Valmiki Nigama Scam: ಶಾಸಕ ಬಸವನಗೌಡ ದದ್ದಲ್‌ ಬಂಧನ ಶೀಘ್ರ?

ದದ್ದಲ್‌ ಮೇಲೆ ಕಣ್ಣಿಟ್ಟಿರುವ ಇಡಿ ಅಧಿಕಾರಿಗಳು

Team Udayavani, Jul 14, 2024, 7:30 AM IST

Basanagowda-Daddal

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಗರಣದಲ್ಲಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್‌ಗೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಶೋಧ ನಡೆಸುತ್ತಿದ್ದು, ಬಂಧನದ ಭೀತಿ ಎದುರಾಗಿದೆ.

ನಿಗಮದ ಹಗರಣದಲ್ಲಿ ಅವರ ಪಾತ್ರವಿರುವ ಬಗ್ಗೆ ಇ.ಡಿ.ಗೆ ಸುಳಿವು ಸಿಕ್ಕಿದೆ ಎಂದು ತಿಳಿದು ಬಂದಿದೆ. ಬುಧವಾರ ದದ್ದಲ್‌ ಅವರ ಯಲಹಂಕದಲ್ಲಿರುವ ನಿವಾಸ, ರಾಯಚೂರಿನ ನಿವಾಸ ಸೇರಿ ವಿವಿಧೆಡೆ ಇಡಿ ದಾಳಿ ನಡೆಸಿ ದಾಖಲೆ ಕಲೆ ಹಾಕಿತ್ತು. ಶುಕ್ರವಾರ ಇಡಿ ಅಧಿಕಾರಿಗಳು ದಾಳಿ ಮುಂದುವರಿಸಿದ್ದರೂ ಅವರ ಕಣ್ತಪ್ಪಿಸಿ ದದ್ದಲ್‌ ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದರು. ಇದೀಗ ಮತ್ತೆ ಇಡಿ ಅಧಿಕಾರಿಗಳು ದದ್ದಲ್‌ ಮೇಲೆ ಕಣ್ಣಿಟ್ಟಿದ್ದು, ನಿಗಮದಲ್ಲಿ ನಡೆದಿರುವ ಅಕ್ರಮದಲ್ಲಿ ದದ್ದಲ್‌ಗ‌ೂ ಪಾಲು ಹೋಗಿದೆಯಾ ಎಂಬುದಕ್ಕೆ ಪುರಾವೆಗಳನ್ನು ಹುಡುಕುತ್ತಿದ್ದಾರೆ.

ಗೌಪ್ಯ ಸ್ಥಳದಲ್ಲಿ?
ಬಂಧನ ಭೀತಿ ಇರುವ ಹಿನ್ನೆಲೆಯಲ್ಲೇ ಶುಕ್ರವಾರ ದದ್ದಲ್‌ ಎಸ್‌ಐಟಿ ವಿಚಾರಣೆಗೆ ಹಾಜರಾಗಿರುವ ಅನುಮಾನ ಹುಟ್ಟಿಕೊಂಡಿದೆ. ಎಸ್‌ಐಟಿ ವಿಚಾರಣೆ ಬಳಿಕ ದದ್ದಲ್‌ ಗೌಪ್ಯ ಸ್ಥಳಕ್ಕೆ ತೆರಳಿ ಇ.ಡಿ. ಕಣ್ಣಿಗೆ ಬೀಳದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ ಎನ್ನಲಾಗಿದೆ.

ತನಿಖೆ ಹೊತ್ತಲ್ಲೇ ದದ್ದಲ್‌ ಪುತ್ರನ ಆಸ್ತಿ ಸದ್ದು
ರಾಯಚೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆ ನಡೆಯುತ್ತಿರುವಾಗಲೇ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್‌ ಪುತ್ರ ತ್ರಿಶೂಲ್‌ ಕುಮಾರ ಹೆಸರಲ್ಲಿ ಆಸ್ತಿ ನೋಂದಣಿಯಾಗಿರುವುದು ಬೆಳಕಿಗೆ ಬಂದಿದೆ.

