ವಿವರ ಹಾಗೂ ಪ್ರಸ್ತುತ ಅವರ ಆದಾಯ, ಆಸ್ತಿ ವಿವರವನ್ನು ಇ.ಡಿ ಅಧಿಕಾರಿಗಳು ತಾಳೆ ಹಾಕಲಾರಂಭಿಸಿದ್ದಾರೆ.
17.20 ಕೋಟಿ ರೂ. ಆಸ್ತಿ!
2023ರ ವಿಧಾನಸಭಾ ಚುನಾವಣೆಗಾಗಿ ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ನಗದು, ಚಿನ್ನಾಭರಣ, ನಿವೇಶನ ಸೇರಿ ಒಟ್ಟು 17.20 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಯನ್ನು ನಾಗೇಂದ್ರ ಘೋಷಿಸಿದ್ದರು. ಬ್ಯಾಂಕ್ ಖಾತೆ, ಇನ್ಶೂರೆನ್ಸ್ ಪಾಲಿಸಿ, ಖಾಸಗಿ ಕಂಪೆನಿಯಲ್ಲಿ ಹೂಡಿಕೆ, ವಾಹನ, ಚಿನ್ನಾಭರಣ ಸೇರಿ 12.35 ಕೋಟಿ ರೂ. ಮೌಲ್ಯದ ಚರಾಸ್ತಿ, ಒಟ್ಟು 4.88 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಘೋಷಿಸಿದ್ದರು. ಚುನಾವಣ ಪ್ರಮಾಣ ಪತ್ರದ ಪ್ರಕಾರ ಒಟ್ಟು 17.20 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಯನ್ನು ಹೊಂದಿರುವುದಾಗಿ ಮಾಹಿತಿ ನೀಡಿದ್ದರು.
ಸದ್ಯ ಇ.ಡಿ. ಅಧಿಕಾರಿಗಳ ಶೋಧ ಸಂದರ್ಭದಲ್ಲಿ ದೊರೆತಿರುವ ದಾಖಲೆಗಳ ಪ್ರಕಾರ ನಾಗೇಂದ್ರ ಅವರ ಆಸ್ತಿಯ ವಿವರ, ಆದಾಯದ ಮೂಲಗಳಲ್ಲಿ ಕೆಲವು ವ್ಯತ್ಯಾಸ ಕಂಡುಬಂದಿದೆ ಎನ್ನಲಾಗಿದೆ. ಒಂದು ವೇಳೆ ತನಿಖೆ ವೇಳೆ ದೊಡ್ಡ ಪ್ರಮಾಣದ ವ್ಯತ್ಯಾಸ ಕಂಡು ಬಂದರೆ ನಾಗೇಂದ್ರಗೆ ಪ್ರಕರಣ ಮತ್ತಷ್ಟು ಕಗ್ಗಂಟಾಗಲಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.