ಇ.ಡಿ. ಅಧಿಕಾರಿಗಳು 2 ದಿನ ದದ್ದಲ್‌ ಹಾಗೂ ಮಾಜಿ ಆಪ್ತ ಸಹಾಯಕ ಪಂಪಣ್ಣ ಅವರ ಮನೆಯಲ್ಲಿ ಶೋಧ ನಡೆಸಿದ್ದರು. ಈ ವೇಳೆ ಕೆಲವೊಂದು ದಾಖಲೆಗಳ ಜತೆಗೆ ಆಸ್ತಿ ಪತ್ರಗಳು ಸಿಕ್ಕಿವೆ ಎನ್ನಲಾಗುತ್ತಿದೆ. ಜೂ. 27ರಂದು ದದ್ದಲ್‌ ಪುತ್ರ ತ್ರಿಶೂಲ್‌ ಹೆಸರಲ್ಲಿ 4.31 ಎಕರೆ ಜಮೀನು ಮ್ಯುಟೇಶನ್‌ ಆಗಿರುವ ದಾಖಲೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಸಿರವಾರ ತಾಲೂಕಿನ ಗಣದಿನ್ನಿ ಗ್ರಾಮದ ಸೀಮೆಯಲ್ಲಿ 4.31 ಎಕರೆ ಜಮೀನು ಪುತ್ರನ ಹೆಸರಲ್ಲಿ ನೋಂದಣಿಯಾಗಿದೆ. ತ್ರಿಶೂಲ್‌ ಇನ್ನೂ ಎಂಬಿಬಿಎಸ್‌ ಅಧ್ಯಯನ ಮಾಡುತ್ತಿದ್ದಾರೆ.

ವೀರಯ್ಯ ಬಂಧನವೂ ಆಗಿಲ್ಲವೇ: ಸಿದ್ದು ಮರುಪ್ರಶ್ನೆ !
ಕೆಪಿಸಿಸಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿ ಹೊರಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ತಡೆದು ನಿಲ್ಲಿಸಿದ ಮಾಧ್ಯಮದವರು ನಾಗೇಂದ್ರ ಬಂಧನದ ಬಗ್ಗೆ ಕೇಳಿದಾಗ, ಬರೀ ನಾಗೇಂದ್ರ ಬಗ್ಗೆ ಕೇಳುತ್ತೀರಲಿÅà? ಡಿ.ಎಸ್‌. ವೀರಯ್ಯ ಬಂಧನ ಆಗಿಲ್ಲವೇ? ಅದರ ಬಗ್ಗೆ ಕೇಳುವುದೇ ಇಲ್ಲ. ವೀರಯ್ಯ ಬಂಧನದ ಬಗ್ಗೆ ಬಿಜೆಪಿಯವರು ಏನು ಹೇಳುತ್ತಾರೆ? ಅವರ್ಯಾರು ಏಕೆ ಮಾತನಾಡುತ್ತಿಲ್ಲ ಎಂದು ಮರುಪ್ರಶ್ನೆ ಹಾಕಿದರು. ಮುಡಾ ಹಗರಣದ ಬಗ್ಗೆ ಪ್ರಶ್ನಿಸುತ್ತಿದ್ದಂತೆ ಕೈ ಅಲ್ಲಾಡಿಸುತ್ತಾ ಹೊರಟೇ ಬಿಟ್ಟರು!

“ನಾಗೇಂದ್ರ ಬಂಧನ ಆಗಿದೆ. ಅದಕ್ಕೆ ನಾನೇನು ಹೇಳಲಿ? ಸಿಬಿಐ ಆಗಲೀ, ಇಡಿ ಆಗಲೀ ಅಥವಾ ಯಾವುದೇ ತನಿಖಾ ಸಂಸ್ಥೆಗಳಾಗಲೀ ರಾಜಕೀಯದ ಅಸ್ತ್ರ ಆಗಬಾರದು ಎಂಬುದು ಮೊದಲಿ ನಿಂದಲೂ ನಮ್ಮ ಅಭಿಪ್ರಾಯ . ಜಾರಿ ನಿರ್ದೇಶನಾಲಯಕ್ಕೆ ಯಾವ ಮಾಹಿತಿ ಸಿಕ್ಕಿದೆಯೋ ಅದರ ಆಧಾರದ ಮೇಲೆ ಬಂಧಿಸಿದ್ದಾರೆ. ಇದು ಕಾನೂನು ಪ್ರಕಾರ ನಡೆಯುವ ಪ್ರಕ್ರಿಯೆ.”  -ಡಾ.ಜಿ. ಪರಮೇಶ್ವರ್‌, ಗೃಹಸಚಿವ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.